ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ್ದು, ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯಾರ್ಥಿ ನಿಲಯದ ತನ್ನ ಕೊಠಡಿಯಲ್ಲಿ ನೇಣು ಹಾಕಿಕೊಂಡ ಸ್ಥತಿಯಲ್ಲಿದ್ದ ಬಾಲಕನನ್ನು ಸಹಪಾಠಿಗಳು ರಕ್ಷಿಸಿದ್ದಾರೆ. ಕೂಡಲೇ ನಗರದ ಅರಳುಗುಪ್ಪೆ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.
ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆಗೆ ಕಳುಹಿಸಲಾಯಿತು. ‘ವಿದ್ಯಾರ್ಥಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಟಿ, ಎಂಆರ್ಐ ಸ್ಕ್ಯಾನ್ ಮಾಡಲಾಗಿದ್ದು, ಯಾವುದೇ ತೊಂದರೆಯಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ವಿದ್ಯಾರ್ಥಿಗೆ ಇನ್ನೂ ಪ್ರಜ್ಞೆ ಬಂದಿಲ್ಲ. ಪ್ರಾಣಕ್ಕೆ ಅಪಾಯ ಇಲ್ಲ’ ಎಂದು ವೈದ್ಯರು ತಿಳಿಸಿದ್ದಾರೆ. ಆತ್ಮಹತ್ಯೆ ಯತ್ನಕ್ಕೆ ಕಾರಣ ತಿಳಿದು ಬಂದಿಲ್ಲ ಎಂದು ಐಟಿಡಿಪಿ ಜಿಲ್ಲಾ ಅಧಿಕಾರಿ ರಮೇಶ್ ತಿಳಿಸಿದರು.
Hostel student attempts suicide
Leave a comment