Home namma chikmagalur chikamagalur ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?
chikamagalurHomeLatest Newsnamma chikmagalur

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

Share
Share

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ಕಚೇರಿ ಆವರಣದಲ್ಲಿ ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಿದ ಕೆಲವೇ ಗಂಟೆಗಳಲ್ಲಿ ರಾಷ್ಟ್ರಧ್ವಜವನ್ನು ಕೆಳಗಿಳಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ನಗರದ ರೈತ ಸಂಘದ ಕಚೇರಿ ಮುಂಭಾಗದಲ್ಲಿ ಬೆಳಿಗ್ಗೆ 7.55ಕ್ಕೆ ಧ್ವಜಾರೋಹಣ ನೆರವೇರಿಸಲಾಗಿದ್ದು, ಸುಮಾರು ನಾಲ್ಕು ಗಂಟೆಗಳ ಬಳಿಕ 11.55ರ ವೇಳೆಗೆ ಧ್ವಜವನ್ನು ಕೆಳಗಿಳಿಸಲಾಗಿದೆ ಎಂದು ಮತ್ತೊಂದು ಬಣದವರು ಆರೋಪಿಸಿದ್ದಾರೆ. ರಾಷ್ಟ್ರಧ್ವಜವನ್ನು ನಿಗದಿತ ಸಮಯಕ್ಕೂ ಮುನ್ನವೇ ಕೆಳಗಿಳಿಸಿರುವುದು ಧ್ವಜ ಸಂಹಿತೆಯ ಶಿಷ್ಟಾಚಾರಕ್ಕೆ ವಿರುದ್ಧವಾಗಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮುನ್ನ ಕಳೆದ ಕೆಲ ತಿಂಗಳಿಂದ ಚಿಕ್ಕಮಗಳೂರು ಜಿಲ್ಲಾ ರೈತ ಸಂಘದಲ್ಲಿ ಭಿನ್ನಮತ ತೀವ್ರಗೊಂಡಿದ್ದು, ಸಂಘಟನೆ ಎರಡು ಬಣಗಳಾಗಿ ವಿಭಜನೆಯಾಗಿದೆ. ಸಂಘ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಆರೋಪದ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಕೆಲವರನ್ನು ಸಂಘದಿಂದ ಉಚ್ಚಾಟಿಸಿದ್ದರು ಎನ್ನಲಾಗಿದೆ.

ಉಚ್ಚಾಟಿತ ಬಣದವರು ಸ್ವಾತಂತ್ರ್ಯ ದಿನದಂದು ಬೆಳಿಗ್ಗೆ ರೈತ ಸಂಘದ ಕಚೇರಿ ಆವರಣಕ್ಕೆ ಆಗಮಿಸಿ ಧ್ವಜಾರೋಹಣ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬಣಗಳ ನಡುವಿನ ತಿಕ್ಕಾಟದ ಹಿನ್ನೆಲೆಯಲ್ಲಿ ಸಮಸ್ಯೆ ಇತ್ಯರ್ಥವಾಗುವವರೆಗೆ ಎರಡೂ ಬಣದವರು ಕಚೇರಿ ಪ್ರವೇಶಿಸದಂತೆ ಪೊಲೀಸರು ಸೂಚನೆ ನೀಡಿದ್ದರು ಎನ್ನಲಾಗಿದೆ.

ಈ ನಡುವೆ ಧ್ವಜಾರೋಹಣ ನೆರವೇರಿಸಿದ ಕೆಲವೇ ಗಂಟೆಗಳಲ್ಲಿ ರಾಷ್ಟ್ರಧ್ವಜವನ್ನು ಕೆಳಗಿಳಿಸಿರುವುದು ವಿವಾದಕ್ಕೆ ಮತ್ತಷ್ಟು ಕಾರಣವಾಗಿದೆ. ಈ ಕುರಿತು ಮುಖಂಡರೊಂದಿಗೆ ಚರ್ಚಿಸಿ ಕಾನೂನು ಹೋರಾಟ ನಡೆಸುವುದರ ಜತೆಗೆ ಪೊಲೀಸ್ ದೂರು ದಾಖಲಿಸುವುದಾಗಿ ಜಿಲ್ಲಾ ರೈತ ಸಂಘದ ಜಿಲ್ಲಾಧ್ಯಕ್ಷ ಮಹೇಶ್ ಎಚ್ಚರಿಕೆ ನೀಡಿದ್ದಾರೆ.

ಒಟ್ಟಿನಲ್ಲಿ ರೈತ ಸಂಘದ ಆಂತರಿಕ ಬಣ ಸಂಘರ್ಷ ಇದೀಗ ರಾಷ್ಟ್ರಧ್ವಜದ ವಿಚಾರಕ್ಕೂ ತಲುಪಿದ್ದು, ಧ್ವಜವನ್ನು ನಿಗದಿತ ಸಮಯಕ್ಕೂ ಮುನ್ನವೇ ಕೆಳಗಿಳಿಸಲಾಯಿತೇ ಎಂಬ ಆರೋಪದ ಕುರಿತು ಮುಂದಿನ ದಿನಗಳಲ್ಲಿ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದು ಕುತೂಹಲ ಮೂಡಿಸಿದೆ.

The national flag was taken down within hours of being hoisted…?

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...