Home namma chikmagalur chikamagalur ₹8 ಕೋಟಿ ಹಣ, ಚಿನ್ನಾಭರಣ ದೋಚಿ 9 ವರ್ಷದ ಮಗನೊಂದಿಗೆ ಪತಿ ಪರಾರಿ
chikamagalurCrime NewsHomeLatest Newsnamma chikmagalur

₹8 ಕೋಟಿ ಹಣ, ಚಿನ್ನಾಭರಣ ದೋಚಿ 9 ವರ್ಷದ ಮಗನೊಂದಿಗೆ ಪತಿ ಪರಾರಿ

Share
Share

ಕೊಪ್ಪ: ಪತಿಯೊಬ್ಬ ತನ್ನ ಪತ್ನಿಗೆ ದೀರ್ಘಕಾಲದಿಂದ ದೈಹಿಕ, ಮಾನಸಿಕ ಹಿಂಸೆ ನೀಡಿ, ಕೋಟ್ಯಂತರ ರೂಪಾಯಿ ಹಣ, ಚಿನ್ನಾಭರಣ ದೋಚಿ, ಮಗನನ್ನು ಬಲವಂತವಾಗಿ ಕರೆದೊಯ್ದಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಆಕೆಯ ಪತಿ ಎರಾಲ್ ರೋಹನ್ ಡಿಕುನ್ನಾ ಹಾಗೂ ಆತನ ಕುಟುಂಬಸ್ಥರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಗಳೂರು ಮೂಲದ ಸಂತ್ರಸ್ತೆ ನೀಡಿದ ದೂರಿನ ಪ್ರಕಾರ, ಪ್ರೀತಿಸಿ ಮದುವೆಯಾಗಿದ್ದ ದಂಪತಿ ಕತಾರ್‌ನಲ್ಲಿ ನೆಲೆಸಿದ್ದರು. ಮದುವೆ ಸಮಯದಲ್ಲಿ ವರದಕ್ಷಿಣೆ ರೂಪದಲ್ಲಿ 160 ಗ್ರಾಂ ಚಿನ್ನಾಭರಣ ಪಡೆದಿದ್ದ ಪತಿ, ನಂತರದ ದಿನಗಳಲ್ಲಿ ಹಣಕ್ಕಾಗಿ ಪೀಡಿಸಿ, ಪತ್ನಿಯ ಕೈಯಿಂದ ಕೆಲಸ ಮಾಡಿಸಿ, ಆಕೆಯ ಸಂಪಾದನೆಯ ಸುಮಾರು ₹8 ಕೋಟಿ ಹಣವನ್ನು ಸುಲಿಗೆ ಮಾಡಿಕೊಂಡಿದ್ದಾನೆ ಎಂದು ದೂರಲಾಗಿದೆ.

ಹಣಕ್ಕಾಗಿ ನಿರಂತರ ಹಲ್ಲೆ ನಡೆಸಿ, ಚಾಕುವಿನಿಂದ ಕೊಲೆ ಮಾಡಲು ಯತ್ನಿಸಿದ್ದಲ್ಲದೆ, ಜಗಳ ಬಿಡಿಸಲು ಬಂದ ಮಕ್ಕಳ ಮೇಲೂ ಹಲ್ಲೆ ನಡೆಸಿ ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆಗಸ್ಟ್ 3ರಂದು ಆಸ್ಪತ್ರೆಗೆಂದು ಕರೆದೊಯ್ದು ತಾಯಿ ಮತ್ತು ಮಗಳನ್ನು ಅಲ್ಲಿಯೇ ಬಿಟ್ಟು, 9 ವರ್ಷದ ಮಗನನ್ನು ಪುಸಲಾಯಿಸಿ ಕರೆದುಕೊಂಡು ಪತಿ ಭಾರತಕ್ಕೆ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಅಲ್ಲದೆ, ಮನೆಯಲ್ಲಿದ್ದ ಸಿಸಿಟಿವಿ ಸಂಪರ್ಕ ಕಡಿತಗೊಳಿಸಿ, ಸುಮಾರು 300 ಗ್ರಾಂ ಚಿನ್ನಾಭರಣ, 2 ಚಿನ್ನದ ಬಿಸ್ಕೆಟ್‌ಗಳು, ₹65 ಲಕ್ಷ ನಗದು, ಆಸ್ತಿ ದಾಖಲೆಗಳು ಹಾಗೂ ಪಾಸ್‌ಪೋರ್ಟ್‌ಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರುದಾರೆ ತಿಳಿಸಿದ್ದಾರೆ.

ನಂತರ ಕತಾರ್‌ನ ಭಾರತೀಯ ರಾಯಭಾರ ಕಚೇರಿಯಿಂದ ತಾತ್ಕಾಲಿಕ ಪಾಸ್‌ಪೋರ್ಟ್ ಪಡೆದು ಮಂಗಳೂರಿಗೆ ಮರಳಿದ ಸಂತ್ರಸ್ತೆ, ಪತಿಯ ಜೊತೆಗೆ ಆತನ ಕೃತ್ಯಕ್ಕೆ ಸಾಥ್ ನೀಡಿ ಮಾನಸಿಕ ಕಿರುಕುಳ ನೀಡಿದ್ದಾರೆ ಎನ್ನಲಾದ ಅತ್ತೆ ಮೇರಿ ಮೇಗ್ನಲಿನ್ ಡಿಕುನ್ಹಾ, ಗಂಡನ ಅಣ್ಣ ಎಜಿಲ್ ಶರಣ್ ಡಿಕುನ್ನಾ ಹಾಗೂ ನಾದಿನಿ ಪ್ರೀಮಲ್ ವಿವಿನ್ ಪಿಂಟೋ ವಿರುದ್ಧವೂ ಜಯಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Husband absconds with 9-year-old son after stealing Rs 8 crore in cash and jewellery

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...