Home namma chikmagalur chikamagalur ಕಡೂರು ತಾಲೂಕು ಸರ್ಕಾರದ ಬರಪಟ್ಟಿಗೆ ವೈ.ಎಸ್.ವಿ. ದತ್ತಾ ಆಗ್ರಹ
chikamagalurHomeLatest Newsnamma chikmagalur

ಕಡೂರು ತಾಲೂಕು ಸರ್ಕಾರದ ಬರಪಟ್ಟಿಗೆ ವೈ.ಎಸ್.ವಿ. ದತ್ತಾ ಆಗ್ರಹ

Share
Share
ಕಡೂರು: ಇಡೀ ಜಿಲ್ಲೆಯಲ್ಲಿ ಅತ್ಯಂತ ಬರಗಾಲಕ್ಕೆ ತುತ್ತಾಗಿರುವ ತಾಲೂಕು ಎಂದರೆ ಕಡೂರು ತಾಲೂಕು, ಈ ಸಾಲಿನಲ್ಲಿ ಪ್ರಾರಂಭದಿಂದಲೂ  ಮಳೆ ಬಂದಿಲ್ಲ, ಮುಂಗಾರು ಬಿತ್ತನೆ ಆಗಿಲ್ಲ, ಆಗಸ್ಟ್ ತಿಂಗಳು ಕಳೆಯುತ್ತಾ ಬಂದರು ರಾಗಿ ಬಿತ್ತನೆ ಕಾರ್ಯ ಮಾಡಿಲ್ಲ, ತಾಲೂಕಿನ ಯಾವುದೇ ಕೆರೆಕಟ್ಟೆಗಳಲ್ಲಿ ನೀರಿಲ್ಲ, ಜಾನುವಾರುಗಳಿಗೆ ಮೇವಿಲ್ಲ, ಎನ್ ಆರ್ ಪುರ, ಕೊಪ್ಪ ತಾಲೂಕುಗಳನ್ನು ಬರಪಟ್ಟಿಗೆ ಸೇರಿಸಲಾಗಿದೆ ಮಳೆ ಬಾರದ ಕಡೂರು ತಾಲೂಕು ಬರ ಪಟ್ಟಿಯಿಂದ ಬಿಟ್ಟುಹೋಗಿದೆ. ಎರಡನೆಯ ಪಟ್ಟಿಯಲ್ಲಾದರೂ ಕಡೂರು ತಾಲೂಕು ಸರ್ಕಾರದ ಬರಪಟ್ಟಿಗೆ ಸೇರಿಸಬೇಕಿದೆ ಎಂದು ಮಾಜಿ ಶಾಸಕರಾದ ವೈ.ಎಸ್.ವಿ. ದತ್ತಾ ಅವರು ರೈತರೊಂದಿಗೆ ಎರಡು ದಿನಗಳ ಕಾಲ ಪಾದಯಾತ್ರೆ ನಡೆಸಿ ಶನಿವಾರ ತಹಸಿಲ್ದಾರ್ ಪೂರ್ಣಿಮಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ನಂತರ ವೈ ಎಸ್ ವಿ ದತ್ತಾರವರು ರೈತರನ್ನು ಉದ್ದೇಶಿಸಿ ಮಾತನಾಡಿ ತಾಲೂಕಿನಲ್ಲಿ ಮಳೆ ಇಲ್ಲದೆ ಎಲ್ಲ ರೈತರು ಸಂಕಷ್ಟದಲ್ಲಿದ್ದು ಅವರ ಧ್ವನಿಯಾಗಿ ಸರ್ಕಾರಕ್ಕೆ ಗಮನ ಸೆಳೆಯಲು ಪಾದಯಾತ್ರೆ ನಡೆಸಲಾಗಿದೆ. ತಾವೂ ಕೂಡ ಐದು ವರ್ಷ ಶಾಸಕನಾಗಿ ಹೋರಾಟ ಮಾಡಿ ಬರಪೀಡಿತ ಎಂದು ಘೋಷಣೆ ಮಾಡಿಸಿಕೊಳ್ಳಲಾಗಿತ್ತು. ತಾಲೂಕಿಗೆ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು, ಸಂಬಂಧಿಸಿದ ಎಲ್ಲ ಇಲಾಖೆ ಅಧಿಕಾರಿಗಳು ಬರಪೀಡಿತ ಗ್ರಾಮಗಳಿಗೆ ಕುದ್ದು ಬೇಟಿ ನೀಡಿ ಪರಿಶೀಲಿಸಿರುತ್ತಾರೆ. ಜಿಲ್ಲೆಯಲ್ಲಿ ಅಜ್ಜಂಪುರ, ತರೀಕೆರೆ, ಎನ್ ಆರ್ ಪುರ, ಕೊಪ್ಪ ಸೇರಿದೆ, ಕಡೂರು ತಾಲೂಕು ಸೇರದೆ ಇರಲು ಕಾರಣವೇನು, ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲು ಕಾಲುಹಿಡಿಯುವಂತಾಗಿದೆ ಎಂದರು.
ಪದೇ ಪದೇ ಬರಗಾಲಕ್ಕೆ ತುತ್ತಾಗುತ್ತಿರುವ ತಾಲೂಕಿಗೆ ಶಾಶ್ವತ ಪರಿಹಾರವೆಂದರೆ ಈ ಹಿಂದೆ ಮಂಜೂರಾಗಿ ಅಪೂರ್ಣವಾಗಿರುವ 32 ಕೆರೆಗಳಿಗೆ ನೀರು ತುಂಬಿಸುವ ತುಮಕೂರು ಶಾಖ ಕಾಲುವೆ ಯೋಜನೆಯನ್ನು ಈ ಆರ್ಥಿಕ ವರ್ಷದಲ್ಲಿ ಪೂರ್ಣಗೊಳಿಸಬೇಕು. ತಾಲೂಕಿನ ಸಾವಿರಾರು ರೈತರು ಬೆಳೆ ವಿಮೆ ಹಣ ಪಾವತಿಸಿದ್ದು ಬಿತ್ತನೆ ಕೂಡ ಆಗಿರುವುದಿಲ್ಲ, ಈ ಹಿನ್ನೆಲೆಯಲ್ಲಿ ಬಿತ್ತನೆಯಾಗದಿದ್ದರೂ ಸಹ ವಿಶೇಷ ವರ್ಗದ ಅಡಿಯಲ್ಲಿ ಎಲ್ಲಾ ರೈತರಿಗೂ ವಿಮೆ ಪರಿಹಾರ ನೀಡಬೇಕು, ತಾಲೂಕಿನ ರೈತರು ಸಹಕಾರಿ ಸಂಘಗಳಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲ ಪಡೆದಿದ್ದು ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಸಂಪೂರ್ಣವಾಗಿ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಲಾಗುವುದು. ಸೆಪ್ಟೆಂಬರ್ 15ರ ಒಳಗೆ ಬರಪಟ್ಟಿಗೆ ಸೇರ್ಪಡೆ ಆಗದಿದ್ದರೆ ತಹಶೀಲ್ದಾರ್ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ತಾಲೂಕ್ ಅಧ್ಯಕ್ಷ ಕೆ ಮಹೇಶ್ವರಪ್ಪ, ಪ್ರೇಮ್ ಕುಮಾರ್, ಬಿದರೆ ಜಗದೀಶ್, ಗಂಗಾಧರ್ ನಾಯ್ಕ, ಡಿ. ಪ್ರಶಾಂತ್, ವಿರೂಪಾಕ್ಷಪ್ಪ, ಪಾಲಾಕ್ಷಪ್ಪ, ಅಶೋಕ್.  ಪ್ರಕಾಶ್. ಗುಜ್ಜೇನಳ್ಳಿ ಶಂಕ್ರಪ್ಪ, ಪಾತೇನಹಳ್ಳಿ ಚೌಡಪ್ಪ, ಬ್ಯಾಗಡೆಹಳ್ಳಿ ಕುಮಾರ್, ಮಂಜುನಾಥ್ ಅಪಾರ ಸಂಖ್ಯೆಯಲ್ಲಿ ರೈತರು, ರೈತ ಮಹಿಳೆಯರು ಭಾಗವಹಿಸಿದ್ದರು.
Y.S.V. Dutta demands for the receipt of the Kadur taluk government
Share

Leave a comment

Leave a Reply

Your email address will not be published. Required fields are marked *

Don't Miss

ಅಧಿಕಾರ ಎಂಬ ಮಾಯಾ ಜಿಂಕೆ ಮರೆಯಾಗಿದ್ದು ಏಕೆ ?

ಚಿಕ್ಕಮಗಳೂರು: ಕಳೆದ ನಾಲ್ಕು ವರೆ ವರ್ಷಗಳ ಹಿಂದೆಯೇ ವಿಧಾನ ಪರಿಷತ್ ಸದಸ್ಯರಾಗ ಬೇಕಿದ್ದ ಗಾಯಿತ್ರಿ ಶಾಂತೇಗೌಡ ಅಧಿಕಾರ ಪಡೆಯಲು ಹೈಕೋರ್ಟ್, ಸುಪ್ರೀಂ ಕೋರ್ಟ್ ನಲ್ಲಿ ಕೋಟ್ಯಾಂತರ ಹಣ ಖರ್ಚು ಮಾಡಿ ನ್ಯಾಯಲಯದ...

ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ-ಲೂಟಿಗಾಗಿ ಪೈಪೋಟಿ

ಚಿಕ್ಕಮಗಳೂರು: ಬಿಜೆಪಿ ಸರ್ಕಾರದಲ್ಲಿ ಶಾಸಕರ ನಡುವೆ ಕ್ಷೇತ್ರದ ಅಭಿವೃದ್ಧಿಗೆ ಪೈಪೋಟಿ ನಡೆದರೆ, ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ,ಲೂಟಿಗಾಗಿ ಪೈಪೋಟಿ ನಡೆಯುತ್ತಿದೆ. ಇದೇ ಪರಿಸ್ಥಿತಿ ಮುಂದುವರೆದರೆ ರಾಜಕೀಯವಾಗಿ ರಸ್ತೆಬಿದ್ದಿರುವ ಗುಂಡಿಯಲ್ಲಿ ಮುಚ್ಚುತ್ತಾರೆಂದು ವಿಧಾನಪರಿಷತ್ ಸದಸ್ಯ...

Related Articles

ಮಲೆನಾಡಿನ ಮಡಿಲಲ್ಲಿ ಜ್ಞಾನದ ಎರಡು ದೀಪಗಳು

ಜಯಪುರದ ಶ್ರೀ ಸತ್ಯಸಾಯಿ ದಿವ್ಯ ನಿಕೇತನಂ ಮತ್ತು ಶ್ರೀ ಸತ್ಯಸಾಯಿ ಶ್ರೀ ನಿಕೇತನಂನಲ್ಲಿ ಉಚಿತ ಶಿಕ್ಷಣದೊಂದಿಗೆ...

ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ನಗರದ ಟಿಪ್ಪುನಗರದಲ್ಲಿ ಈದ್ ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬೃಹತ್ ಕಟೌಟ್‌ಗೆ...

ಕಡೂರು, ಚಿಕ್ಕಮಗಳೂರು ತಾಲ್ಲೂಕುಗಳನ್ನು ಬರಪಟ್ಟಿಗೆ ಸೇರಿಸಲು ರೈತ ಸಂಘ ಆಗ್ರಹ

ಚಿಕ್ಕಮಗಳೂರು: ರಾಜ್ಯ ಸರ್ಕಾರ ಬರಗಾಲ ಪೀಡಿತ ತಾಲ್ಲೂಕುಗಳ ಘೋಷಣೆಯಲ್ಲಿ ತಾರತಮ್ಯ ನೀತಿ ಅನುಸರಿಸಿದೆ ಎಂದು ಕರ್ನಾಟಕ...

ಬಸ್ ಹತ್ತುವ ವೇಳೆ ₹2.33 ಲಕ್ಷ ಮೌಲ್ಯದ ಚಿನ್ನದ ಬ್ರೇಸ್‌ಲೆಟ್ ಕಳವು

ಚಿಕ್ಕಮಗಳೂರು: ಬಸ್ ಹತ್ತುವ ವೇಳೆ ಉಂಟಾದ ಜನದಟ್ಟಣೆಯನ್ನೇ ದುರುಪಯೋಗಪಡಿಸಿಕೊಂಡು ವ್ಯಕ್ತಿಯೊಬ್ಬರ ಕೈಯಲ್ಲಿದ್ದ ₹2.33 ಲಕ್ಷ ಮೌಲ್ಯದ...