Home namma chikmagalur chikamagalur ಆರೋಪಿಯಿಂದ ₹11.30 ಲಕ್ಷ ಮೌಲ್ಯದ 71 ಗ್ರಾಂ ಚಿನ್ನಾಭರಣ ವಶ
chikamagalurCrime NewsHomeLatest Newsnamma chikmagalur

ಆರೋಪಿಯಿಂದ ₹11.30 ಲಕ್ಷ ಮೌಲ್ಯದ 71 ಗ್ರಾಂ ಚಿನ್ನಾಭರಣ ವಶ

Share
Share

ಎನ್.ಆ‌ರ್. ಪುರ: ಮನೆಯ ಹಂಚು ತೆಗೆದು ಒಳನುಗ್ಗಿ, ಮಲಗಿದ್ದ ಮಹಿಳೆಯ ಕೊರಳಿನಿಂದ ಮಾಂಗಲ್ಯ ಸರ ಎಗರಿಸಿದ್ದ ಆರೋಪಿಯನ್ನು ಎನ್.ಆ‌ರ್.ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ₹11.30 ಲಕ್ಷ ಮೌಲ್ಯದ 71 ಗ್ರಾಂ ಚಿನ್ನಾಭರಣ, ಚಿನ್ನದ ಗಟ್ಟಿ ಹಾಗೂ ಕೃತ್ಯಕ್ಕೆ ಬಳಸಿದ್ದ ಸ್ಕೂಟರ್ ಅನ್ನು ವಶಪಡಿಸಿಕೊಂಡಿದ್ದಾರೆ.

ಸುಗ್ಗಪ್ಪನಮಠ, ನಾಗ್ಲಾಪುರ ಗ್ರಾಮದ ರಮೇಶ್ (55) ಬಂಧಿತ ಆರೋಪಿಯಾಗಿದ್ದಾನೆ. ಆಗಸ್ಟ್ 13ರಂದು ಮಧ್ಯರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಮೇಲ್ಮಾವಣಿಯ ಹಂಚು ತೆಗೆದು ಒಳನುಗ್ಗಿದ್ದ ಈತ, ಮಹಿಳೆಯ ಕೊರಳಿನಲ್ಲಿದ್ದ ಸುಮಾರು ₹1.70 ಲಕ್ಷ ಮೌಲ್ಯದ 17 ಗ್ರಾಂ ತೂಕದ ಚಿನ್ನದ ತಾಳಿ ಸರವನ್ನು ಕಿತ್ತುಕೊಂಡು ಮನೆಯ ಹಿಂಬಾಗಿಲಿನಿಂದ ಪರಾರಿಯಾಗಿದ್ದನು. ಈ ಸಂಬಂಧ ಎನ್.ಆ‌ರ್. ಪುರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಬೆನ್ನತ್ತಿದ ಪೊಲೀಸರು ತಾಂತ್ರಿಕ ವಿಭಾಗದ ನೆರವಿನೊಂದಿಗೆ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಈತ ಈ ಹಿಂದೆ ಇದೇ ಫಿರ್ಯಾದುದಾರರ ಮನೆಯಲ್ಲಿ ಚಿನ್ನ ಕಳ್ಳತನ ಮಾಡಿದ್ದಲ್ಲದೆ, ಸಿಗುವಾನಿಯ ಜಾನಕಿ ಎಂಬುವವರ ಮನೆಯಲ್ಲೂ ಕಳವು ಮಾಡಿರುವುದು ಬಯಲಾಗಿದೆ. ಈ ಮೂಲಕ 2025ರ ಹಳೆಯ ಕಳ್ಳತನ ಪ್ರಕರಣವೂ ಸೇರಿದಂತೆ ಎರಡು ಪ್ರಮುಖ ಪ್ರಕರಣಗಳು ಪತ್ತೆಯಾಗಿವೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಹೆಚ್ಚುವರಿ ಎಸ್ಪಿ, ಕೊಪ್ಪ ಡಿವೈಎಸ್‌ಪಿ ಎಂ.ಜೆ. ಬಾಲಾಜಿ ಸಿಂಗ್ ಹಾಗೂ ಸಿಪಿಐ ಗುರುದತ್ ಕಾಮತ್ ಅವರ ಮಾರ್ಗದರ್ಶನದಲ್ಲಿ ಪಿಎಸ್‌ಐ ನೂತನ್ ಡಿ.ಇ., ಜ್ಯೋತಿ ಎನ್.ಎ. ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ಬಹುಮಾನ ಘೋಷಿಸಿ ಶ್ಲಾಘಿಸಿದ್ದಾರೆ.

71 grams of gold ornaments worth ₹11.30 lakh seized from the accused

Share

Leave a comment

Leave a Reply

Your email address will not be published. Required fields are marked *

Don't Miss

ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಎಐಟಿಯುಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು:  ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯ ರು ಮತ್ತು ಸಹಾಯಕಿಯರ ಫೆಡೆರೇಷನ್‌ನ ಜಿಲ್ಲಾ ಘಟಕವು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ನೂರಾ ರು ಮಹಿಳೆಯರು ಮಂಗಳವಾರ ಪ್ರತಿಭಟಿಸುವ ಮೂಲಕ ಭರವಸೆ...

ಎನ್.ಐ.ಏ ತನಿಖೆಗೆ ಹಿಂದೂ ಹಿತರಕ್ಷಣಾ ವೇದಿಕೆ ಆಗ್ರಹ

ಚಿಕ್ಕಮಗಳೂರು: ನಗರದ ಟಿಪ್ಪುನಗರದಲ್ಲಿ ಈದ್-ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬೃಹತ್ ಬ್ಯಾನರ್‌ಗೆ ಪಾಕಿಸ್ತಾನಕ್ಕೆ ಸಂಬಂಧಿಸಿದ ಹಾಡು ಹಾಕಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಗೆ...

Related Articles

ತಹಸೀಲ್ದಾರ್ ನಿಲುವಿನ ವಿರುದ್ಧ ಮಾಜಿ ಶಾಸಕ ಕುಮಾರಸ್ವಾಮಿ ಅಸಮಾಧಾನ

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಅವರು ಸಾರ್ವಜನಿಕರೊಂದಿಗೆ ದರ್ಪದಿಂದ ನಡೆದುಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು,...

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು

ಚಿಕ್ಕಮಗಳೂರು: ಈಜಲು ತೆರಳಿದ್ದ 23 ವರ್ಷದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ...

ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು: ಪತ್ನಿಯನ್ನು ಕತ್ತು ಹಿಸುಕಿ ಹಾಗೂ ಮೂಗು–ಬಾಯಿ ಮುಚ್ಚಿ ಉಸಿರುಗಟ್ಟಿಸಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪ...

ಅಜ್ಜಂಪುರದಲ್ಲಿ 85 ಚೀಲ ಪಡಿತರ ಅಕ್ಕಿ ಅಕ್ರಮ ಸಾಗಾಟ ಪತ್ತೆ

ಅಜ್ಜಂಪುರ: ಯಾವುದೇ ಪರವಾನಗಿ ಅಥವಾ ದಾಖಲೆಗಳಿಲ್ಲದೆ ಪಡಿತರ ಅಕ್ಕಿಯನ್ನು ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ...