Home namma chikmagalur chikamagalur ಜಿಲ್ಲೆಯಲ್ಲಿಂದು ಮುಖ್ಯಮಂತ್ರಿ ಪ್ರವಾಸ
chikamagalurHomeLatest Newsnamma chikmagalur

ಜಿಲ್ಲೆಯಲ್ಲಿಂದು ಮುಖ್ಯಮಂತ್ರಿ ಪ್ರವಾಸ

Share
Share

ಚಿಕ್ಕಮಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೆಪ್ಟೆಂಬರ್ ೧೯ ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ ೧೯ ರಂದು ಮಧ್ಯಾಹ್ನ ೧ ಗಂಟೆಗೆ ಎನ್.ಆರ್.ಪುರ ತಾಲ್ಲೂಕಿನ ಬಾಳೆಹೊನ್ನೂರು ರಂಭಾಪುರಿ ಮಠದ ಆವರಣದಲ್ಲಿರುವ ಹೆಲಿಪ್ಯಾಡ್‌ಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಮಖ್ಯಮಂತ್ರಿಗಳು ಬಾಳೆಹೊನ್ನೂರಿನಲ್ಲಿ ಕಸ್ತೂರಿ ರಂಗನ್ ವರದಿಗೆ ಸಂಬಂಧಪಟ್ಟಂತೆ ಸಭೆ ನಡೆಸುವರು.

ಅನಂತರ ಮಧ್ಯಾಹ್ನ ೩ ಗಂಟೆಗೆ ರಂಭಾಪುರಿ ಮಠದ ಆವರಣದ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರಣ್ಯ ಸಚಿವರ ಪ್ರವಾಸ: ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ರಾಮಲಿಂಗಾರೆಡ್ಡಿ ಅವರು ಸೆಪ್ಟೆಂಬರ್ ೧೯ ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಮಧ್ಯಾಹ್ನ ೧ ಗಂಟೆಗೆ ಬಾಳೆಹೊನ್ನೂರಿನ ರಂಭಾಪುರಿ ಮಠದ ಆವರಣದಲ್ಲಿರುವ ಹೆಲಿಪ್ಯಾಡ್‌ಗೆ ಹೆಲಿಕ್ಯಾಪ್ಟರ್‌ನಲ್ಲಿ ಆಗಮಿಸಲಿರುವ ಸಚಿವರು, ಅನಂತರ ಕಸ್ತೂರಿ ರಂಗನ್ ವರದಿಗೆ ಸಂಬಂಧಪಟ್ಟಂತೆ ನಡೆಯುವ ಸಭೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ ೩ ಗಂಟೆಗೆ ಮಠದ ಆವರಣದ ಹೆಲಿಪ್ಯಾಡ್‌ನಿಂದ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Chief Minister’s tour of the district today

Share

Leave a comment

Leave a Reply

Your email address will not be published. Required fields are marked *

Don't Miss

ಸೆ.14ರಂದು ಮುಳ್ಳಯ್ಯನಗಿರಿ ಸೇರಿದಂತೆ ಗಿರಿಧಾಮಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧ

ಚಿಕ್ಕಮಗಳೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಚಂದ್ರದ್ರೋಣ ಪರ್ವತ ಸಾಲಿನ ಪ್ರಮುಖ ಪ್ರವಾಸಿ ತಾಣಗಳಿಗೆ ಸೆಪ್ಟೆಂಬರ್ 14ರಂದು ಒಂದು ದಿನದ ಮಟ್ಟಿಗೆ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶಿಸಿದೆ. ಮುಳ್ಳಯ್ಯನಗಿರಿ,...

ಸುಳ್ಳು ವಂಶವೃಕ್ಷ ಸೃಷ್ಟಿಸಿ ಆಸ್ತಿ ಲಪಟಾಯಿಸಲು ಯತ್ನ: ಐವರ ವಿರುದ್ಧ ಪ್ರಕರಣ

ಕಡೂರು: ಸುಳ್ಳು ವಂಶವೃಕ್ಷ ಸೃಷ್ಟಿಸಿ, ಅದರ ಆಧಾರದ ಮೇಲೆ ಪಿತ್ರಾರ್ಜಿತ ಆಸ್ತಿಯ ಖಾತೆ ಬದಲಾವಣೆ ಮಾಡಿಕೊಂಡು ಆಸ್ತಿಯನ್ನು ಲಪಟಾಯಿಸಲು ಒಳಸಂಚು ರೂಪಿಸಿ ವಂಚನೆ ನಡೆಸಿರುವ ಆರೋಪದಡಿ ಸಕ್ಕರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಐವರ...

Related Articles

ಸೋಮಯ್ಯಾ ಗಣಾಚಾರಿಗೆ ಎಂಎಲ್‌ಸಿ ಸ್ಥಾನ ನೀಡುವಂತೆ ಒತ್ತಾಯ

ಚಿಕ್ಕಮಗಳೂರು: ವಿಜಯಪುರ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಮುಖಂಡ ಹಾಗೂ ವೀರಶೈವ-ಲಿಂಗಾಯತ ಸಮುದಾಯದ ಪ್ರಮುಖ ನಾಯಕ ಸೋಮಯ್ಯಾ...

ಹಾಲಿನ ಖರೀದಿ ದರ ಹೆಚ್ಚಳ – ಶೀಘ್ರವೇ ಸಭೆ ನಡೆಸಿ ತೀರ್ಮಾನ

ಚಿಕ್ಕಮಗಳೂರು: ಹಾಲಿನ ಖರೀದಿ ದರ ಹೆಚ್ಚಳ ಮಾಡಬೇಕು ಎಂದು ರೈತರಿಂದ ಬೇಡಿಕೆ ಹೆಚ್ಚಾಗಿದ್ದು, ಈ ಸಂಬಂಧ...

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ವಾರ್ಷಿಕ ವಹಿವಾಟು ಮೂರು ಸಾವಿರ ಕೋಟಿ

ಚಿಕ್ಕಮಗಳೂರು: ೧೯೫೫ರಲ್ಲಿ ೧,೪೦೦ ರೂ. ಬಂಡವಾಳದೊಂದಿಗೆ ಆರಂಭಗೊಂಡ ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಇಂದು...

ಮಲೆನಾಡು-ಕರಾವಳಿಗೆ ವಿಶೇಷ ಪ್ಯಾಕೇಜ್

ಬಾಳೆಹೊನ್ನೂರು: ಮಲೆನಾಡು ಮತ್ತು ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ರೂಪಿಸಲಾಗಿದ್ದು, ಈ ಭಾಗದಿಂದ...