Home Crime News ತರೀಕೆರೆಯಲ್ಲಿ ಅಪಾಚಿ ಬೈಕ್ ಕಳವು
Crime NewsHomeLatest Newsnamma chikmagalurTarikere

ತರೀಕೆರೆಯಲ್ಲಿ ಅಪಾಚಿ ಬೈಕ್ ಕಳವು

Share
Share

ತರೀಕೆರೆ: ಪಟ್ಟಣದ ಎಂಎಸ್‌ಐಎಲ್ ಅಂಗಡಿ ಮುಂಭಾಗ ನಿಲ್ಲಿಸಿದ್ದ ಅಪಾಚಿ ಬೈಕ್ ಕಳುವಾಗಿರುವ ಕುರಿತು ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೇರಲಕೆರೆ ಗ್ರಾಮದ ಮಂಜುನಾಥ ಎನ್.ಸಿ. ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಅವರು 2017ರಲ್ಲಿ ತರೀಕೆರೆ ಟಿವಿಎಸ್ ಶೋರೂಂನಲ್ಲಿ ಕೆಎ-66-ಇ-6027 ನೋಂದಣಿ ಸಂಖ್ಯೆಯ ಅಪಾಚಿ ಬೈಕ್ ಖರೀದಿಸಿದ್ದು, ಕೃಷಿ ಹಾಗೂ ವೈಯಕ್ತಿಕ ಕೆಲಸಗಳಿಗೆ ಬಳಸುತ್ತಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಆ.7ರಂದು ರಾತ್ರಿ ಸುಮಾರು 8 ಗಂಟೆಗೆ ದಿನಸಿ ಸಾಮಾನು ತರಲು ತರೀಕೆರೆ ಪಟ್ಟಣಕ್ಕೆ ಬಂದ ಅವರು, ತಮ್ಮ ಬೈಕ್ ಅನ್ನು ಎಂಎಸ್‌ಐಎಲ್ ಅಂಗಡಿ ಮುಂಭಾಗ ನಿಲ್ಲಿಸಿ ಲಾಕ್ ಮಾಡಿ ಶಿವಮೊಗ್ಗಕ್ಕೆ ತೆರಳಿದ್ದರು. ಅಲ್ಲಿ ಕೆಲಸ ಮುಗಿಸಿಕೊಂಡು ಆ.8ರಂದು ಬೆಳಗಿನ ಜಾವ ಸುಮಾರು 3 ಗಂಟೆಗೆ ತರೀಕೆರೆಯಲ್ಲಿದ್ದ ಬೈಕ್ ಬಳಿ ವಾಪಸ್ ಬಂದಾಗ ಬೈಕ್ ಕಾಣೆಯಾಗಿತ್ತು ಎಂದು ತಿಳಿಸಿದ್ದಾರೆ.

ಬೈಕ್‌ಗಾಗಿ ವಿವಿಧೆಡೆ ಹುಡುಕಾಟ ನಡೆಸಿ, ಸ್ನೇಹಿತರು ಹಾಗೂ ಪರಿಚಯಸ್ಥರಲ್ಲಿ ವಿಚಾರಿಸಿದರೂ ಯಾವುದೇ ಮಾಹಿತಿ ದೊರೆಯದ ಹಿನ್ನೆಲೆಯಲ್ಲಿ ತಡವಾಗಿ ಪೊಲೀಸ್ ಠಾಣೆಗೆ ದೂರು ನೀಡಿರುವುದಾಗಿ ಹೇಳಿದ್ದಾರೆ.

ಕಳುವಾದ ಅಪಾಚಿ ಬೈಕ್‌ನ ಅಂದಾಜು ಮೌಲ್ಯ ₹47,000 ಎಂದು ದೂರಿನಲ್ಲಿ ತಿಳಿಸಲಾಗಿದೆ. ಬೈಕ್‌ ಪತ್ತೆ ಮಾಡಿಕೊಡುವಂತೆ ಮನವಿ ಮಾಡಿದ್ದು, ದೂರನ್ನು ದಾಖಲಿಸಿಕೊಂಡಿರುವ ಪೊಲೀಸರು ತರೀಕೆರೆ ಪೊಲೀಸ್ ಠಾಣೆಯಲ್ಲಿ ಮೊ.ನಂ. 216/2026ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Apache bike stolen in Tarikere

Share

Leave a comment

Leave a Reply

Your email address will not be published. Required fields are marked *

Don't Miss

ಸೆಪ್ಟೆಂಬರ್ 10ಕ್ಕೆ ಟಿ.ಡಿ. ರಾಜೇಗೌಡ-ಡಿ.ಎನ್. ಜೀವರಾಜ್ ಅಂತಿಮ ವಿಚಾರಣೆ

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 10ಕ್ಕೆ ಮುಂದೂಡಿದೆ. ​2023ರ...

ಮಾಲಿನ್ಯದಿಂದ ನಾರುತ್ತಿರುವ ಮುಳ್ಳಯ್ಯನಗಿರಿ–ಸೀತಾಳಯ್ಯನಗಿರಿ

ಚಿಕ್ಕಮಗಳೂರು: ಪುರಾಣ ಪ್ರಸಿದ್ಧ, ಧಾರ್ಮಿಕ ಹಾಗೂ ಪರಿಸರದ ದೃಷ್ಟಿಯಿಂದ ಮಹತ್ವ ಪಡೆದಿರುವ ಮುಳ್ಳಯ್ಯನಗಿರಿ–ಸೀತಾಳಯ್ಯನಗಿರಿ ಪ್ರದೇಶ ಪ್ರವಾಸಿಗರ ಅತಿಯಾದ ಹಾವಳಿಯಿಂದ ತ್ಯಾಜ್ಯಮಯವಾಗುತ್ತಿದ್ದು, ಪ್ಲಾಸ್ಟಿಕ್ ಮಾಲಿನ್ಯದಿಂದ ಗಿರಿ ಪ್ರದೇಶದ ನೈಸರ್ಗಿಕ ಸೌಂದರ್ಯಕ್ಕೆ ಧಕ್ಕೆ ಉಂಟಾಗಿದೆ....

Related Articles

ಸೀತಾಪುರದಲ್ಲಿ ಅಕ್ರಮ ಇಸ್ಪೀಟ್ ಜೂಜಾಟದಲ್ಲಿ ನಾಲ್ವರ ಬಂಧನ

ಕಡೂರು: ತಾಲೂಕಿನ ಯಗಟಿ ಪೊಲೀಸ್ ಠಾಣಾ ವ್ಯಾಪ್ತಿಯ ಸೀತಾಪುರ ಗ್ರಾಮದ ಶಿವಗನಾಯ್ಕ ಅವರ ತೋಟದಲ್ಲಿ ಅಕ್ರಮವಾಗಿ...

ಬಿಜೆಪಿ-ಕಾಂಗ್ರೆಸ್‌ನ 200ಕ್ಕೂ ಹೆಚ್ಚು ಕಾರ್ಯಕರ್ತರು ಜೆಡಿಎಸ್‌ಗೆ ಸೇರ್ಪಡೆ

ಚಿಕ್ಕಮಗಳೂರು: ಚಿಕ್ಕಮಗಳೂರು ಹಾಗೂ ಮೂಡಿಗೆರೆ ಭಾಗದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಪ್ರಮುಖ ಮುಖಂಡರು ಹಾಗೂ...

ಸಾವಿರಾರು ಮಂದಿಯಿಂದ ಬೃಹತ್ ಈದ್‌ಮಿಲಾದ್ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಪೈಗಂಬರ್ ೧೫೦೧ನೇ ಜನ್ಮದಿನದ ಅಂಗವಾಗಿ ಆಚರಿಸಲಾದ ಈದ್‌ಮಿಲಾದ್ ಹಬ್ಬದ ಪ್ರಯುಕ್ತ ನಗರದಲ್ಲಿ...

ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಎಐಟಿಯುಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು:  ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯ ರು ಮತ್ತು ಸಹಾಯಕಿಯರ ಫೆಡೆರೇಷನ್‌ನ ಜಿಲ್ಲಾ...