ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ,ಅಜ್ಜಂಪುರ ಹಾಗೂ ಕೊಪ್ಪ,ಎನ್.ಆರ್ ಪುರ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.
ಆದರೆ ತೀವ್ರ ಬರದಿಂದ ತತ್ತರಿಸುತ್ತಿರುವ ಕಡೂರು ತಾಲ್ಲೂಕು ಬರಪೀಡಿತ ಎಂದು ಘೋಷಣೆ ಆಗದಿರುವುದು ಜನರ ಮತ್ತು ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ.ಎರಡನೇ ಪಟ್ಟಿಯಲ್ಲಿ ಘೋಷಣೆಯಾಗ ಬಹುದು ಎನ್ನಲಾಗುತ್ತಿದೆ.
ಮುಂಗಾರು ಕೈ ಕೊಟ್ಟಿರುವುದರಿಂದ ವಾಣಿಜ್ಯ ಬೆಳೆಗಳು ಮತ್ತು ಸಾಂಪ್ರದಾಯಿಕ ಬೆಳೆಗಳನ್ನು ಬೆಳೆಯಲಾಗಿಲ್ಲಾ ಜೊತೆಗೆ ದನಕರುಗಳಿಗೆ ಕುಡಿಯಲು ನೀರಿನ ಅಭಾವ ಉಂಟಾಗಿದೆ.ತೋಟಗಳು ಒಣಗುತ್ತಿವೆ.
ಕೆರೆ ಕಟ್ಟೆಗಳು ಒಣಗಿ ನಿಂತಿವೆ ರೈತರ ಗೋಳು ಆಕಾಶ ಮುಟ್ಟಿದೆ.ಇನ್ನೂ ಬರ ಪರಿಹಾರ ಎಷ್ಟರ ಮಟ್ಟಿಗೆ ದೊರೆಯುತ್ತದೆ ಎಂದು ಕಾದುನೋಡಬೇಕಾಗಿದೆ.
Four taluks in the district are drought-affected.
Leave a comment