Home namma chikmagalur chikamagalur ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ
chikamagalurHomeLatest Newsnamma chikmagalur

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

Share
filter: 0; fileterIntensity: 0.0; filterMask: 0; captureOrientation: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 7864320;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 40;
Share

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ ವಿಮೆಗೆ ನೋಂದಣಿ ಹೆಚ್ಚು ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬುಧವಾರ ಶೃಂಗೇರಿ ತಾಲ್ಲೂಕಿನ ಮಳೆಯಿಂದ ಹಾನಿಗೆ ಒಳಗಾದ ಕೃಷಿ ಭೂಮಿ, ತಡೆಗೋಡೆಗಳು ಹಾಗೂ ಬೆಟ್ಟಗೆರೆ-ಕೆರೆಮನೆ ರಸ್ತೆ, ವೈಕುಂಠಪುರ-ಗುಂಡ್ರೆ ರಸ್ತೆ, ಕಿಗ್ಗಾ ದೇವಸ್ಥಾನ ಹಾಗೂ ಸಿರಿಮನೆ ಜಲಪಾತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಈ ಸೂಚನೆ ನೀಡಿದರಲ್ಲದೆ, ಕೆಲವು ಭತ್ತದ ಗದ್ದೆಗಳು ಮಳೆಯಿಂದ ಹಾನಿಗೆ ಒಳಗಾಗಿದ್ದು, ರೈತರು ಬೆಳೆ ವಿಮೆ ಯೋಜನೆಗೆ ನೋಂದಣಿ ಮಾಡಿಸಿಕೊಂಡಿದ್ದಲ್ಲಿ ಅನುಕೂಲವಾಗುತ್ತಿತ್ತು ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ ತಾಲ್ಲೂಕಿನಲ್ಲಿ ಮಳೆಯಿಂದ ಹಾನಿಗೆ ಒಳಗಾದ ಬೆಳೆಗಳ ಸಂಪೂರ್ಣ ಮಾಹಿತಿ ಕಲೆಹಾಕಿ ಹಾನಿಯ ವರದಿ ನೀಡುವಂತೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ತೋಟಗಾರಿಕೆ ಬೆಳೆಗಳಾದ ಅಡಿಕೆ, ಕಾಳುಮೆಣಸು, ಕಾಫಿ, ಸಂಬಾರ ಸಸಿಗಳನ್ನು ನರ್ಸರಿಯಲ್ಲಿ ಬೆಳೆಸಿ ರೈತರಿಗೆ ವಿತರಿಸಬೇಕು. ತಾಲ್ಲೂಕಿನಲ್ಲಿ ನರ್ಸರಿಗೆ ಜಾಗದ ಕೊರತೆ ಇದ್ದಲ್ಲಿ ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಕಳುಹಿಸಿದಲ್ಲಿ ಅಗತ್ಯ ಜಾಗವನ್ನು ಒದಗಿಸಲಾಗುವುದು ಎಂದರು.

ಇಲ್ಲಿನ  ಆಸ್ಪತ್ರೆಯು ಪಟ್ಟಣದಿಂದ ೨ ಕಿ.ಮೀ.ಗಳಷ್ಟು ಅಂತರದಲ್ಲಿದ್ದು, ಕೂಡಲೇ ಅಲ್ಲಿನ ಮಿಕ್ಕ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಪಟ್ಟಣದ ಮಧ್ಯದಲ್ಲಿರುವ ಹಳೆಯ ಆಸ್ಪತ್ರೆ ಕಟ್ಟಡದಲ್ಲಿ ನಮ್ಮ ಕ್ಲಿನಿಕ್ ಆರಂಭಿಸಬೇಕು ಎಂದು ಸಲಹೆ ನೀಡಿದರು.

ಪಟ್ಟಣದಲ್ಲಿ ನಾಲ್ಕು ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡವಿಲ್ಲ. ಪಟ್ಟಣ ಪಂಚಾಯಿತಿ ಕೂಡಲೇ ಜಾಗ ಗುರುತಿಸಿ ವರದಿ ನೀಡಬೇಕು. ಇಡೀ ತಾಲ್ಲೂಕಿನಲ್ಲಿ ೧೦೫ ಅಂಗನವಾಡಿ ಕೇಂದ್ರಗಳಿದ್ದು, ಈ ನಾಲ್ಕು ಅಂಗನವಾಡಿ ಕೇಂದ್ರಗಳಿಗೆ ಮಾತ್ರ ಕಟ್ಟಡವಿಲ್ಲದೇ ಇರುವುದರಿಂದ ಪಟ್ಟಣ ಪಂಚಾಯಿತಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಇಂದು ಶಾಲಾ ವಿದ್ಯಾರ್ಥಿಗಳು ಕುರುಕಲು ತಿಂಡಿಗಳಿಗೆ ಮೊರೆ ಹೋಗುತ್ತಿರುವುದರಿಂದ ಅವರಿಗೆ ವಿಟಮಿನ್ ಕೊರತೆಯಾಗಿದೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಮೊಟ್ಟೆ ಮತ್ತು ಸೊಪ್ಪಿನ ಪದಾರ್ಥಗಳನ್ನು ತಪ್ಪದೇ ನೀಡಬೇಕು ಎಂದು ಸೂಚನೆ ನೀಡಿದರು.

ಶೃಂಗೇರಿಯು ದೇಶದ ಅತ್ಯಂತ ಪ್ರಮುಖ ಯಾತ್ರಾಸ್ಥಳವಾಗಿದ್ದು, ಈ ಸ್ಥಳದ ಅಭಿವೃದ್ಧಿಯಾಗಬೇಕಲ್ಲದೆ, ಸುತ್ತಮುತ್ತಲಲ್ಲಿರುವ ಇತರ ಪ್ರೇಕ್ಷಣೀಯ ಸ್ಥಳಗಳನ್ನು ಸಹ ಗುರುತಿಸಿ ಅಭಿವೃದ್ಧಿಪಡಿಸಬೇಕು ಎಂದರಲ್ಲದೆ, ಪಟ್ಟಣದ ಭಾರತಿ ಬೀದಿ ಮತ್ತು ಹರಿಹರ ಬೀದಿಗಳು ಹೊಂಡಗಳಿಂದ ತುಂಬಿದ್ದು, ತಕ್ಷಣ ಅವುಗಳನ್ನು ಮುಚ್ಚಿಸಿ ರಸ್ತೆಗಳನ್ನು ದುರಸ್ತಿಗೊಳಿಸಬೇಕು. ಈ ಸಮಸ್ಯೆಗಳನ್ನು ಬಗೆಹರಿಸಲು ಖುದ್ದು ಸ್ಪಂದಿಸುವುದಾಗಿಯೂ, ಈ ಎಲ್ಲ ಕಾರ್ಯಗಳಲ್ಲಿ ಅಧಿಕಾರಿಗಳು ಇಚ್ಛಾಶಕ್ತಿ ಪ್ರದರ್ಶಿಸಬೇಕು ಎಂದೂ ಹೇಳಿದರು.

ತಾಲ್ಲೂಕಿನ ೩೪ ಗ್ರಾಮಗಳಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಯ ಜಂಟಿ ಸರ್ವೇ ಕಾರ್ಯ ಪೂರ್ಣಗೊಂಡಿದ್ದು, ಉಳಿದ ೧೫ ಗ್ರಾಮಗಳ ಸರ್ವೇಯನ್ನು ಇನ್ನು ೧೫ ದಿನಗಳಲ್ಲಿ ಪೂರ್ಣಗೊಳಿಸಬೇಕು. ಇದಕ್ಕೆ ಸಂಬಂಧಿಸಿದಂತೆ ಸಿಬ್ಬಂದಿಯ ಅವಶ್ಯಕತೆ ಇರುವುದರಿಂದ ಸಾಮಾಜಿಕ ಅರಣ್ಯ ಇಲಾಖೆಯ ಸಿಬ್ಬಂದಿ ಬಳಸಿಕೊಳ್ಳಬಹುದಾಗಿದ್ದು, ತಕ್ಷಣವೇ ಈ ಸಂಬಂಧ ಆದೇಶ ಹೊರಡಿಸುವುದಾಗಿ ತಿಳಿಸಿದರು.

ತಹಸೀಲ್ದಾರ್ ಅನೂಪ್ ಸಂಜೋಗ್, ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಎಚ್.ಸುದೀಪ್, ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

District Collector directs to increase crop insurance registration

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...