Home namma chikmagalur chikamagalur ಬ್ಯಾಂಕಿಂಗ್ ಏಜೆಂಟ್ ಸೋಗಿನಲ್ಲಿ ಸೈಬರ್ ವಂಚನೆ
chikamagalurHomeLatest Newsnamma chikmagalur

ಬ್ಯಾಂಕಿಂಗ್ ಏಜೆಂಟ್ ಸೋಗಿನಲ್ಲಿ ಸೈಬರ್ ವಂಚನೆ

Share
Share

ಚಿಕ್ಕಮಗಳೂರು: ಬ್ಯಾಂಕಿಂಗ್ ಏಜೆಂಟ್‌ಗಳಂತೆ ನಟಿಸಿ ಮೊಬೈಲ್ ಸಿಮ್ ಹಾಗೂ ಬ್ಯಾಂಕ್ ಖಾತೆಯ ಮಾಹಿತಿಯನ್ನು ವಂಚನೆಯಿಂದ ಪಡೆದು, ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಒಟ್ಟು ₹2.73 ಲಕ್ಷ ವರ್ಗಾವಣೆ ಮಾಡಿಕೊಂಡಿರುವ ಪ್ರಕರಣ ಚಿಕ್ಕಮಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ದೂರಿನ ಪ್ರಕಾರ, ಜುಲೈ 30ರಂದು ಮಧ್ಯರಾತ್ರಿ 1.30ರ ಸುಮಾರಿಗೆ ಅನಾಮದೇಯ ಸಂಖ್ಯೆಯಿಂದ ದೂರುದಾರರ ಮೊಬೈಲ್‌ಗೆ ಕರೆ ಬಂದಿತ್ತು. ಕರೆ ವೇಳೆ ಕಂಪ್ಯೂಟರ್ ರೆಕಾರ್ಡಿಂಗ್ (IVR) ಧ್ವನಿಯಲ್ಲಿ ಮಾತನಾಡಿದ ವ್ಯಕ್ತಿ, ಫೋನ್‌ಪೇ ಅನ್ನು ಮತ್ತೊಂದು ಡ್ರೈವ್‌ಗೆ ಇನ್‌ಸ್ಟಾಲ್ ಮಾಡಲು ಅನುಮತಿ ಇದೆಯೇ ಎಂದು ಪ್ರಶ್ನಿಸಿದ್ದಾನೆ. ದೂರುದಾರರು ‘ಇಲ್ಲ’ ಎಂದು ಉತ್ತರಿಸಿ ಕರೆ ಕಡಿತಗೊಳಿಸಿ, ಮೊಬೈಲ್ ಇಂಟರ್‌ನೆಟ್‌ನ್ನು ಆಫ್ ಮಾಡಿ ಮಲಗಿದ್ದರು.

ಮರುದಿನ ಬೆಳಗ್ಗೆ ಮೊಬೈಲ್ ಪರಿಶೀಲಿಸಿದಾಗ ಜಿಯೋ ಸಿಮ್ ಕಾರ್ಯನಿರ್ವಹಿಸದಿರುವುದು ಗಮನಕ್ಕೆ ಬಂದಿದೆ. ಜಿಯೋ ಕಚೇರಿಗೆ ತೆರಳಿ ವಿಚಾರಿಸಿದಾಗ ಗ್ರಾಹಕ ಸೇವಾ ಕೇಂದ್ರವನ್ನು ಸಂಪರ್ಕಿಸುವಂತೆ ತಿಳಿಸಲಾಯಿತು. 198ಕ್ಕೆ ಕರೆ ಮಾಡಿ ವಿಚಾರಿಸಿದಾಗ, ದೂರುದಾರರೇ ತಮ್ಮ ಸಂಖ್ಯೆಯನ್ನು ಬ್ಲಾಕ್ ಮಾಡಿರುವುದಾಗಿ ಮಾಹಿತಿ ನೀಡಲಾಗಿದೆ. ಆದರೆ ತಾವು ಯಾವುದೇ ರೀತಿಯಲ್ಲೂ ಮೊಬೈಲ್ ಸಂಖ್ಯೆಯನ್ನು ಬ್ಲಾಕ್ ಮಾಡುವಂತೆ ಸೂಚಿಸಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ನಂತರ ಖಾತೆ ಹೊಂದಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ತೆರಳಿ, ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಹ್ಯಾಕ್ ಆಗಿರುವ ಬಗ್ಗೆ ಮಾಹಿತಿ ನೀಡಲಾಗಿತ್ತು. ಬ್ಯಾಂಕ್ ಸಿಬ್ಬಂದಿಯಿಂದ ಸೂಕ್ತ ಮಾಹಿತಿ ದೊರೆಯದ ಹಿನ್ನೆಲೆಯಲ್ಲಿ ಹಲವು ಬಾರಿ ಬ್ಯಾಂಕ್‌ಗೆ ತೆರಳಿದರೂ ಖಾತೆಯನ್ನು ತಕ್ಷಣ ಫ್ರೀಜ್ ಮಾಡಿರಲಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಆಗಸ್ಟ್ 13ರಂದು ಬ್ಯಾಂಕ್ ಖಾತೆಯ ಸ್ಟೇಟ್‌ಮೆಂಟ್ ಪರಿಶೀಲಿಸಿದಾಗ, ಖಾತೆಯಿಂದ ಮೂರು ಹಂತಗಳಲ್ಲಿ ₹99,000, ₹50,000 ಹಾಗೂ ₹1,24,000 ಸೇರಿದಂತೆ ಒಟ್ಟು *₹2,73,000 ಹಣ ಕಡಿತವಾಗಿರುವುದು* ಬೆಳಕಿಗೆ ಬಂದಿದೆ. ಈ ಕುರಿತು ಬ್ಯಾಂಕ್ ಅಧಿಕಾರಿಗಳನ್ನು ವಿಚಾರಿಸಿದಾಗ, ಖಾತೆಯನ್ನು ಹ್ಯಾಕ್ ಮಾಡಿ ಹಣ ವರ್ಗಾವಣೆ ಮಾಡಿರುವ ಸಾಧ್ಯತೆಯಿದ್ದು, ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡುವಂತೆ ಸೂಚಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ದೂರುದಾರರು ಸೈಬರ್ ಸಹಾಯವಾಣಿ *1930ಕ್ಕೆ ಕರೆ ಮಾಡಿ ದೂರು ದಾಖಲಿಸಿದ್ದು, ಸ್ವೀಕೃತಿ ಸಂಖ್ಯೆ **31608260142690* ನೀಡಲಾಗಿದೆ.

ದೂರಿನ ಆಧಾರದ ಮೇಲೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ *ಠಾಣಾ ಮೊ.ನಂ. 44/2026ರಂತೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಕಲಂ **66(C), 66(D)* ಹಾಗೂ *ಭಾರತೀಯ ನ್ಯಾಯ ಸಂಹಿತೆ (BNS) ಕಲಂ 318(4)* ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

Cyber ​​fraud in the guise of banking agent

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...