Home namma chikmagalur chikamagalur ₹10.13 ಲಕ್ಷ ಮೌಲ್ಯದ HDPE ಪೈಪ್ ಬಂಡಲ್‌ಗಳ ಕಳವು
chikamagalurCrime NewsHomeLatest Newsnamma chikmagalur

₹10.13 ಲಕ್ಷ ಮೌಲ್ಯದ HDPE ಪೈಪ್ ಬಂಡಲ್‌ಗಳ ಕಳವು

Share
Share

ಚಿಕ್ಕಮಗಳೂರು: ಜಲ ಜೀವನ್ ಮಿಷನ್ ಕಾಮಗಾರಿಗಾಗಿ ಜಮೀನಿನಲ್ಲಿ ಸಂಗ್ರಹಿಸಿಟ್ಟಿದ್ದ ₹10.13 ಲಕ್ಷ ಮೌಲ್ಯದ 32 HDPE ಪೈಪ್ ಬಂಡಲ್‌ಗಳು ಕಳವಾಗಿರುವ ಘಟನೆ ಸಖರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯ ಹುಲೀಕೆರೆ ಗ್ರಾಮದಲ್ಲಿ ನಡೆದಿದೆ.

ಹಾವೇರಿಯ ರಮೇಶ್ ಎಲೆಕ್ಟ್ರಿಕಲ್ಸ್ ಕಂಪನಿಯ ಮ್ಯಾನೇಜರ್ ನೀಡಿದ ದೂರಿನ ಆಧಾರದ ಮೇಲೆ ಸಖರಾಯಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕಡೂರು ತಾಲ್ಲೂಕಿನ ಹುಲೀಕೆರೆ ಗ್ರಾಮದ ಜಲ ಜೀವನ್ ಮಿಷನ್ ಕಾಮಗಾರಿಯ ಟೆಂಡರ್ ರಮೇಶ್ ಎಲೆಕ್ಟ್ರಿಕಲ್ಸ್ ಸಂಸ್ಥೆಗೆ ದೊರೆತಿತ್ತು. ಕಾಮಗಾರಿಗಾಗಿ 2025ರ ಏಪ್ರಿಲ್ 6ರಂದು ಸುಪ್ರೀಮ್ ಕಂಪನಿಯ 63 ಎಂಎಂ ವ್ಯಾಸದ ತಲಾ 300 ಮೀಟರ್‌ನ 32 ಬಂಡಲ್‌ಗಳ HDPE ಪೈಪ್‌ಗಳನ್ನು ಹುಲೀಕೆರೆ ಗ್ರಾಮದ ಸಖರಾಯಪಟ್ಟಣ–ಜಾವಗಲ್ ರಸ್ತೆಯ ಕಬರಸ್ಥಾನದ ಸಮೀಪ, ಗ್ರಾಮದ ಕುಮಾರ ಬಿನ್ ಪುಟ್ಟೇಗೌಡ ಅವರ ಜಮೀನಿನಲ್ಲಿ ಸಂಗ್ರಹಿಸಲಾಗಿತ್ತು.

ಜನವರಿ 9ರಂದು ಸಂಜೆ ಸುಮಾರು 4 ಗಂಟೆಗೆ ಹುಲೀಕೆರೆ ಗ್ರಾಮ ಪಂಚಾಯಿತಿ ಸದಸ್ಯ ಆನಂದ್ ಅವರು ಜಮೀನಿನಲ್ಲಿದ್ದ HDPE ಪೈಪ್ ಬಂಡಲ್‌ಗಳು ಕಾಣಿಸುತ್ತಿಲ್ಲ ಎಂದು ಕಂಪನಿಯ ಮ್ಯಾನೇಜರ್‌ಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದರು. ಮರುದಿನ ಬೆಳಿಗ್ಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ 32 ಬಂಡಲ್‌ಗಳು ಕಳವಾಗಿರುವುದು ಬೆಳಕಿಗೆ ಬಂದಿದೆ.

ಸ್ಥಳೀಯರನ್ನು ವಿಚಾರಿಸಿದಾಗ ಪೈಪ್‌ಗಳನ್ನು ಯಾರು ತೆಗೆದುಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ. ಜನವರಿ 9ರಂದು ಬೆಳಿಗ್ಗೆ 7ರಿಂದ ಸಂಜೆ 4 ಗಂಟೆಯೊಳಗಿನ ಅವಧಿಯಲ್ಲಿ ಅಪರಿಚಿತರು ಪೈಪ್‌ಗಳನ್ನು ಕಳವು ಮಾಡಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಕಳವಾಗಿರುವ 32 ಬಂಡಲ್‌ಗಳ ಒಟ್ಟು ಮೌಲ್ಯ ₹10,13,856 ಎಂದು ದೂರಿನಲ್ಲಿ ತಿಳಿಸಲಾಗಿದೆ. ಕಂಪನಿಯ ಸಿಬ್ಬಂದಿ ಅನುಮಾನ ಬಂದ ಸ್ಥಳಗಳಲ್ಲಿ ಹುಡುಕಾಟ ನಡೆಸಿದರೂ ಪೈಪ್‌ಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ತಡವಾಗಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಕಳವಾಗಿರುವ HDPE ಪೈಪ್‌ಗಳನ್ನು ಪತ್ತೆಹಚ್ಚಿ, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದ್ದು, ಸಖರಾಯಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

HDPE pipe bundles worth ₹10.13 lakh stolen

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...