ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ ಎನ್.ರಾಜು ತಿಳಿಸಿದರು.
ಅವರು ಇಲ್ಲಿಗೆ ಸಮೀಪದ ಚಿಕ್ಕಗೌಜ ಗ್ರಾಮದಲ್ಲಿ ಕುಂಭಕ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಕರ್ನಾಟಕ ವಿಕಾಸ ರಂಗ ಹಮ್ಮಿಕೊಂಡಿದ್ದ, ಪುಸ್ತಕ ಹಸ್ತಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪುಸ್ತಕ ಓದುವವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಇತ್ತೀಚೆಗೆ ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ. ಮೊಬೈಲ್ ಗೀಳಿಗೆ ಮಕ್ಕಳು ಬಲಿಯಾಗಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಕುಗ್ಗಿ ಹೋಗಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.
ಡಿ.ಡಿ.ಸಲೂನ್ ಚಿಕ್ಕಗೌಜದ ಮಾಲೀಕರಾದ ದರ್ಶನ್ ಅವರಿಗೆ ಕುಂಭಕ ಸಾಂಸ್ಕೃತಿಕ ಪ್ರತಿಷ್ಠಾನ ಕೊಡಮಾಡುವ ಪುಸ್ತಕಗಳನ್ನು ಋನೀಡಿದ,ಭೂಮಿಕಾ ದೂರವಾಹಿನಿ ಮುಖ್ಯಸ್ಥರು ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಅನಿಲ್ ಆನಂದ್ ಡಾ.ಬಿ.ಆರ್.ಅಂಬೇಡ್ಕರ್ ರಂತೆ ಓದುವ ಸಂಸ್ಕೃತಿಯನ್ನು ಬೆಳೆಸಿಕೊಂಡು ಸಾಮಾಜಿಕ ಜವಾಬ್ದಾರಿ ಹೆಚ್ಚಿಸಿಕೊಳ್ಳಲು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕುಂಭಕ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಕರ್ನಾಟಕ ವಿಕಾಸ ರಂಗದ ಅಧ್ಯಕ್ಷರಾದ ಕಾರ್ಯಕ್ರಮಕುಂದೂರು ಅಶೋಕ್ ಪುಸ್ತಕ ಓದುವ ಹವ್ಯಾಸದಿಂದ ನಮ್ಮನ್ನು ನಾವು ತಿದ್ದಿಕೊಳ್ಳಲು ಅವಕಾಶವಾಗುತ್ತದೆ. ಇಂದು ಓದುವ ಸಂಸ್ಕೃತಿಯನ್ನು ಬೆಳೆಸಿಕೊಂಡು ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಬೇಕು ಎಂದು ಕಿವಿಮಾತು ಹೇಳಿದರು
ಕಾರ್ಯಕ್ರಮದಲ್ಲ್ಲಿಗ್ರಾಮ ಪಂಚಾಯ್ತಿಯ ನಿಕಟಪೂರ್ವ ಸದಸ್ಯರಾದ ಹಾಲೇದೇಗೌಡ ಮತ್ತು ಸುರೇಶ್ ಉಪಸ್ಥಿತರಿದ್ದರು, ಶಿಕ್ಷಕರಾದ ಶಿವನಂಜೇಗೌಡ ಕಾರ್ಯಕ್ರಮ ನಿರೂಪಿಸಿದರು
Book culture fosters social responsibility
Leave a comment