ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ.
ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ ನಿವಾಸಿ ಹಾಗೂ ಎಲೆಕ್ಟ್ರಿಷಿಯನ್ ಆಗಿರುವ ವೆಂಕಟೇಶ ಕೆ.ಎಂ. (40) ಅವರು ನೀಡಿದ ದೂರಿನ ಪ್ರಕಾರ, 2023ರಲ್ಲಿ ಗ್ರಾಮದ ಶಿವರಾಜ ಮತ್ತು ಅವರ ತಾಯಿ ಚಂದ್ರಮ್ಮ ಮನೆ ನಿರ್ಮಾಣಕ್ಕೆ ಸಹಾಯ ಮಾಡುವಂತೆ ಕೇಳಿದ್ದರಿಂದ ₹50 ಸಾವಿರ ಸಾಲವಾಗಿ ನೀಡಿದ್ದರು. ಬಳಿಕ ಹಲವು ಬಾರಿ ಹಣವನ್ನು ವಾಪಸ್ ಕೇಳಿದರೂ ವಿವಿಧ ಕಾರಣಗಳನ್ನು ಹೇಳಿ ನೀಡದೇ ಮುಂದೂಡುತ್ತಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಆಗಸ್ಟ್ 3ರಂದು ಸಂಜೆ ಯಗಟಿ ಗ್ರಾಮದ ಚಂದ್ರಶೇಖರ್ ಅವರ ತೋಟದಲ್ಲಿ ಮೋಟಾರ್ಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕೆಲಸ ಮಾಡುತ್ತಿದ್ದ ವೇಳೆ ಶಿವರಾಜ ಮತ್ತು ಚಂದ್ರಮ್ಮ ಹಸುಗಳನ್ನು ಮೇಯಿಸಿಕೊಂಡು ಅಲ್ಲಿಗೆ ಬಂದಿದ್ದರು. ಈ ವೇಳೆ ವೆಂಕಟೇಶ ಅವರು ಸಾಲದ ಹಣವನ್ನು ಹಿಂದಿರುಗಿಸುವಂತೆ ಕೇಳಿದ್ದಾರೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಶಿವರಾಜನು ಕೊರಳಪಟ್ಟಿ ಹಿಡಿದು “ಹಣ ಕೊಡುವುದಿಲ್ಲ, ಏನು ಮಾಡಿಕೊಳ್ಳುತ್ತೀಯೋ ಮಾಡಿಕೋ” ಎಂದು ಅವಾಚ್ಯವಾಗಿ ವರ್ತಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಳಿಕ ಚಂದ್ರಮ್ಮ ಅವರು ಕೈಯಲ್ಲಿದ್ದ ಕೋಲಿನಿಂದ ತಲೆ, ಕೈ ಹಾಗೂ ಮೈಗೆ ಹೊಡೆದಿದ್ದು, ಇಬ್ಬರೂ ಸೇರಿ ಕೆಳಗೆ ಬೀಳಿಸಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸ್ಥಳದಲ್ಲಿದ್ದ ಚಂದ್ರಪ್ಪ ಹಾಗೂ ಪಕ್ಕದ ತೋಟದ ಕುಮಾರ ಅವರು ಮಧ್ಯಪ್ರವೇಶಿಸಿ ಜಗಳ ಬಿಡಿಸಿದ್ದಾರೆ. ನಂತರ ಗಾಯಗೊಂಡ ವೆಂಕಟೇಶ ಅವರನ್ನು ಅವರ ಪತ್ನಿ ಕಲಾವತಿ ಯಗಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಚಿಕಿತ್ಸೆ ಪಡೆದ ಬಳಿಕ ಆಗಸ್ಟ್ 5ರಂದು ಯಗಟಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ದೂರಿನ ಆಧಾರದ ಮೇಲೆ ಶಿವರಾಜ ಹಾಗೂ ಚಂದ್ರಮ್ಮ ವಿರುದ್ಧ ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 90/2026 ದಾಖಲಿಸಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ (BNS) ಕಲಂ 115(2), 118(1) ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Case filed against mother and son for assaulting them for asking for loan money
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದ ಮಹತ್ವದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಇಂದು ಐತಿಹಾಸಿಕ ತೀರ್ಪು ನೀಡಿದೆ. ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಅವರಿದ್ದ ಏಕಸದಸ್ಯ...
ByN Raju Chief EditorAugust 1, 2026ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ, ಪ್ರವಾಹ ಹಾಗೂ ಭೂಕುಸಿತದ ಆತಂಕದ ಹಿನ್ನೆಲೆಯಲ್ಲಿ ಜಿಲ್ಲೆಯ ನರಸಿಂಹರಾಜಪುರ, ಶೃಂಗೇರಿ ಮತ್ತು ಕೊಪ್ಪ ತಾಲ್ಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು,...
ByN Raju Chief EditorJuly 31, 2026ಚಿಕ್ಕಮಗಳೂರು: ಪೆಟ್ರೋಲ್ ಬಂಕ್ನಲ್ಲಿ ಗ್ರಾಹಕರಿಗೆ ಅಳತೆಯಲ್ಲಿ ಮೋಸ ಮಾಡುತ್ತಿರುವ ಆರೋಪ ಚಿಕ್ಕಮಗಳೂರು ಕೆಎಸ್ಆರ್ಟಿಸಿ (KSRTC) ಬಸ್...
ByN Raju Chief EditorAugust 7, 2026ಚಿಕ್ಕಮಗಳೂರು: ಜಿಲ್ಲಾಡಳಿತ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯವು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯ...
ByN Raju Chief EditorAugust 7, 2026ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ...
ByN Raju Chief EditorAugust 6, 2026ಚಿಕ್ಕಮಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿರಿಲದಿಂದ ಚಿಕ್ಕಮಗಳೂರು ಜಿಲ್ಲೆಯ ಬೈರಾಪುರದವರೆಗಿನ ಪ್ರಸ್ತಾವಿತ ರಸ್ತೆಯನ್ನು...
ByN Raju Chief EditorAugust 6, 2026Excepteur sint occaecat cupidatat non proident
Leave a comment