Home namma chikmagalur chikamagalur ಆಹಾರ ಇಲಾಖೆ ಉಪನಿರ್ದೇಶಕರಿಗೆ ₹50 ಸಾವಿರ ವಂಚನೆ
chikamagalurCrime NewsHomeLatest Newsnamma chikmagalur

ಆಹಾರ ಇಲಾಖೆ ಉಪನಿರ್ದೇಶಕರಿಗೆ ₹50 ಸಾವಿರ ವಂಚನೆ

Share
Share

ಚಿಕ್ಕಮಗಳೂರು: ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ವಾಟ್ಸಪ್ ಖಾತೆ ಸೃಷ್ಟಿಸಿ, ಆನ್‌ಲೈನ್ ಬ್ಯಾಂಕಿಂಗ್ ಸಮಸ್ಯೆಯ ನೆಪದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರಿಂದ ₹50 ಸಾವಿರ ಹಣ ಪಡೆದು ವಂಚಿಸಿರುವ ಘಟನೆ ನಡೆದಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಯೋಗಾನಂದ ಅವರು ಆ.10ರಂದು ಚಿಕ್ಕಮಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಆ.8ರಂದು ಮಧ್ಯಾಹ್ನ ಮಂಡ್ಯ ಜಿಲ್ಲೆಯ ನಾಗಮಂಗಲದ ಬಳಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯೋಗಾನಂದ ಅವರ ಮೊಬೈಲ್‌ಗೆ ವಾಟ್ಸಪ್ ಸಂದೇಶ ಬಂದಿದೆ. ವಾಟ್ಸಪ್ ಡಿಪಿಯಲ್ಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಅವರ ಫೋಟೋ ಇದ್ದು, ‘ಬನ್ವರ್ ಸಿಂಗ್ ಮೀನಾ’ ಎಂಬ ಹೆಸರಿನ ಖಾತೆಯಿಂದ ಸಂದೇಶ ಬಂದಿತ್ತು ಎನ್ನಲಾಗಿದೆ.

ಸಂದೇಶ ಕಳುಹಿಸಿದ್ದ ವ್ಯಕ್ತಿ ತಾನು ಸಭೆಯಲ್ಲಿದ್ದು, ತನ್ನ ಆನ್‌ಲೈನ್ ಬ್ಯಾಂಕಿಂಗ್‌ನಲ್ಲಿ ಸಮಸ್ಯೆಯಾಗಿರುವುದಾಗಿ ತಿಳಿಸಿ, ಮತ್ತೊಬ್ಬರ ಬ್ಯಾಂಕ್ ಖಾತೆಗೆ ₹50 ಸಾವಿರ ಜಮೆ ಮಾಡುವಂತೆ ಕೇಳಿದ್ದಾನೆ. ಬ್ಯಾಂಕಿಂಗ್ ವ್ಯವಸ್ಥೆ ಸರಿಯಾದ ಬಳಿಕ ಹಣವನ್ನು ಹಿಂದಿರುಗಿಸುವುದಾಗಿ ಭರವಸೆ ನೀಡಿದ್ದಾನೆ ಎನ್ನಲಾಗಿದೆ.

ಇದನ್ನು ನಂಬಿದ ಯೋಗಾನಂದ ಅವರು ಮನೆಯಲ್ಲಿ ಇದ್ದ ₹50 ಸಾವಿರ ನಗದನ್ನು ತೆಗೆದುಕೊಂಡು ಮಂಡ್ಯ ನಗರದ ಐಸಿಐಸಿಐ ಬ್ಯಾಂಕ್ ಎಟಿಎಂಗೆ ತೆರಳಿ, ಆರೋಪಿಯು ನೀಡಿದ್ದ ಹೇಮಣ್ಣಗೌಡ ಗುಡ್ಡಣ್ಣಗೌಡ ಪಾಟೀಲ್ ಅವರ ಖಾತೆಗೆ ಹಂತ ಹಂತವಾಗಿ ಒಟ್ಟು ₹50 ಸಾವಿರ ಜಮೆ ಮಾಡಿದ್ದಾರೆ.

ಬಳಿಕ ಮತ್ತೆ ₹50 ಸಾವಿರ ಹಣ ಹಾಕುವಂತೆ ಸಂದೇಶ ಬಂದ ಹಿನ್ನೆಲೆಯಲ್ಲಿ ಅನುಮಾನಗೊಂಡ ಯೋಗಾನಂದ ಅವರು ಜಿಲ್ಲಾಧಿಕಾರಿ ಕಚೇರಿಯ ಪಿಎ ಅವರನ್ನು ಸಂಪರ್ಕಿಸಿದ್ದಾರೆ. ಈ ವೇಳೆ ಜಿಲ್ಲಾಧಿಕಾರಿ ಯಾವುದೇ ಸಭೆಯಲ್ಲಿ ಇಲ್ಲ ಹಾಗೂ ಇದೇ ರೀತಿಯಲ್ಲಿ ಬೇರೆ ವ್ಯಕ್ತಿಗಳಿಗೂ ಸಂದೇಶಗಳು ಬರುತ್ತಿವೆ ಎಂಬುದು ತಿಳಿದುಬಂದಿದೆ. ನಂತರ ಚಿಕ್ಕಮಗಳೂರಿಗೆ ಮರಳಿದ ಯೋಗಾನಂದ ಅವರು ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲು: ಸೈಬರ್ ಕ್ರೈಂ ಪೊಲೀಸರು ಠಾಣಾ ಮೊ.ನಂ. 42/2026ರಲ್ಲಿ ಐಟಿ ಕಾಯ್ದೆಯ ಕಲಂ 66(C), 66(D) ಹಾಗೂ BNS ಕಲಂ 318(4) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ನಕಲಿ ವಾಟ್ಸಪ್ ಖಾತೆ ಬಳಸಿ ಹಣ ಪಡೆದು ವಂಚಿಸಿದ ವ್ಯಕ್ತಿಯ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ

Food Department Deputy Director cheated of ₹50 thousand

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...