Home namma chikmagalur chikamagalur ಕಾಂಗ್ರೆಸ್ ಸರ್ಕಾರದ ಸಂಪುಟ ವಿಸ್ತರಣೆ ಭ್ರಷ್ಠಚಾರಕ್ಕೆ ಬಹುಮಾನ
chikamagalurHomeLatest Newsnamma chikmagalur

ಕಾಂಗ್ರೆಸ್ ಸರ್ಕಾರದ ಸಂಪುಟ ವಿಸ್ತರಣೆ ಭ್ರಷ್ಠಚಾರಕ್ಕೆ ಬಹುಮಾನ

Share
Share

ಚಿಕ್ಕಮಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ವಿಸ್ತರಣೆ ಚಿಕ್ಕಮಗಳೂರು ಜಿಲ್ಲೆಗೆ ಸಂಪೂರ್ಣ ನಿರಾಸೆ ಮೂಡಿಸಿದ್ದು, ಭ್ರ?ಚಾರ, ಪ್ರಾದೇಶಿಕ ಅಸಮತೋಲನ ಹಾಗೂ ಮಹಿಳಾ ಪ್ರತಿನಿಧಿತ್ವದ ಕೊರತೆಯಿಂದ ಕೂಡಿದ ವಿಸ್ತರಣೆಯಾಗಿದೆ ಎಂದು ವಿಧಾನ ಪರಿ?ತ್ ಸದಸ್ಯ ಡಾ. ರವಿ ಸಿ.ಟಿ ಆರೋಪಿಸಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿ ಪಾಂಚಜನ್ಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಐದು ಶಾಸಕರು ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದರೂ ಒಬ್ಬರಿಗೂ ಸಚಿವ ಸ್ಥಾನ ನೀಡದಿರುವುದು ಜಿಲ್ಲೆಯ ಜನತೆಗೆ ಮಾಡಿದ ಅಪಮಾನವಾಗಿದೆ ಎಂದು ಹೇಳಿದರು.

ಒಂದು ಕಾಲದಲ್ಲಿ ಮೂರು ಕ್ಯಾಬಿನೆಟ್ ಸಚಿವರು ಹಾಗೂ ಹಲವು ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ಹೊಂದಿದ್ದ ನಾಯಕರು ಪ್ರತಿನಿಧಿಸುತ್ತಿದ್ದ ಚಿಕ್ಕಮಗಳೂರು ಜಿಲ್ಲೆಗೆ ಇಂದು ಸಚಿವ ಸ್ಥಾನವೇ ಇಲ್ಲದಿರುವುದು ಕಾಂಗ್ರೆಸ್ ಜಿಲ್ಲೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ.

ಗಾಯತ್ರಿ ಶಾಂತೇಗೌಡ ಅವರ ಹೆಸರನ್ನು ಸಚಿವರ ಪಟ್ಟಿಯಲ್ಲಿ ಪ್ರಕಟಿಸಿ ಬಳಿಕ ಕೈಬಿಟ್ಟಿರುವುದು ಯಾವುದೇ ರಾಜಕೀಯ ಪಕ್ಷ ಮಾಡಬಾರದ ನಡೆ. ಹೆಸರು ಘೋ?ಣೆ ಮಾಡದೇ ಇದ್ದರೆ ಇಂತಹ ಗೊಂದಲವೇ ಉಂಟಾಗುತ್ತಿರಲಿಲ್ಲ. ಸಾರ್ವಜನಿಕವಾಗಿ ಪ್ರಕಟಿಸಿ ಬಳಿಕ ಅವಕಾಶ ನಿರಾಕರಿಸಿರುವುದು ಅವರಿಗೆ ವೈಯಕ್ತಿಕ ಹಾಗೂ ರಾಜಕೀಯವಾಗಿ ನೋವುಂಟು ಮಾಡುವ ಬೆಳವಣಿಗೆಯಾಗಿದೆ ಎಂದರು.

ಸಚಿವ ಸಂಪುಟ ವಿಸ್ತರಣೆಯಲ್ಲಿ ಮಹಿಳೆಯರಿಗೆ ಅವಕಾಶ ನೀಡದಿರುವುದನ್ನು ಪ್ರಶ್ನಿಸಿದ ರವಿ ಅವರು, ಮಹಿಳಾ ಸಬಲೀಕರಣದ ಬಗ್ಗೆ ನಿರಂತರವಾಗಿ ಮಾತನಾಡುವ ಕಾಂಗ್ರೆಸ್ ತನ್ನ ಕೃತಿಯಲ್ಲಿ ಅದಕ್ಕೆ ವಿರುದ್ಧವಾಗಿ ನಡೆದುಕೊಂಡಿದೆ ಎಂದು ಆರೋಪಿಸಿದರು “ಮೈ ಲಡ್ಕಿ ಹೂಂ, ಲಡ್ ಸಕ್ತಿ ಹೂಂ” ಎಂದು ಹೇಳುವ ಪ್ರಿಯಾಂಕಾ ಗಾಂಧಿ ಇರುವ ಕಾಂಗ್ರೆಸ್, ಒಬ್ಬ ಮಹಿಳೆಗೂ ಸಚಿವ ಸ್ಥಾನ ನೀಡದಿರುವುದು ಮಾತು ಮತ್ತು ಕೃತಿಯ ನಡುವಿನ ಅಂತರವನ್ನು ತೋರಿಸುತ್ತದೆ ಎಂದು ಹೇಳಿದರು.

ಇದನ್ನು “ಯುವ ಸಚಿವ ಸಂಪುಟ” ಎಂದು ಬಿಂಬಿಸಲಾಗುತ್ತಿದೆ. ಆದರೆ ಸಚಿವರ ಸರಾಸರಿ ವಯಸ್ಸು ೬೧ ವ?ವಾಗಿದ್ದು, ಯುವ ನಾಯಕತ್ವಕ್ಕೆ ಆದ್ಯತೆ ನೀಡಲಾಗಿದೆ ಎಂಬುದು ವಾಸ್ತವಕ್ಕೆ ದೂರವಾಗಿದೆ. ಸಚಿವ ಸ್ಥಾನ ಪಡೆದಿರುವವರು ಹೆಚ್ಚಿನವರು ಹಿರಿಯ ರಾಜಕಾರಣಿಗಳ ಪುತ್ರರು ಹೊರತು ಸ್ವತಂತ್ರವಾಗಿ ನಾಯಕತ್ವ ಬೆಳೆಸಿಕೊಂಡ ಯುವಕರು ಅಲ್ಲ ಎಂದು ಟೀಕಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಉಲ್ಲೇಖ ಮಾಡಿದ ಅವರು, ಎಸ್‌ಟಿ ಸಮುದಾಯದ ಕಲ್ಯಾಣಕ್ಕಾಗಿ ಮೀಸಲಿದ್ದ ಹಣ ಕಾರು ಶೋರೂಂ, ಆಭರಣ ಮಳಿಗೆ, ವೈನ್ ಶಾಪ್ ಹಾಗೂ ಚುನಾವಣಾ ಚಟುವಟಿಕೆಗಳಿಗೆ ವರ್ಗಾವಣೆಯಾಗಿದೆ ಎಂಬ ಗಂಭೀರ ಆರೋಪಗಳಿರುವ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿರುವುದು ಭ್ರ?ಚಾರಕ್ಕೆ ಕಾಂಗ್ರೆಸ್ ನೀಡಿರುವ ಬಹುಮಾನವಾಗಿದೆ. ನಾಗೇಂದ್ರ ಅವರಿಗೆ ಯಾವುದೇ ತನಿಖಾ ಸಂಸ್ಥೆ ಕ್ಲೀನ್‌ಚಿಟ್ ನೀಡಿಲ್ಲ. ಸಿಬಿಐ ಅಥವಾ ಇಡಿ ತನಿಖೆ ಪೂರ್ಣಗೊಂಡಿಲ್ಲ. ಇಂತಹ ಸಂದರ್ಭದಲ್ಲಿ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಿರುವುದು ಸರ್ಕಾರದ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದರು.

ಚಿಕ್ಕಮಗಳೂರು ಸೇರಿದಂತೆ ಗದಗ, ಯಾದಗಿರಿ, ರಾಯಚೂರು, ವಿಜಯನಗರ, ಉತ್ತರ ಕನ್ನಡ, ಉಡುಪಿ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಪ್ರತಿನಿಧಿತ್ವ ಸಿಗದಿರುವುದರಿಂದ ಪ್ರಾದೇಶಿಕ ಅಸಮತೋಲನ ಮತ್ತ? ಹೆಚ್ಚಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಸಚಿವ ಸಂಪುಟ ವಿಸ್ತರಣೆಯ ನಂತರ ಕಾಂಗ್ರೆಸ್‌ನಲ್ಲೇ ಅಸಮಾಧಾನ ಭುಗಿಲೆದ್ದಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮಾಣವಚನ ಸಮಾರಂಭದಿಂದ ದೂರ ಉಳಿದಿರುವುದು, ಹಿರಿಯ ಶಾಸಕರು ಸಾರ್ವಜನಿಕವಾಗಿ ಅಸಮಾಧಾನ ವ್ಯಕ್ತಪಡಿಸಿರುವುದು, ಕೆಲವರು ರಾಜೀನಾಮೆ ಸಲ್ಲಿಸಿರುವುದು ಹಾಗೂ ಪಕ್ಷದ ಕಾರ್ಯಕರ್ತರೇ ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿರುವುದು ಸರ್ಕಾರದ ಒಳಗಿನ ಅಸಮಾಧಾನಕ್ಕೆ ಸಾಕ್ಷಿಯಾಗಿದೆ. ಮುಖ್ಯಮಂತ್ರಿಯವರ ಭಾವಚಿತ್ರದ ಎದುರು ಅವರದೇ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿರುವುದು ಆಡಳಿತದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ತೋರಿಸುತ್ತದೆ. ಈ ಅಸಮಾಧಾನ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ರಾಜಕೀಯ ಸಂಕ? ತರಬಹುದು ಎಂಬ ಆತಂಕವಿದೆ ಎಂದು ಹೇಳಿದರು.

ಬರುವ ವಿಧಾನಮಂಡಲ ಅಧಿವೇಶನದಲ್ಲಿ ಕೆಪಿಎಸ್‌ಸಿ ನೇಮಕಾತಿ ಅಕ್ರಮ, ಬರ ಪರಿಸ್ಥಿತಿ, ಭ್ರ?ಚಾರ ಸೇರಿದಂತೆ ಜನಪರ ವಿ?ಯಗಳನ್ನು ಬಿಜೆಪಿ ಪ್ರಮುಖವಾಗಿ ಪ್ರಸ್ತಾಪಿಸಿ ಹೋರಾಟ ನಡೆಸಲಿದೆ. ಕೆಪಿಎಸ್‌ಸಿ ನೇಮಕಾತಿಗಳಲ್ಲಿ ಭ್ರ?ಚಾರದ ಆರೋಪಗಳಿಂದ ವಿದ್ಯಾವಂತ ಯುವಕರ ವಿಶ್ವಾಸ ಕುಸಿದಿದ್ದು, ಅವರ ಪರವಾಗಿ ಧ್ವನಿಯಾಗುವುದು ಬಿಜೆಪಿಯ ಜವಾಬ್ದಾರಿಯಾಗಿದೆ ಎಂದರು. ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗಿದ್ದರೂ ಸರ್ಕಾರ ಇನ್ನೂ ಬರಪೀಡಿತ ತಾಲೂಕುಗಳನ್ನು ಘೋಷಿಸಿಲ್ಲ ಹಾಗೂ ಪರಿಹಾರ ಯೋಜನೆಗಳನ್ನು ಪ್ರಕಟಿಸಿಲ್ಲ ಎಂದು ಟೀಕಿಸಿದರು.

ಗಾಯತ್ರಿ ಶಾಂತೇಗೌಡ ಅವರ ಹೆಸರನ್ನು ಪ್ರಕಟಿಸಿ ಬಳಿಕ ಕೈಬಿಟ್ಟಿರುವ ಕ್ರಮವೇ ತಪ್ಪು. ಜಿಲ್ಲೆಯ ಐದು ಶಾಸಕರಲ್ಲಿ ಯಾರು ಯೋಗ್ಯರು, ಯಾರು ಯೋಗ್ಯರಲ್ಲ ಎಂಬ ಪ್ರಶ್ನೆ ತಮ್ಮದಲ್ಲ. ಜಿಲ್ಲೆಯ ಜನರಿಗೆ ಸಚಿವ ಸ್ಥಾನ ನೀಡಬೇಕಾಗಿತ್ತು. ಘೋಷಿಸಿ ಬಳಿಕ ಅವಕಾಶ ನಿರಾಕರಿಸಿರುವುದೇ ಪ್ರಶ್ನೆಯಾಗಿದೆ ಎಂದು ಹೇಳಿದರು.

ಖಾತೆ ಹಂಚಿಕೆ ಕುರಿತ ಅಸಮಾಧಾನವೂ ಆಡಳಿತದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಪರಿಸ್ಥಿತಿಯನ್ನು ನಿಭಾಯಿಸುವುದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಂದುಕೊಂಡ? ಸುಲಭವಲ್ಲ ಎಂದು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ನಡೆಯುತ್ತಿರುವ ನೇಮಕಾತಿ ಅಕ್ರಮಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳದಿರುವುದು ಅನುಮಾನಕ್ಕೆ ಕಾರಣವಾಗಿದೆ. ಭ್ರ?ಚಾರವನ್ನು ಬಿಜೆಪಿ ಎಂದಿಗೂ ಸಮರ್ಥಿಸಿಲ್ಲ, ಬೆಂಬಲಿಸಿಲ್ಲ. ಆದರೆ ಕಾಂಗ್ರೆಸ್ ಕ್ರಮ ಕೈಗೊಳ್ಳದೆ ಮೌನ ವಹಿಸಿರುವುದು ಅಕ್ರಮಗಳಿಗೆ ಪರೋಕ್ಷ ಬೆಂಬಲ ನೀಡಿದಂತಾಗಿದೆ. ಬಿಜೆಪಿಯ ಹೋರಾಟ ಸದನಕ್ಕೆ ಮಾತ್ರ ಸೀಮಿತವಾಗಿರುವುದಿಲ್ಲ. ಈ ಹಿಂದೆ ಪಾದಯಾತ್ರೆ, ಬೀದಿ ಹೋರಾಟ ಸೇರಿದಂತೆ ವಿವಿಧ ರೀತಿಯಲ್ಲಿ ಜನಪರ ಹೋರಾಟಗಳನ್ನು ನಡೆಸಿದ್ದೇವೆ. ಮುಂದೆಯೂ ಜನರ ಸಮಸ್ಯೆಗಳ ಪರವಾಗಿ ವಿಧಾನಮಂಡಲದ ಒಳಗೂ ಹೊರಗೂ ಹೋರಾಟ ಮುಂದುವರಿಸುತ್ತೇವೆ ಎಂದು ರವಿ ಅವರು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷರಾದ ಕೆ.ಎಸ್ ಪುಷ್ಪರಾಜು, ಜಿಲ್ಲಾ ಬಿಜೆಪಿ ವಕ್ತಾರರಾದ ಹಿರೇಮಗಳೂರು ಪುಟ್ಟಸ್ವಾಮಿ ಉಪಸ್ಥಿತರಿದ್ದರು.

Congress government’s cabinet expansion rewards corruption

 

Share

Leave a comment

Leave a Reply

Your email address will not be published. Required fields are marked *

Don't Miss

ರಾಜ್ಯ ಮಟ್ಟದ ಕಬಡ್ಡಿಯಲ್ಲಿ ಚಿಕ್ಕಮಗಳೂರು ಮಹಿಳಾ ತಂಡಕ್ಕೆ ಚಾಂಪಿಯನ್ ಪಟ್ಟ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಸಾರಿಗೆ ಸಚಿವರಾದ ಶ್ರೀ ಬೈರತಿ ಸುರೇಶ್ ಅವರ ನೇತೃತ್ವದಲ್ಲಿ ಜುಲೈ 27ರಿಂದ 29ರವರೆಗೆ ಬೆಂಗಳೂರಿನ ದೇವಸಂದ್ರದಲ್ಲಿ ನಡೆದ ರಾಜ್ಯ ಮಟ್ಟದ ಪುರುಷ ಹಾಗೂ ಮಹಿಳೆಯರ ಕಬಡ್ಡಿ ಪಂದ್ಯಾವಳಿಯಲ್ಲಿ...

ಅಂಚೆ ಮತ ಮರು ಎಣಿಕೆ ಯಥಾಸ್ಥಿತಿ ಮುಂದುವರಿಸಲು ಸೂಚನೆ

ಶೃಂಗೇರಿ: ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಯಥಾಸ್ಥಿತಿ ಮುಂದುವರಿಸಲು ಸೂಚನೆ ನೀಡಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್‌ 19ಕ್ಕೆ ಮುಂದೂಡಿಕೆ ಮಾಡಿದೆ. 2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ...

Related Articles

ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು-ಸಹಾಯಕಿಯರ ಹುದ್ದೆಗಳಿಗೆ ಅರ್ಜಿ

ಚಿಕ್ಕಮಗಳೂರು: ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು...

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75...

ಬೀರೂರಿನಲ್ಲಿ ನೋಟು ಬದಲಾವಣೆ ನೆಪದಲ್ಲಿ ₹12 ಲಕ್ಷ ವಂಚನೆ

ಚಿಕ್ಕಮಗಳೂರು: ₹500 ಮುಖಬೆಲೆಯ ನೋಟುಗಳಿಗೆ ಬದಲಾಗಿ ₹100 ಮುಖಬೆಲೆಯ ನೋಟುಗಳಲ್ಲಿ ಹೆಚ್ಚಿನ ಹಣ ನೀಡುವುದಾಗಿ ನಂಬಿಸಿ...