Home namma chikmagalur chikamagalur ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ
chikamagalurHomeLatest Newsnamma chikmagalur

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

Share
Share

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ ಯೋಜನೆಯಡಿ ಉದ್ಯೋಗಾವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಈ ಮೂಲಕ ತಮ್ಮ ಗ್ರಾಮ ಪಂಚಾಯಿತಿಯ ಅಭಿವೃದ್ಧಿಗೆ ಸಹಕರಿಸುವುದರ ಜೊತೆಗೆ, ವೈಯಕ್ತಿಕ ಆದಾಯವನ್ನು ಹೆಚ್ಚಿಸಿಕೊಂಡು ಆರ್ಥಿಕವಾಗಿ ಸದೃಢರಾಗಬಹುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಎಸ್.ಕೀರ್ತನಾ ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಜಿಲ್ಲೆಯ ಎಲ್ಲಾ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಜುಲೈ ೧ ರಿಂದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ ಯೋಜನೆ ಅನುಷ್ಠಾನಗೊಂಡಿದ್ದು, ಅರ್ಹ ಗ್ರಾಮೀಣ ಕುಟುಂಬಕ್ಕೆ ೧೦೦ ದಿನಗಳ ಬದಲಾಗಿ ೧೨೫ ಮಾನವ ದಿನಗಳ ಕಡ್ಡಾಯ ಉದ್ಯೋಗ ಅವಕಾಶ ಕಲ್ಪಿಸುವ ಜೊತೆಗೆ ಗ್ರಾಮೀಣ ಪ್ರದೇಶದ ಸಮಗ್ರ ಮತ್ತು ಸ್ಯಾಚುರೇಷನ್ ಆಧಾರಿತ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ಗ್ರಾಉ), ಅನುಷ್ಠಾನ ಇಲಾಖೆಗಳ ಅಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿ ಸೇರಿದಂತೆ ಎಲ್ಲ ಹಂತದ ಅಧಿಕಾರಿ ಸಿಬ್ಬಂದಿಗೆ ಈಗಾಗಲೇ ಮಾಸ್ಟರ್ ಟ್ರೇನರ್‌ಗಳಿಂದ ತರಬೇತಿಯನ್ನು ನೀಡಲಾಗಿದೆ.

ದಿನಗೂಲಿ ರೂ.೩೭೦ರಿಂದ ರೂ.೩೮೨ಕ್ಕೆ ಏರಿಕೆ
ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ವಿಬಿಜಿ ರಾಮ್ ಜಿ) ಯೋಜನೆಯಡಿ ಗ್ರಾಮೀಣ ಕೂಲಿಕಾರರಿಗೆ ನೀಡಲಾಗುವ ದಿನಗೂಲಿಯನ್ನು ರೂ.೩೭೦ರಿಂದ ರೂ.೩೮೨ಕ್ಕೆ ಹೆಚ್ಚಿಸಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಸಮಾನ ಕೂಲಿ ನೀಡುವ ವ್ಯವಸ್ಥೆ ಮುಂದುವರಿಯಲಿದೆ. ಕೂಲಿಕಾರರು ನಿರ್ವಹಿಸಿದ ಕೆಲಸಕ್ಕೆ ಸಂಬಂಧಿಸಿದ ಕೂಲಿ ಮೊತ್ತವನ್ನು ಗರಿಷ್ಠ ೧೫ ದಿನಗಳೊಳಗಾಗಿ ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆ ಮಾಡುವುದು ಕಡ್ಡಾಯವಾಗಿದ್ದು, ಕೂಲಿ ಪಾವತಿಯಲ್ಲಿ ವಿಳಂಬವಾದಲ್ಲಿ ನಿಯಮಾನುಸಾರ ಪರಿಹಾರ ಮೊತ್ತವನ್ನು ದಂಡದ ರೂಪದಲ್ಲಿ ಪಾವತಿಸಬೇಕಾಗುತ್ತದೆ.
ದಿನಗೂಲಿ ಹೆಚ್ಚಳದಿಂದ ಗ್ರಾಮೀಣ ಪ್ರದೇಶದ ಕೂಲಿಕಾರರ ಆದಾಯದಲ್ಲಿ ಹೆಚ್ಚಳವಾಗಲಿದ್ದು, ಅವರ ಜೀವನಮಟ್ಟ ಸುಧಾರಿಸಲು ಹಾಗೂ ಗ್ರಾಮೀಣ ಕುಟುಂಬಗಳ ಆರ್ಥಿಕ ಸದೃಢತೆಗೆ ಇದು ಸಹಕಾರಿಯಾಗಲಿದೆ. ಕೂಲಿಕಾರರ ಹಿತದೃಷ್ಟಿಯಿಂದ ಕೈಗೊಂಡಿರುವ ಈ ಕ್ರಮವು ಗ್ರಾಮೀಣ ಜನತೆಗೆ ಸಂತಸದ ವಿಚಾರವಾಗಿದೆ.

ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಅಜೀವಿಕ ಮಿಷನ್ (ವಿಬಿಜಿ ರಾಮ್ ಜಿ) ಯೋಜನೆಯಡಿ ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದ್ದು, ಮುಖ್ಯವಾಗಿ ೪ ವಿಷಯಾಧಾರಿತ ಕಾರ್ಯ ವರ್ಗಗಳ ಅಡಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತದೆ.

೧. ಜಲ ಭದ್ರತಾ ಕಾರ್ಯಗಳು ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಂರಕ್ಷಣೆ, ಮಳೆ ನೀರು ಸಂಗ್ರಹ ಹಾಗೂ ಜಲ ಸಂಪನ್ಮೂಲಗಳ ಅಭಿವೃದ್ಧಿಗೆ ಸಂಬಂಧಿಸಿದ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ.

೨. ಮೂಲ ಗ್ರಾಮೀಣ ಮೂಲ ಸೌಕರ್ಯ ಗ್ರಾಮೀಣ ಜನರ ಮೂಲಭೂತ ಅಗತ್ಯಗಳನ್ನು ಪೂರೈಸುವ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಗ್ರಾಮೀಣ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ.

೩. ಜೀವನೋಪಾಯ ಸಂಬಂಧಿತ ಮೂಲಸೌಕರ್ಯ ಗ್ರಾಮೀಣ ಜನರ ಉದ್ಯೋಗ ಮತ್ತು ಆದಾಯದ ಅವಕಾಶಗಳನ್ನು ಹೆಚ್ಚಿಸುವ ಹಾಗೂ ವಿವಿಧ ಜೀವನೋಪಾಯ ಚಟುವಟಿಕೆಗಳಿಗೆ ನೆರವಾಗುವ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ.

೪. ತೀವ್ರ ಹವಾಮಾನ ಮತ್ತು ವಿಪತ್ತು ಶಮನ ಕಾರ್ಯಗಳು ಪ್ರವಾಹ, ಬರ, ಅತಿವೃಷ್ಟಿ ಸೇರಿದಂತೆ ತೀವ್ರ ಹವಾಮಾನ ಪರಿಸ್ಥಿತಿಗಳು ಹಾಗೂ ವಿಪತ್ತುಗಳಿಂದ ಉಂಟಾಗುವ ಪರಿಣಾಮಗಳನ್ನು ಕಡಿಮೆ ಮಾಡಲು ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ.

ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ವಿಬಿಜಿ ರಾಮ್ ಜಿ) ಯೋಜನೆಯಡಿ ಗ್ರಾಮೀಣ ಪ್ರದೇಶಗಳ ಅಗತ್ಯತೆ ಹಾಗೂ ಸ್ಥಳೀಯ ಆದ್ಯತೆಗಳಿಗೆ ಅನುಗುಣವಾಗಿ ಒಟ್ಟು ೩೧೮ ವಿಧದ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ, ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಉತ್ತೇಜನ ನೀಡಲಾಗುತ್ತದೆ.

VB Ji Ram Ji’s support to stop migration in rural areas

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...

ಜಿಲ್ಲೆಯಲ್ಲಿ ಮಂತ್ರಿಯಾಗಲಿಲ್ಲ ರಗಳೆ ಬಿಟ್ಟಿಲ್ಲ

ಚಿಕ್ಕಮಗಳೂರು; ಮದುವೆ ಆಗಲಿಲ್ಲ, ಹುಚ್ಚು ಬಿಡಲಿಲ್ಲ ಎಂಬ ಸ್ಥಿತಿ ಮಂತ್ರಿ ಆಗಲಿಲ್ಲ, ಓಡಾಡುವುದು ತಪ್ಪಲಿಲ್ಲ.ಎಂಬ ದುಸ್ಥಿತಿ...