Home Crime News ತೋಟದಲ್ಲಿ ಮಹಿಳೆಯ ಕುತ್ತಿಗೆಯಲ್ಲಿದ್ದ ₹6.30 ಲಕ್ಷ ಮೌಲ್ಯದ ಚಿನ್ನದ ಸರ ಕಳವು
Crime NewsHomeLatest Newsnamma chikmagalur

ತೋಟದಲ್ಲಿ ಮಹಿಳೆಯ ಕುತ್ತಿಗೆಯಲ್ಲಿದ್ದ ₹6.30 ಲಕ್ಷ ಮೌಲ್ಯದ ಚಿನ್ನದ ಸರ ಕಳವು

Share
Share

ಕಡೂರು: ತೋಟದಲ್ಲಿ ಹಸುಗಳನ್ನು ಮೇಯಿಸುತ್ತಿದ್ದ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಸುಮಾರು ₹6.30 ಲಕ್ಷ ಮೌಲ್ಯದ 45 ಗ್ರಾಂ ತೂಕದ ಎರಡು ಎಳೆಯ ಬಂಗಾರದ ಸರವನ್ನು ವ್ಯಕ್ತಿಯೊಬ್ಬ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಕಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆ.4ರಂದು ನಡೆದಿದೆ.

ಕಡೂರು ತಾಲೂಕಿನ ಸಿ.ಜೆ. ನಂಜಮ್ಮ (ಪತಿ ಶಂಕರಲಿಂಗಪ್ಪ) ಅವರು ನೀಡಿರುವ ದೂರಿನ ಆಧಾರದ ಮೇಲೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರಿನ ಪ್ರಕಾರ, ನಂಜಮ್ಮ ಅವರು ಸೆ.4ರಂದು ಬೆಳಗ್ಗೆ ಸುಮಾರು 11 ಗಂಟೆಗೆ ತಮ್ಮ ಮನೆಯ ಎರಡು ಹಸುಗಳನ್ನು ಮೇಯಿಸಲು ಗ್ರಾಮದ ಸಮೀಪದ ತೋಟಕ್ಕೆ ತೆರಳಿದ್ದರು. ಗ್ರಾಮದಿಂದ ಸುಮಾರು ಒಂದು ಕಿ.ಮೀ. ದೂರದಲ್ಲಿರುವ ಮತ್ತಿಘಟ್ಟಕ್ಕೆ ಹೋಗುವ ರಸ್ತೆಯ ಪಕ್ಕದಲ್ಲಿರುವ ತಮ್ಮ ತೋಟದಲ್ಲಿ ಹಸುಗಳನ್ನು ಮೇಯಲು ಬಿಟ್ಟು, ತೆಂಗಿನ ಮರದ ನೆರಳಿನಲ್ಲಿ ಕುಳಿತಿದ್ದರು.

ಮಧ್ಯಾಹ್ನ ಸುಮಾರು 1.30ರ ವೇಳೆಗೆ ಕರಿಯನಹಳ್ಳಿ ಗ್ರಾಮದ ಕಡೆಯಿಂದ ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬ ತೋಟದ ಬಳಿ ಬೈಕ್ ನಿಲ್ಲಿಸಿದ್ದ. ಈ ವೇಳೆ ನಂಜಮ್ಮ ಅವರು ಆತನನ್ನು ಮಾತನಾಡಿಸಿ ಸಮಯ ಕೇಳಿದ್ದು, ಆತ 1.30 ಗಂಟೆಯಾಗಿದೆ ಎಂದು ತಿಳಿಸಿ ಮತ್ತಿಘಟ್ಟದ ಕಡೆಗೆ ತೆರಳಿದ್ದ ಎನ್ನಲಾಗಿದೆ.

ಸ್ವಲ್ಪ ಸಮಯದ ಬಳಿಕ ಅದೇ ವ್ಯಕ್ತಿ ಹಿಂದಿನಿಂದ ಬಂದು ನಂಜಮ್ಮ ಅವರ ಭುಜವನ್ನು ಒತ್ತಿಹಿಡಿದು, ಎದ್ದೇಳಲು ಬಿಡದೆ ಕುತ್ತಿಗೆಯಲ್ಲಿದ್ದ ಸುಮಾರು 45 ಗ್ರಾಂ ತೂಕದ ಎರಡು ಎಳೆಯ ಬಂಗಾರದ ಸರವನ್ನು ಕಿತ್ತುಕೊಂಡಿದ್ದಾನೆ. ಈ ವೇಳೆ ನಂಜಮ್ಮ ಅವರು ಕೂಗಾಡಿದರೂ ಆರೋಪಿ ಸರ ಕಿತ್ತುಕೊಂಡು ಅಲ್ಲಿಂದ ಓಡಿ ಹೋಗಿದ್ದಾನೆ.

ನಂತರ ನಂಜಮ್ಮ ಅವರು ಆರೋಪಿಯ ಹಿಂದೆ ಓಡಿದರಾದರೂ ವಯಸ್ಸಾದ ಕಾರಣ ಸ್ವಲ್ಪ ದೂರದಲ್ಲೇ ನಿಲ್ಲಬೇಕಾಯಿತು. ಆರೋಪಿ ಮುಂದೆ ನಿಲ್ಲಿಸಿದ್ದ ತನ್ನ ಬೈಕ್ ಏರಿ ಮತ್ತಿಘಟ್ಟ ಗ್ರಾಮದ ರಸ್ತೆಯ ಕಡೆಗೆ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಆರೋಪಿಯು ಕೋಲು ಮುಖ, ಕಪ್ಪು ಮೈಬಣ್ಣ ಹೊಂದಿದ್ದು, ಕಾಫಿ ಬಣ್ಣದ ಶರ್ಟ್ ಧರಿಸಿದ್ದ ಎಂದು ನಂಜಮ್ಮ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನೆಯ ಬಳಿಕ ಮನೆಗೆ ಹಿಂದಿರುಗಿದ ನಂಜಮ್ಮ ಅವರು ತಮ್ಮ ಮಕ್ಕಳಾದ ಸುರೇಶ್ ಹಾಗೂ ಶಿವಕುಮಾರ್ ಅವರಿಗೆ ವಿಷಯ ತಿಳಿಸಿ, ಅವರೊಂದಿಗೆ ಕಡೂರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಕಳುವಾದ ಎರಡು ಎಳೆಯ ಬಂಗಾರದ ಸರದ ಅಂದಾಜು ಮೌಲ್ಯ ₹6,30,000 ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.

Gold chain worth Rs 6.30 lakh stolen from woman’s neck in garden

Share

Leave a comment

Leave a Reply

Your email address will not be published. Required fields are marked *

Don't Miss

ಆಲ್ದೂರಿನಲ್ಲಿ ಟೈಲ್ಸ್ ಮೇಲೆ ಜಾರಿ ಬಿದ್ದ ರೈತ ಸಾವು

ಆಲ್ದೂರು: ಅಡುಗೆ ಮನೆಯ ನೆಲದ ಮೇಲೆ ಬಿದ್ದಿದ್ದ ನೀರನ್ನು ಗಮನಿಸದೆ ಟೈಲ್ಸ್ ಮೇಲೆ ಕಾಲಿಟ್ಟು ಜಾರಿ ಬಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯ ತೋರಣ ಮಾವು ಗ್ರಾಮದಲ್ಲಿ...

ಕಲ್ಯಾಣನಗರ 5ನೇ ಕ್ರಾಸ್‌ನಲ್ಲಿ ಮಹಿಳೆಯ ಮಾಂಗಲ್ಯ ಸರ ಕಳವು

ಚಿಕ್ಕಮಗಳೂರು: ಭಜನೆ ಮುಗಿಸಿಕೊಂಡು ಸ್ನೇಹಿತೆಯೊಂದಿಗೆ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಗೃಹಿಣಿಯೊಬ್ಬರ ಕುತ್ತಿಗೆಯಿಂದ ಬೈಕ್‌ನಲ್ಲಿ ಬಂದ ಇಬ್ಬರು ಹೆಲ್ಮೆಟ್ ಧರಿಸಿದ ವ್ಯಕ್ತಿಗಳು ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನಗರದ ಕಲ್ಯಾಣನಗರ...

Related Articles

“ತಮ್ಮಯ್ಯಾ… ಯಾರಯ್ಯಾ ನಿನ್ನ ಮೇಲೆ ಸೋತದ್ದು ಸಿ.ಟಿ.ರವಿ

ಬೀರೂರು (ಚಿಕ್ಕಮಗಳೂರು): “ತಮ್ಮಯ್ಯಾ… ಯಾರಯ್ಯಾ ನಿನ್ನ ಮೇಲೆ ಸೋತದ್ದು ಸಿ.ಟಿ.ರವಿ…”  ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ...

ಹಂದಿಗಳು ಅಡ್ಡ ಬಂದಾಗ ಸ್ಕೂಟಿಗೆ ಬ್ರೇಕ್: ರಸ್ತೆಗೆ ಬಿದ್ದು ಯುವಕ ಸಾವು

ಚಿಕ್ಕಮಗಳೂರು: ರಸ್ತೆಗೆ ಹಂದಿಗಳು ಏಕಾಏಕಿ ಅಡ್ಡ ಬಂದ ಪರಿಣಾಮ ಸ್ಕೂಟಿಗೆ ಬ್ರೇಕ್ ಹಾಕಿದಾಗ ಹಿಂಬದಿ ಸವಾರ...

ಬೊಲೆರೋ ಪಿಕಪ್ ಡಿಕ್ಕಿ: ಬೈಕ್ ಹಿಂಬದಿ ಸವಾರ ಸಾವು

ಸಕ್ಕರಾಯಪಟ್ಟಣ: ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿದ ಬೊಲೆರೋ ಪಿಕಪ್ ವಾಹನವು ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ...

ಕಾಡಾನೆ-ಕಾಡುಕೋಣ ದಾಳಿಯಿಂದ ಭೀತಿಯಲ್ಲಿ ಕಾರ್ಮಿಕರು

ಮೂಡಿಗೆರೆ: ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಬೆಳೆಗಾರರು ಹಾಗೂ ಕಾರ್ಮಿಕರು ಆತಂಕದಲ್ಲಿ ದಿನದೂಡುತ್ತಿದ್ದಾರೆ. ಒಂದೆಡೆ...