Home namma chikmagalur chikamagalur ನಾಗರಹಳ್ಳಿ ಗುಡ್ಡದಲ್ಲಿ 6 ಕುರಿಗಳ ಕಳ್ಳತನ
chikamagalurCrime NewsHomeLatest Newsnamma chikmagalur

ನಾಗರಹಳ್ಳಿ ಗುಡ್ಡದಲ್ಲಿ 6 ಕುರಿಗಳ ಕಳ್ಳತನ

Share
Share

ಚಿಕ್ಕಮಗಳೂರು: ಮೇಯಲು ತೆರಳಿದ್ದ ಕುರಿಗಳ ಹಿಂಡಿನಿಂದ ಆರು ಕುರಿಗಳನ್ನು ಕಳ್ಳತನ ಮಾಡಿ ಮಾರಾಟ ಮಾಡಿರುವ ಆರೋಪದಡಿ ಇಬ್ಬರ ವಿರುದ್ಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು ತಾಲ್ಲೂಕಿನ ಅಂಬಳೆ ಹೋಬಳಿಯ ಕುಳಾರಹಳ್ಳಿ ಗ್ರಾಮದ ಗಂಗೇಗೌಡ (53) ಎಂಬುವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.

ದೂರುದಾರರು ಕೃಷಿ ಕೆಲಸದ ಜೊತೆಗೆ ಕುರಿ ಸಾಕಾಣಿಕೆ ಮಾಡಿಕೊಂಡಿದ್ದು, ಸುಮಾರು 200 ಕುರಿಗಳನ್ನು ಹೊಂದಿದ್ದಾರೆ. ಕುರಿಗಳನ್ನು ಕಾಯುವ ಕೆಲಸವನ್ನು ಅವರ ಅಕ್ಕನ ಗಂಡ ಮಂಜೇಗೌಡ ಎಂಬುವರು ಮಾಡುತ್ತಿದ್ದರು. ಅವರಿಗೆ ಸರಿಯಾಗಿ ತಿಳುವಳಿಕೆ ಇಲ್ಲದ ಕಾರಣ ಕುರಿಗಳ ಸಂಖ್ಯೆ ಕಡಿಮೆಯಾಗುತ್ತಿರುವುದು ಗಮನಕ್ಕೆ ಬಂದಿತ್ತು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ವಿಚಾರಿಸಿದಾಗ, ಗ್ರಾಮದ ಯೋಗೇಶ್ ಹಾಗೂ ದೇಗಲಾಪುರದ ರಾಜೇಗೌಡ ಎಂಬುವರು ಜೂನ್ 21ರಂದು ಬೆಳಗ್ಗೆ ಸುಮಾರು 10 ಗಂಟೆಗೆ ನಾಗರಹಳ್ಳಿ ಗುಡ್ಡದಲ್ಲಿ ಕುರಿಗಳು ಮೇಯುತ್ತಿದ್ದ ವೇಳೆ ಮೂರು ಕುರಿಗಳನ್ನು ಕಳ್ಳತನ ಮಾಡಿಕೊಂಡು ಹೋಗಿ ಮಾರಾಟ ಮಾಡಿರುವುದು ತಿಳಿದುಬಂದಿದೆ ಎನ್ನಲಾಗಿದೆ.

ಇದಾದ ಎರಡು ದಿನಗಳ ಬಳಿಕ ಇದೇ ಇಬ್ಬರು ಮತ್ತೆ ನಾಗರಹಳ್ಳಿ ಗುಡ್ಡಕ್ಕೆ ತೆರಳಿ ಮತ್ತಷ್ಟು ಮೂರು ಕುರಿಗಳನ್ನು ಕಳ್ಳತನ ಮಾಡಿಕೊಂಡು ಹೋಗಿ ಮಾರಾಟ ಮಾಡಿರುವುದಾಗಿ ತಿಳಿದುಬಂದಿದೆ ಎಂದು ಗಂಗೇಗೌಡ ದೂರಿನಲ್ಲಿ ತಿಳಿಸಿದ್ದಾರೆ.

ಕಳ್ಳತನವಾಗಿರುವ ಒಟ್ಟು ಆರು ಕುರಿಗಳ ಅಂದಾಜು ಮೌಲ್ಯ ₹45,000 ಎಂದು ತಿಳಿಸಲಾಗಿದೆ. ಈ ಕುರಿತು ಗ್ರಾಮದ ಹಿರಿಯರಿಗೆ ಮಾಹಿತಿ ನೀಡಿ, ಕುಟುಂಬದಲ್ಲಿ ಚರ್ಚಿಸಿದ ಬಳಿಕ ಪೊಲೀಸ್ ಠಾಣೆಗೆ ದೂರು ನೀಡುವಂತೆ ತಿಳಿಸಿದ್ದರಿಂದ ದೂರು ನೀಡಲು ತಡವಾಗಿದೆ ಎಂದು ಅವರು ತಿಳಿಸಿದ್ದಾರೆ.

ಕುರಿಗಳನ್ನು ಕಳ್ಳತನ ಮಾಡಿ ಮಾರಾಟ ಮಾಡಿರುವ ಆರೋಪದಡಿ ಯೋಗೇಶ್ ಮತ್ತು ರಾಜೇಗೌಡ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಗಂಗೇಗೌಡ ಮನವಿ ಮಾಡಿದ್ದಾರೆ. ದೂರು ಸ್ವೀಕರಿಸಿರುವ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

6 sheep stolen in Nagarahalli hill

Share

Leave a comment

Leave a Reply

Your email address will not be published. Required fields are marked *

Don't Miss

ಅಧಿಕಾರ ಎಂಬ ಮಾಯಾ ಜಿಂಕೆ ಮರೆಯಾಗಿದ್ದು ಏಕೆ ?

ಚಿಕ್ಕಮಗಳೂರು: ಕಳೆದ ನಾಲ್ಕು ವರೆ ವರ್ಷಗಳ ಹಿಂದೆಯೇ ವಿಧಾನ ಪರಿಷತ್ ಸದಸ್ಯರಾಗ ಬೇಕಿದ್ದ ಗಾಯಿತ್ರಿ ಶಾಂತೇಗೌಡ ಅಧಿಕಾರ ಪಡೆಯಲು ಹೈಕೋರ್ಟ್, ಸುಪ್ರೀಂ ಕೋರ್ಟ್ ನಲ್ಲಿ ಕೋಟ್ಯಾಂತರ ಹಣ ಖರ್ಚು ಮಾಡಿ ನ್ಯಾಯಲಯದ...

ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ-ಲೂಟಿಗಾಗಿ ಪೈಪೋಟಿ

ಚಿಕ್ಕಮಗಳೂರು: ಬಿಜೆಪಿ ಸರ್ಕಾರದಲ್ಲಿ ಶಾಸಕರ ನಡುವೆ ಕ್ಷೇತ್ರದ ಅಭಿವೃದ್ಧಿಗೆ ಪೈಪೋಟಿ ನಡೆದರೆ, ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ,ಲೂಟಿಗಾಗಿ ಪೈಪೋಟಿ ನಡೆಯುತ್ತಿದೆ. ಇದೇ ಪರಿಸ್ಥಿತಿ ಮುಂದುವರೆದರೆ ರಾಜಕೀಯವಾಗಿ ರಸ್ತೆಬಿದ್ದಿರುವ ಗುಂಡಿಯಲ್ಲಿ ಮುಚ್ಚುತ್ತಾರೆಂದು ವಿಧಾನಪರಿಷತ್ ಸದಸ್ಯ...

Related Articles

ಮಲೆನಾಡಿನ ಮಡಿಲಲ್ಲಿ ಜ್ಞಾನದ ಎರಡು ದೀಪಗಳು

ಜಯಪುರದ ಶ್ರೀ ಸತ್ಯಸಾಯಿ ದಿವ್ಯ ನಿಕೇತನಂ ಮತ್ತು ಶ್ರೀ ಸತ್ಯಸಾಯಿ ಶ್ರೀ ನಿಕೇತನಂನಲ್ಲಿ ಉಚಿತ ಶಿಕ್ಷಣದೊಂದಿಗೆ...

ಕಡೂರು ತಾಲೂಕು ಸರ್ಕಾರದ ಬರಪಟ್ಟಿಗೆ ವೈ.ಎಸ್.ವಿ. ದತ್ತಾ ಆಗ್ರಹ

ಕಡೂರು: ಇಡೀ ಜಿಲ್ಲೆಯಲ್ಲಿ ಅತ್ಯಂತ ಬರಗಾಲಕ್ಕೆ ತುತ್ತಾಗಿರುವ ತಾಲೂಕು ಎಂದರೆ ಕಡೂರು ತಾಲೂಕು, ಈ ಸಾಲಿನಲ್ಲಿ...

ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ನಗರದ ಟಿಪ್ಪುನಗರದಲ್ಲಿ ಈದ್ ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬೃಹತ್ ಕಟೌಟ್‌ಗೆ...

ಕಡೂರು, ಚಿಕ್ಕಮಗಳೂರು ತಾಲ್ಲೂಕುಗಳನ್ನು ಬರಪಟ್ಟಿಗೆ ಸೇರಿಸಲು ರೈತ ಸಂಘ ಆಗ್ರಹ

ಚಿಕ್ಕಮಗಳೂರು: ರಾಜ್ಯ ಸರ್ಕಾರ ಬರಗಾಲ ಪೀಡಿತ ತಾಲ್ಲೂಕುಗಳ ಘೋಷಣೆಯಲ್ಲಿ ತಾರತಮ್ಯ ನೀತಿ ಅನುಸರಿಸಿದೆ ಎಂದು ಕರ್ನಾಟಕ...