Home namma chikmagalur chikamagalur ಕೊಟ್ಟಿಗೆಹಾರದಲ್ಲಿ ಭೀಕರ ಅಪಘಾತದಲ್ಲಿ ಮೂವರು ಸಾವು 
chikamagalurHomeLatest Newsnamma chikmagalur

ಕೊಟ್ಟಿಗೆಹಾರದಲ್ಲಿ ಭೀಕರ ಅಪಘಾತದಲ್ಲಿ ಮೂವರು ಸಾವು 

Share
Share

ಮೂಡಿಗೆರೆ: ತಾಲೂಕಿನ ಕೊಟ್ಟಿಗೆಹಾರದ ಪೆಟ್ರೋಲ್ ಪಂಪ್ ಮುಂಭಾಗ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರು ಹಾಗೂ ಗಾಯಗೊಂಡವರು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿವಾಸಿಗಳು ಎಂದು ತಿಳಿದುಬಂದಿದೆ. ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಗೊಂಡ ಇಬ್ಬರನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಮೇಲ್ಮಟ್ಟದ ಆಸ್ಪತ್ರೆಗೆ ರವಾನಿಸಲಾಗಿದೆ.

ಮೃತದೇಹಗಳನ್ನು ಮೂಡಿಗೆರೆಯ ಎಂ.ಜಿ.ಎಂ. ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಅಪಘಾತದ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Three killed in horrific accident in Kotteghaara

Share

Leave a comment

Leave a Reply

Your email address will not be published. Required fields are marked *

Don't Miss

ದ್ವೇಷ ಭಾಷಣಗಳ ಆಧಾರಲ್ಲಿಯೇ ಸಂಘಟನೆ ಕಟ್ಟಲು ಹೊರಟಿರುವುದು ಖಂಡನೀಯ

ಚಿಕ್ಕಮಗಳೂರು : ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಮತ್ತು ಉಡುಪಿ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ವಿಪರೀತವಾದ ದ್ವೇಷ ಭಾಷಣಗಳ ಆಧಾರಲ್ಲಿಯೇ ಸಂಘಟನೆಯನ್ನು ಕಟ್ಟಲು ಹೊರಟಿರುವುದು ಖಂಡನೀಯ ಎಂದು ಕೆ.ಪಿ.ಸಿ.ಸಿ...

ಕಾವೇರಿ ನೀರು ತಮಿಳುನಾಡಿಗೆ ಹರಿಸದಂತೆ ಒತ್ತಾಯಿಸಿ ಪ್ರತಿಭಟನೆ

ಚಿಕ್ಕಮಗಳೂರು:  ಕಾವೇರಿ ನೀರನ್ನು ನೆರೆರಾಜ್ಯ ತಮಿಳುನಾಡಿಗೆ ಹರಿಬಿಡದೇ ರಾಜ್ಯದ ಜನರಿಗೆ ಉಳಿಸಿಕೊಡಬೇಕು ಎಂದು ಆಗ್ರಹಿಸಿ ಶನಿವಾರ ಜಿಲ್ಲಾ ಕನ್ನಡಸೇನೆ ಕಾರ್ಯಕರ್ತರು ನಗರದ ಆ ಜಾದ್‌ಪಾರ್ಕ್ ವೃತ್ತದ ಸಮೀಪ ಪ್ರತಿಭಟನೆ ನಡೆಸಿ ಆಕ್ರೋಶ...

Related Articles

ಬಿಜೆಪಿ ಮುಖಂಡರಾದ ಸಿ. ಟಿ.ರವಿರವರ ಹೇಳಿಕೆ ಹಾಸ್ಯಸ್ಪದ

ಚಿಕ್ಕಮಗಳೂರು: ಜಿಲ್ಲೆಗೆ ಮಂತ್ರಿ ಸ್ಥಾನ ಡಿ.ಕೆ.ಶಿವಕುಮಾರ್ ರವರ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಿಕ್ಕಿಲ್ಲ ಎಂಬ ವಿಧಾನ ಪರಿಷತ್...

ಎಂಎಲ್‌ಸಿ ಆಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ

ಬೆಂಗಳೂರು: ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಆಯ್ಕೆಯಾದ ಕಾಂಗ್ರೆಸ್‌ನ ಎ.ವಿ. ಗಾಯತ್ರಿ ಶಾಂತೇಗೌಡ...

ನೀರಿನ ಸಮಸ್ಯೆ ತಲೆದೋರದಂತೆ ಭದ್ರಾ ಮೇಲ್ದಂಡೆ ನಾಲೆ ಮೂಲಕ ನೀರು ಹರಿಸಲು ಕ್ರಮ

ಚಿಕ್ಕಮಗಳೂರು:  ತರೀಕೆರೆ, ಕಡೂರು, ಅಜ್ಜಂಪುರ ತಾಲ್ಲೂಕಿನಲ್ಲಿ ಮಳೆ ಅಭಾವದಿಂದಾಗಿ ಬರಗಾಲದ ಸ್ಥಿತಿ ತಲೆದೋರಿದೆ. ಕುಡಿಯುವ ನೀರಿನ...

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ...