Home namma chikmagalur chikamagalur ಸಚಿವ ಕೃಷ್ಣಬೈರೇಗೌಡ ಹೇಳಿಕೆ ಖಂಡನೀಯ
chikamagalurHomeLatest Newsnamma chikmagalur

ಸಚಿವ ಕೃಷ್ಣಬೈರೇಗೌಡ ಹೇಳಿಕೆ ಖಂಡನೀಯ

Share
Share

ಚಿಕ್ಕಮಗಳೂರು- ಬೆಂಗಳೂರು ನಗರ ಪರಿಶೀಲನೆ ಮಾಡುವ ಸಂದರ್ಭದಲ್ಲಿ ಸಚಿವ ಕೃ?ಬೈರೇಗೌಡರು ಪೌರಕಾರ್ಮಿಕರ ಬಗ್ಗೆ ತುಚ್ಚವಾಗಿ ಮಾತನಾಡಿರುವುದನ್ನು ಬಹುಜನ ಸಮಾಜ ಪಾರ್ಟಿ ರಾಜ್ಯ ಕಾರ್ಯದರ್ಶಿ ಕೆ.ಬಿ ಸುಧಾ ಖಂಡಿಸಿದ್ದಾರೆ.

ತಲತಲಾಂತರಗಳಿಂದ ಒಂದು ಜಾತಿಗೆ ಸೀಮಿತ ಗೊಂಡಿರುವ ಪೌರಕಾರ್ಮಿಕರ ವೃತ್ತಿಯನ್ನು ಸೇವಾ ಮನೋಭಾವದಿಂದ ನಿರ್ವಹಿಸಿಕೊಂಡು ಬರುತ್ತಿದ್ದಾರೆ. ಸುಮಾರು ಶೇ.೩೦ ರ? ಕಾರ್ಮಿಕರು ಸೇವೆಯನ್ನು ನಿರ್ವಹಿಸುತ್ತಿಲ್ಲ ಎಂದು ಹೇಳುತ್ತಾ ಪುಕ್ಕಟೆಯಾಗಿ ಪಗಾರ ಪಡೆಯುತ್ತಿದ್ದಾರೆ ಎಂದು ವೃತ್ತಿಗೆ ಅವಮಾನಿಸಿದ್ದಾರೆ.

ಈ ರೀತಿ ಮಾತನಾಡುವ ನೀವು ನಿಮ್ಮ ವರ್ಗದವರು ಎ? ಪೌರಕಾರ್ಮಿಕ ವೃತ್ತಿಯನ್ನು ನಿರ್ವಹಿಸುತ್ತಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ. ಪೌರಕಾರ್ಮಿಕರನ್ನು ಹೊರತುಪಡಿಸಿ ಬಹುತೇಕ ಇಲಾಖೆಗಳು ಲಂಚಾವತಾರ ಇರುವುದು ನೀವು ಮೊದಲಿನಿಂದ ಕಂಡುಕೊಂಡಿದ್ದೀರಿ ಎಂದು ಭಾವಿಸಿದ್ದೇನೆ.

ಕೇವಲ ಸೇವೆಗೆ ಮಾತ್ರ ಸೀಮಿತ ಗೊಂಡಿರುವವರು ಪೌರಕಾರ್ಮಿಕರು ಎಂಬುದನ್ನು ಅರಿಯಬೇಕು. ಪ್ರತಿ ಮನೆಯಿಂದ ಅಸಹ್ಯಕರವಾದ ಕಸ ಹೊರಬೀಳುತ್ತಿದ್ದು, ಇದನ್ನು ಎರಡು ಕೈಗಳಿಂದ ಎತ್ತಿ ಇಡೀ ಊರನ್ನು ಶುಚಿ ಮಾಡುತ್ತಿದ್ದಾರೆ ಇವರನ್ನು ಗೌರವಿಸದೆ ಮಾತನಾಡುವ ಬರದಲ್ಲಿ ತುಚ್ಚವಾಗಿ ನಿಂದಿಸಿರುವುದು ಇನ್ನು ಮುಂದೆ ಮಾಡಬೇಡಿ ಎಂದು ಒತ್ತಾಯಿಸಿದರು.

ಇದರ ಬದಲಾಗಿ ಬಹು ಸಂಖ್ಯೆಗನುಗುಣವಾಗಿ ಕಸ ವಿಲೇವಾರಿ ಮಾಡುವ ಅನುಪಾತದಲ್ಲಿ ಪೌರ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಿ, ಈಗಾಗಲೇ ದಿನಗೂಲಿಯಲ್ಲಿ ಕೆಲಸ ಮಾಡುತ್ತಿರುವ ನೂರಾರು ಪೌರಕಾರ್ಮಿಕರ ಹುದ್ದೆಯನ್ನು ಖಾಯಂಗೊಳಿಸಿ ಎಂದು ಒತ್ತಾಯ ಮಾಡಿದ್ದಾರೆ.

The stance taken by Minister Krishna Byre Gowda regarding civic workers is condemnable.

Share

Leave a comment

Leave a Reply

Your email address will not be published. Required fields are marked *

Don't Miss

ಪ್ರವಾಸೋದ್ಯಮ ತಾಣಗಳಿಗೆ ಮೂಲಸೌಕರ್ಯಕ್ಕೆ ಆಗ್ರಹಿಸಿ ಕರವೇ ಧರಣಿ

ಚಿಕ್ಕಮಗಳೂರು:  ಮಲೆನಾಡಿನ ಪಶ್ಚಿಮ ಘಟ್ಟ ಪ್ರವಾಸೋದ್ಯಮದ ಹಲವಾರು ಸಮಸ್ಯೆಗಳ ನ್ನು ಪರಿಹರಿಸುವಲ್ಲಿ ವಿಫಲವಾಗಿರುವ ಜಿಲ್ಲಾಡಳಿತ ವಿರುದ್ಧ ಸೋಮವಾರ ಜಿಲ್ಲಾ ಕರವೇ (ಶಿವರಾಮೇ ಗೌಡ ಬಣ) ಮುಖಂಡರುಗಳು ಅರೆಬೆತ್ತಲಾಗಿ, ಬಾಯಿಗೆ ಕಪ್ಪುಪಟ್ಟಿ ಕಟ್ಟಿಕೊಂಡು,...

ಮಲ್ಲೇಗೌಡ ಆಸ್ಪತ್ರೆ ಆರೋಗ್ಯ ಸೇವೆ ಬಲಪಡಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಸೋಮವಾರ ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳ ಕಾರ್ಯವೈಖರಿ ಹಾಗೂ ಸಾರ್ವಜನಿಕರಿಗೆ ಸಿಗುತ್ತಿರುವ ಆರೋಗ್ಯ ಸೇವೆಗಳನ್ನು...

Related Articles

ಜಯಪುರ ಠಾಣೆಯ ಮಹಿಳಾ ಸಿಬ್ಬಂದಿಗೆ ಬಾಗಿನ

ಕೊಪ್ಪ : ಹಬ್ಬ-ಹರಿದಿನಗಳಲ್ಲೂ ಕರ್ತವ್ಯದಲ್ಲೇ ನಿರತರಾಗಿರುವ ಪೊಲೀಸ್ ಸಿಬ್ಬಂದಿಯ ಮೊಗದಲ್ಲಿ ಹಬ್ಬದ ಸಂಭ್ರಮ ಮೂಡಿಸುವ ಅರ್ಥಪೂರ್ಣ...

ಟ್ರಾಕ್ಟರ್ ಹರಿಸಿ ₹1.15 ಲಕ್ಷ ಮೌಲ್ಯದ ರಾಗಿ ಬೆಳೆ ನಾಶ

ತರೀಕೆರೆ : ನ್ಯಾಯಾಲಯದ ಸ್ಪಷ್ಟ ತಡೆಯಾಜ್ಞೆ ಇದ್ದರೂ ಅದ್ಯಾವುದನ್ನೂ ಲೆಕ್ಕಿಸದೆ, ಜಮೀನಿಗೆ ಅಕ್ರಮವಾಗಿ ನುಗ್ಗಿ ಕಟಾವಿಗೆ...

ಮುಂದಿನ ದಿನಗಳಲ್ಲಿ ದೇವಾಲಯದ ಜಿರ್ಣೋದ್ದಾರಕ್ಕೆ ಅನುದಾನ

ಬೀರೂರು:ಕಾಂಗ್ರೆಸ್ ಸರಕಾರದಲ್ಲಿ ನನ್ನಂತ ಹಿಂದುಳಿದ ವರ್ಗದ ಶಾಸಕನಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿದ ಮಾಜಿ ಮುಖ್ಯಮಂತ್ರಿ...

ಗಂಗೆ ಪೂಜೆ ನೆರವೇರಿಸಿ ಸ್ವರ್ಣಗೌರಿ ಮನೆ ತುಂಬಿಸಿಕೊಂಡ ಮಹಿಳೆಯರು

ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ದೇವನಗುಲ್ ಗ್ರಾಮದ ದೊಡ್ಡಬಾವಿ ಹಳ್ಳದಲ್ಲಿ ಸೋಮವಾರ ಮಹಿಳೆಯರು ಸಂಪ್ರದಾಯಬದ್ಧವಾಗಿ...