Home namma chikmagalur chikamagalur ಅಕ್ರಮ ಮರಳು ಸಾಗಾಟ: ಟ್ರ್ಯಾಕ್ಟರ್-ಟ್ರೇಲರ್ ವಶಕ್ಕೆ
chikamagalurHomeLatest Newsnamma chikmagalur

ಅಕ್ರಮ ಮರಳು ಸಾಗಾಟ: ಟ್ರ್ಯಾಕ್ಟರ್-ಟ್ರೇಲರ್ ವಶಕ್ಕೆ

Share
Share

ಚಿಕ್ಕಮಗಳೂರು: ಪರವಾನಗಿ ಇಲ್ಲದೆ ಹಳ್ಳದಿಂದ ಮರಳನ್ನು ತೆಗೆದು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಆಲ್ದೂರು ಪೊಲೀಸರು ಟ್ರ್ಯಾಕ್ಟರ್ ಮತ್ತು ಟ್ರೇಲರ್‌ನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಆಗಸ್ಟ್ 14ರಂದು ಮಧ್ಯಾಹ್ನ 2.30ರ ಸುಮಾರಿಗೆ ಪೊಲೀಸರು ಚಂಡಗೋಡು ಭಾಗದಲ್ಲಿ ಗಸ್ತು ಮುಗಿಸಿಕೊಂಡು ಆಲ್ದೂರು ಕಡೆಗೆ ಇಲಾಖಾ ಜೀಪಿನಲ್ಲಿ ವಾಪಸಾಗುತ್ತಿದ್ದಾಗ ವಗ್ಗಾರ್ ರಸ್ತೆಯ ಶ್ರೀ ವರಲಕ್ಷ್ಮಿ ಕಾಫಿ ಲಿಂಕ್ಸ್ ಬಳಿ ದೋಣಗುಡಿಗೆ ಕಡೆಯಿಂದ ಮರಳು ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್‌ನ್ನು ಗಮನಿಸಿದ್ದಾರೆ. ಪೊಲೀಸರು ಟ್ರ್ಯಾಕ್ಟರ್‌ನ್ನು ನಿಲ್ಲಿಸಿ ಪರಿಶೀಲಿಸಿದಾಗ ಟ್ರೇಲರ್‌ನಲ್ಲಿ ಮರಳು ತುಂಬಿರುವುದು ಕಂಡುಬಂದಿದೆ.

ಮರಳು ಸಾಗಾಟಕ್ಕೆ ಗ್ರಾಮ ಪಂಚಾಯಿತಿ ಅಥವಾ ಸಂಬಂಧಪಟ್ಟ ಇಲಾಖೆಯಿಂದ ಪರವಾನಗಿ ಇದೆಯೇ ಎಂದು ಚಾಲಕನನ್ನು ವಿಚಾರಿಸಿದಾಗ ಯಾವುದೇ ಪರವಾನಗಿ ಇಲ್ಲವೆಂದು ತಿಳಿಸಿದ್ದಾನೆ. ವಿಚಾರಣೆ ವೇಳೆ ಟ್ರ್ಯಾಕ್ಟರ್ ಮಾಲೀಕರ ಸೂಚನೆಯಂತೆ ಹಳ್ಳದಿಂದ ಮರಳನ್ನು ತುಂಬಿಸಿಕೊಂಡು ಆಲ್ದೂರಿಗೆ ಸಾಗಿಸುತ್ತಿರುವುದಾಗಿ ಚಾಲಕ ಪೊಲೀಸರಿಗೆ ತಿಳಿಸಿದ್ದಾನೆ.

ಪಂಚಾಯ್ತುದಾರರ ಸಮ್ಮುಖದಲ್ಲಿ ಟ್ರ್ಯಾಕ್ಟರ್ ಪರಿಶೀಲಿಸಿದಾಗ *KA-18 TB-3347* ನೋಂದಣಿ ಸಂಖ್ಯೆಯ ಜಾನ್ ಡೀರ್ ಕಂಪನಿಯ 5045D ಮಾದರಿಯ ಟ್ರ್ಯಾಕ್ಟರ್ ಇಂಜಿನ್ ಹಾಗೂ *KA-18 TB-5569* ನೋಂದಣಿ ಸಂಖ್ಯೆಯ ತಿಳಿ ನೀಲಿ ಬಣ್ಣದ ಟ್ರೇಲರ್ ಪತ್ತೆಯಾಗಿದೆ. ಟ್ರೇಲರ್‌ನಲ್ಲಿ ಬಾಡಿ ಲೆವೆಲ್‌ವರೆಗೆ ಮರಳು ತುಂಬಲಾಗಿದ್ದು, ಅದರ ಅಂದಾಜು ಮೌಲ್ಯ ಸುಮಾರು *₹4,000* ಎಂದು ಪಂಚಾಯ್ತುದಾರರು ಅಭಿಪ್ರಾಯಪಟ್ಟಿದ್ದಾರೆ.

ಪೊಲೀಸರ ಪ್ರಕಾರ, ಸರ್ಕಾರದ ಸ್ವತ್ತಾದ ಮರಳನ್ನು ಹಳ್ಳದಿಂದ ಅಕ್ರಮವಾಗಿ ತೆಗೆದು, ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಮರಳು ತುಂಬಿದ್ದ ಟ್ರ್ಯಾಕ್ಟರ್ ಮತ್ತು ಟ್ರೇಲರ್‌ನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಈ ಸಂಬಂಧ ಆಲ್ದೂರು ಪೊಲೀಸ್ ಠಾಣೆಯಲ್ಲಿ *ಠಾಣಾ ಮೊ.ನಂ.164/2026ರಂತೆ **ಭಾರತೀಯ ನ್ಯಾಯ ಸಂಹಿತೆ (BNS) ಕಲಂ 303(2)* ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

Illegal sand transportation: Tractor-trailer seized

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...