Home namma chikmagalur chikamagalur ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ ₹35 ಲಕ್ಷ ವಂಚನೆ
chikamagalurHomeLatest Newsnamma chikmagalur

ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ ₹35 ಲಕ್ಷ ವಂಚನೆ

Share
Share

ಚಿಕ್ಕಮಗಳೂರು: ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಕೆಲವೇ ದಿನಗಳಲ್ಲಿ ದುಪ್ಪಟ್ಟು ಹಣ ನೀಡುವುದಾಗಿ ನಂಬಿಸಿ ₹35 ಲಕ್ಷ ಪಡೆದು ವಾಪಸ್ ನೀಡದೆ ವಂಚಿಸಿರುವ ಆರೋಪದಡಿ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಸುಣ್ಣದಹಳ್ಳಿ ಗ್ರಾಮದ ಸಿದ್ದಪ್ಪ (65) ಅವರು ನೀಡಿದ ದೂರಿನ ಆಧಾರದ ಮೇಲೆ ಶಿವಮೊಗ್ಗದ ಚಾಲುಕ್ಯನಗರದ ವೆಂಕಟೇಶ್ ಬಿ., ಹನುಮಂತಪ್ಪ ಹಾಗೂ ದೇವರಾಜ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ದೂರಿನ ಪ್ರಕಾರ, ಸಿದ್ದಪ್ಪ ಅವರ ಪುತ್ರ ಕಾಂತರಾಜ್ ಅವರು 2024ರಲ್ಲಿ ತಮ್ಮ ಮನೆಯ ಮೇಲೆ ₹18 ಲಕ್ಷ ಹಾಗೂ ಗ್ರಾಮದಲ್ಲಿ ಕೈಸಾಲವಾಗಿ ₹15 ಲಕ್ಷ ಸೇರಿದಂತೆ ಒಟ್ಟು ₹33 ಲಕ್ಷ ಸಾಲ ಮಾಡಿಕೊಂಡಿದ್ದರು. ಈ ಕುರಿತು ತಂದೆ ಪ್ರಶ್ನಿಸಿದಾಗ, ವೆಂಕಟೇಶ್ ಬಿ. ಎಂಬಾತ ತನ್ನ ಒಡೆತನದ ಶಾಲೋಮ್ ಟ್ರೇಡಿಂಗ್ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಕೆಲವೇ ದಿನಗಳಲ್ಲಿ ದುಪ್ಪಟ್ಟು ಹಣ ನೀಡುವುದಾಗಿ ಭರವಸೆ ನೀಡಿದ್ದರಿಂದ ಹಣ ಹೂಡಿಕೆ ಮಾಡುತ್ತಿರುವುದಾಗಿ ಕಾಂತರಾಜ್ ತಿಳಿಸಿದ್ದರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನಂತರ ಕಾಂತರಾಜ್ ಅವರು 2025ರ ಜುಲೈ 18ರಂದು ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಜುಲೈ 27ರಂದು ವೆಂಕಟೇಶ್ ಸಿದ್ದಪ್ಪ ಅವರ ಮನೆಗೆ ಬಂದು, ಕಾಂತರಾಜ್ ಹಾಗೂ ಇತರ ಸಂಬಂಧಿಕರು ತಮ್ಮ ಕಂಪನಿಯಲ್ಲಿ ಒಟ್ಟು ₹35 ಲಕ್ಷ ಹೂಡಿಕೆ ಮಾಡಿರುವುದಾಗಿ ತಿಳಿಸಿದ್ದಾನೆ. ಕಾಂತರಾಜ್ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಅವರ ತಂದೆಗೆ ಎರಡು ತಿಂಗಳೊಳಗೆ ಹಂತ ಹಂತವಾಗಿ ಹಣವನ್ನು ಹಿಂದಿರುಗಿಸುವುದಾಗಿ ಛಾಪಾ ಕಾಗದದಲ್ಲಿ ಬರೆದುಕೊಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ವೇಳೆ ಗ್ರಾಮಸ್ಥರಾದ ಕಮಲಮ್ಮ, ಆನಂದ್ ಸೇರಿದಂತೆ ಇತರರು ಉಪಸ್ಥಿತರಿದ್ದರು ಎನ್ನಲಾಗಿದೆ. ಬಳಿಕ ಸೆ.4ರಂದು ಚಂದನ್ ಎಂಬವರ ಖಾತೆಯಿಂದ ಸಿದ್ದಪ್ಪ ಅವರ ತರೀಕೆರೆ ಯೂನಿಯನ್ ಬ್ಯಾಂಕ್ ಖಾತೆಗೆ ₹2 ಲಕ್ಷ ಜಮೆಯಾಗಿತ್ತು. ಆದರೆ ಉಳಿದ ಹಣವನ್ನು ನೀಡದೆ ವಿಳಂಬ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಹಣಕ್ಕಾಗಿ ಸಂಪರ್ಕಿಸಿದಾಗ, ತಮ್ಮ ಕಂಪನಿಯವರಾದ ಹನುಮಂತಪ್ಪ ಮತ್ತು ದೇವರಾಜ ಅವರು ಬಂದು ಉಳಿದ ಹಣವನ್ನು ನೀಡುತ್ತಾರೆ ಎಂದು ವೆಂಕಟೇಶ್ ಹೇಳಿದ್ದಾನೆ. ಬಳಿಕ ಹನುಮಂತಪ್ಪ ಮತ್ತು ದೇವರಾಜ ಸಿದ್ದಪ್ಪ ಅವರ ಮನೆಗೆ ಬಂದು ಕೆಲ ದಿನ ಕಾಯುವಂತೆ ತಿಳಿಸಿದ್ದರು. ಆದರೆ ಇದುವರೆಗೆ ಹಣ ಹಿಂದಿರುಗಿಸದೆ, ಆರೋಪಿಗಳು ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ಸಿದ್ದಪ್ಪ ದೂರಿನಲ್ಲಿ ತಿಳಿಸಿದ್ದಾರೆ.

ಆನ್‌ಲೈನ್ ಟ್ರೇಡಿಂಗ್ ಮೂಲಕ ಹಣ ದುಪ್ಪಟ್ಟು ಮಾಡಿಕೊಡುವುದಾಗಿ ಆಸೆ ತೋರಿಸಿ ತಮ್ಮ ಪುತ್ರನಿಂದ ಹಣ ಪಡೆದು ವಾಪಸ್ ನೀಡದೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿ ವೆಂಕಟೇಶ್, ಹನುಮಂತಪ್ಪ ಹಾಗೂ ದೇವರಾಜ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಿದ್ದಪ್ಪ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಲಿಂಗದಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

₹35 lakh fraud in the name of online trading

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...