Home namma chikmagalur chikamagalur ಪೋಕ್ಸೋ ಪ್ರಕರಣ: ಆರೋಪಿಗೆ 7 ವರ್ಷ ಕಠಿಣ ಶಿಕ್ಷೆ, ₹45 ಸಾವಿರ ದಂಡ
chikamagalurHomeLatest Newsnamma chikmagalur

ಪೋಕ್ಸೋ ಪ್ರಕರಣ: ಆರೋಪಿಗೆ 7 ವರ್ಷ ಕಠಿಣ ಶಿಕ್ಷೆ, ₹45 ಸಾವಿರ ದಂಡ

Share
Share

ಚಿಕ್ಕಮಗಳೂರು: ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ಚಿಕ್ಕಮಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1) 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹45 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

2025ರ ಡಿಸೆಂಬರ್ 1ರಂದು ದಾಖಲಾಗಿದ್ದ ಪ್ರಕರಣದಲ್ಲಿ ಧೂಪದಖಾನ್ ಗ್ರಾಮದ ನಾಗರಾಜ (34) ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಲಂ 137(2), 127(2), 65(2) ಹಾಗೂ ಪೋಕ್ಸೋ ಕಾಯ್ದೆಯ ಕಲಂ 4 ಮತ್ತು 10ರಡಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು 2026ರ ಆಗಸ್ಟ್ 5ರಂದು ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿ ಶಿಕ್ಷೆ ಪ್ರಕಟಿಸಿದೆ.

ಇದೇ ವೇಳೆ, ಕರ್ನಾಟಕ ಸಂತ್ರಸ್ತ ಪರಿಹಾರ ಯೋಜನೆ-2011ರಡಿ ಸಂತ್ರಸ್ತ ಬಾಲಕಿಗೆ ₹1 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಪ್ರಕರಣದ ತನಿಖೆಯನ್ನು ತರೀಕೆರೆ ವೃತ್ತದ ಸಿಪಿಐ ಗಿರೀಶ್ ಬಿ.ವಿ. ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿ. ಭರತ್ ಕುಮಾರ್ ವಾದ ಮಂಡಿಸಿದ್ದರು. ತನಿಖಾ ಸಹಾಯಕರಾಗಿ ಸಿದ್ಧರಾಮಪ್ಪ ಎಸ್.ಸಿ. ಹಾಗೂ ಉಮೇಶ್ ನ್ಯಾಯಾಲಯದ ಕರ್ತವ್ಯ ನಿರ್ವಹಿಸಿದ್ದರು.

ಪ್ರಕರಣದ ತನಿಖೆ ಮತ್ತು ನ್ಯಾಯಾಲಯದ ಕಾರ್ಯವೈಖರಿಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.

POCSO case: Accused gets 7 years rigorous imprisonment

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ SIR ಪರಿಷ್ಕರಣೆಯಲ್ಲಿ 8,54,852 ನಮೂನೆಗಳ ಡಿಜಿಟಲೀಕರಣ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಕಾರ್ಯಾಲಯದ ಪತ್ರಿಕಾ ಪ್ರಕಟಣೆಯ ಪ್ರಕಾರ, ಮತಗಟ್ಟೆ ಅಧಿಕಾರಿಗಳು (BLO) ಮನೆ-ಮನೆಗೆ ಭೇಟಿ...

ಮರು ಮತ ಎಣಿಕೆಯಲ್ಲಿ ಗಾಯತ್ರಿ ಶಾಂತೇಗೌಡಗೆ 9 ಮತಗಳ ಗೆಲವು

ಚಿಕ್ಕಮಗಳೂರು:  ಚಿಕ್ಕಮಗಳೂರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದ ಮಹತ್ವದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಇಂದು ಐತಿಹಾಸಿಕ ತೀರ್ಪು ನೀಡಿದೆ. ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಅವರಿದ್ದ ಏಕಸದಸ್ಯ...

Related Articles

ಹೈಕಮಾಂಡ್ ಗೆ ನೋಟು ! ಕಾಂಗ್ರೆಸ್ ನಲ್ಲಿ ಘಾಟು ? ಫಿಕ್ಸಿಂಗ್, ಫಿಕ್ಸಿಂಗ್.

ಚಿಕ್ಕಮಗಳೂರು: ಹೈಕಮಾಂಡ್ ದೆಹಲಿಯಿಂದ ಕಳುಹಿಸಿದ ಪಟ್ಟಿಯಲ್ಲಿ ಗಾಯಿತ್ರಿ ಶಾಂತೇಗೌಡರು ಮಂತ್ರಿಯಾಗುತ್ತಾರೆ ಎಂದು ಅವರ ಅಭಿಮಾನಿಗಳು ಮತ್ತು...

ಪೆಟ್ರೋಲ್ ಬಂಕ್ ಅಳತೆಯಲ್ಲಿ ಮೋಸ ಮಾಡುತ್ತಿರುವ ಆರೋಪ

ಚಿಕ್ಕಮಗಳೂರು: ಪೆಟ್ರೋಲ್ ಬಂಕ್‌ನಲ್ಲಿ ಗ್ರಾಹಕರಿಗೆ ಅಳತೆಯಲ್ಲಿ ಮೋಸ ಮಾಡುತ್ತಿರುವ ಆರೋಪ ಚಿಕ್ಕಮಗಳೂರು ಕೆಎಸ್‌ಆರ್‌ಟಿಸಿ (KSRTC) ಬಸ್...

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಸಂಭಾವ್ಯ ಪಟ್ಟಿ ಪ್ರಕಟ

ಚಿಕ್ಕಮಗಳೂರು: ಜಿಲ್ಲಾಡಳಿತ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯವು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯ...

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ...