Home namma chikmagalur chikamagalur ಬೀರೂರಿನ ಫೈನಾನ್ಸ್ ಕಂಪನಿಗೆ ₹9.91 ಲಕ್ಷ ವಂಚನೆ
chikamagalurHomeLatest Newsnamma chikmagalur

ಬೀರೂರಿನ ಫೈನಾನ್ಸ್ ಕಂಪನಿಗೆ ₹9.91 ಲಕ್ಷ ವಂಚನೆ

Share
Share

ಬೀರೂರು: ಬೇರೊಬ್ಬ ವ್ಯಕ್ತಿಯಂತೆ ನಟಿಸಿ ಫೈನಾನ್ಸ್‌ನಲ್ಲಿ ಗಿರವಿ ಇಟ್ಟಿರುವ ಚಿನ್ನ ಬಿಡಿಸಿಕೊಡುವುದಾಗಿ ನಂಬಿಸಿ ನವರತ್ನ ಗೋಲ್ಡ್ ಕಂಪನಿಗೆ ₹9.91 ಲಕ್ಷ ವಂಚಿಸಿರುವ ಪ್ರಕರಣ ಬೀರೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಶಿವಮೊಗ್ಗದ ನವರತ್ನ ಗೋಲ್ಡ್ ಕಂಪನಿ ಮಾಲೀಕರಿಗೆ ಬೀರೂರಿನಿಂದ ರಾಘವೇಂದ್ರ ಎಂಬಾತ ಕರೆ ಮಾಡಿ, 101 ಗ್ರಾಂ ಚಿನ್ನವನ್ನು IIFL ಫೈನಾನ್ಸ್‌ನಲ್ಲಿ ₹9.91 ಲಕ್ಷಕ್ಕೆ ಗಿರವಿ ಇಟ್ಟಿದ್ದು, ಹಣ ಪಾವತಿಸಲು ಸಾಧ್ಯವಾಗುತ್ತಿಲ್ಲ. ಚಿನ್ನ ಬಿಡಿಸಿಕೊಂಡು, ಉಳಿದ ಹಣವನ್ನು ತನಗೆ ನೀಡುವಂತೆ ಮನವಿ ಮಾಡಿದ್ದ ಎನ್ನಲಾಗಿದೆ.

ಆತನ ಮಾತನ್ನು ನಂಬಿದ ಕಂಪನಿ ಮಾಲೀಕರು ತಮ್ಮ ಸಿಬ್ಬಂದಿ ಟಿ.ಆರ್. ರಂಗನಾಥ ಮತ್ತು ಲೋಹಿತ್ ಅವರನ್ನು ಬೀರೂರಿಗೆ ಕಳುಹಿಸಿದ್ದಾರೆ. ಅಲ್ಲಿ ರಾಘವೇಂದ್ರ, ತಾನು ಕಾರ್ತಿಕ್ ಎಂದು ಪರಿಚಯಿಸಿಕೊಂಡು, ತನ್ನ ಹೆಸರಿನಲ್ಲೇ ಚಿನ್ನ ಗಿರವಿ ಇದೆ ಎಂದು ನಂಬಿಸಿದ್ದಾನೆ.

ನಂತರ ಕಾರ್ತಿಕ್ ನೀಡಿದ ಕೆನರಾ ಬ್ಯಾಂಕ್ ಖಾತೆಗೆ ಸಿಬ್ಬಂದಿ ₹9.91 ಲಕ್ಷ ಹಣವನ್ನು ಚಲನ್ ಮೂಲಕ ಜಮೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಕಾರ್ತಿಕ್ ಸಿಬ್ಬಂದಿಯನ್ನು ಟೀ ಕುಡಿಯಲು ಕರೆದುಕೊಂಡು ಬ್ಯಾಂಕ್‌ನಿಂದ ಹೊರಗೆ ತೆರಳಿ, ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ ₹5 ಲಕ್ಷವನ್ನು ಮತ್ತೊಂದು ಖಾತೆಗೆ ವರ್ಗಾವಣೆ ಮಾಡಿರುವುದು ಪತ್ತೆಯಾಗಿದೆ. ಉಳಿದ ₹4.91 ಲಕ್ಷವನ್ನು ಬ್ಯಾಂಕ್ ಅಧಿಕಾರಿಗಳ ನೆರವಿನಿಂದ ತಡೆಹಿಡಿಯಲಾಗಿದೆ.

ನಂತರ IIFL ಫೈನಾನ್ಸ್‌ನಲ್ಲಿ ವಿಚಾರಿಸಿದಾಗ ಕಾರ್ತಿಕ್ ಹೆಸರಿನಲ್ಲಿ ಯಾವುದೇ ಚಿನ್ನ ಗಿರವಿ ಇರಲಿಲ್ಲ. ಬದಲಿಗೆ ಅನುಷಾ ಎಂಬವರ ಹೆಸರಿನಲ್ಲಿ ಚಿನ್ನ ಗಿರವಿ ಇಟ್ಟಿರುವುದು ಬೆಳಕಿಗೆ ಬಂದಿದೆ. ಈ ಮೂಲಕ ರಾಘವೇಂದ್ರ ಮತ್ತು ಕಾರ್ತಿಕ್ ಸೇರಿಕೊಂಡು ವಂಚನೆ ನಡೆಸಿರುವ ಶಂಕೆ ವ್ಯಕ್ತವಾಗಿದೆ.

ಈ ಸಂಬಂಧ ಕಂಪನಿ ಮಾಲೀಕರು ನೀಡಿದ ದೂರಿನ ಆಧಾರದ ಮೇಲೆ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 118/2026 ದಾಖಲಾಗಿದೆ. BNS ಕಲಂ 318(2), 318(4), 319(2), 3(5) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Finance company in Birur cheated of ₹9.91 lakh

Share

Leave a comment

Leave a Reply

Your email address will not be published. Required fields are marked *

Don't Miss

ಪೊಲೀಸ್ ಕಾನ್‌ಸ್ಟೇಬಲ್ ಲಿಖಿತ ಪರೀಕ್ಷೆಗೆ 451 ಅಭ್ಯರ್ಥಿಗಳ ಗೈರು

ಚಿಕ್ಕಮಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಭಾನುವಾರ ರಾಜ್ಯಾದ್ಯಂತ ನಡೆದ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆಯು ಚಿಕ್ಕಮಗಳೂರು ಜಿಲ್ಲೆಯ ೧೬ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಡೆತಡೆ ಇಲ್ಲದೆ...

ವಿಧಾನ ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಇಂದು ಪ್ರಮಾಣ ವಚನ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸದಸ್ಯೆಯಾಗಿ ನೇಮಕಗೊಂಡಿರುವ ಶ್ರೀಮತಿ ಗಾಯತ್ರಿ ಶಾಂತೇಗೌಡ ಅವರು ಸೋಮವಾರ (ಆಗಸ್ಟ್ 3) ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ...

Related Articles

ದೇವಸ್ಥಾನ ಪ್ರವೇಶದ ವಿಚಾರಕ್ಕೆ ಬಾಲಕನ ಮೇಲೆ ಕತ್ತಿಯಿಂದ ಹಲ್ಲೆಗೆ ಯತ್ನ

ಚಿಕ್ಕಮಗಳೂರು: ದೇವಸ್ಥಾನ ಪ್ರವೇಶದ ವಿಚಾರಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಗೆ ಸೇರಿದ 16 ವರ್ಷದ ಬಾಲಕನಿಗೆ ಅವಾಚ್ಯವಾಗಿ...

ಸ್ಕೂಟರ್ ಮರದ ಬಿಳಲಿಗೆ ಡಿಕ್ಕಿಗೆ ಮಹಿಳೆ ಸ್ಥಳದಲ್ಲೇ ಸಾವು

ಕಡೂರು: ಸ್ಕೂಟರ್ ನಿಯಂತ್ರಣ ತಪ್ಪಿ ಆಲದ ಮರದ ಬಿಳಲಿಗೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಕುಳಿತಿದ್ದ...

ಜಲಜೀವನ್ ಮಿಷನ್ ಕಾಮಗಾರಿ ಸ್ಥಳದಿಂದ ಜನರೇಟರ್, ಪೈಪ್ ಕಳವು

ಚಿಕ್ಕಮಗಳೂರು: ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿಗೆ ಬಳಸುತ್ತಿದ್ದ 10 ಕೆವಿಎ ಡೀಸೆಲ್...

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು...