ಕಡೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಐತಿಹಾಸಿಕ ಅಯ್ಯನಕೆರೆಯಲ್ಲಿ ಈಜಲು ಹೋಗಿದ್ದ 13 ವರ್ಷದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.
ಚಿಕ್ಕಮಗಳೂರು ನಗರದ ದಂಟರಮಕ್ಕಿ ನಿವಾಸಿಯಾದ ಪೃಥ್ವಿರಾಜ್ ಮೃತಪಟ್ಟ ದುರ್ದೈವಿ ಬಾಲಕ. ಸಖರಾಯಪಟ್ಟಣ ಸಮೀಪವಿರುವ ಈ ಬೃಹತ್ ಕೆರೆಗೆ ಪೃಥ್ವಿರಾಜ್ ತನ್ನ ದೊಡ್ಡಮ್ಮ ಹಾಗೂ ನಾಲ್ವರು ಸ್ನೇಹಿತರ ಜೊತೆ ಸೇರಿ ಈಜಲು ಹೋಗಿದ್ದನು. ಐವರು ಬಾಲಕರು ಕೆರೆಯಲ್ಲಿ ಈಜುತ್ತಿದ್ದಾಗ ಆಕಸ್ಮಿಕವಾಗಿ ಪೃಥ್ವಿರಾಜ್ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆಯೇ ಸಖರಾಯಪಟ್ಟಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ನೀರಿನಲ್ಲಿ ಮುಳುಗಿ ಸಂಭವಿಸುತ್ತಿರುವ ಸಾವುಗಳು ಆತಂಕ ಮೂಡಿಸಿವೆ.
ಕಳೆದ ಶನಿವಾರ ಭದ್ರಾ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಯುವಕನೋರ್ವ ನೀರು ಪಾಲಾಗಿದ್ದ ಬೆನ್ನಲ್ಲೇ, ಭಾನುವಾರ ಆಲ್ಲೂರು ಸಮೀಪ ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ಜೀವ ಕಳೆದುಕೊಂಡಿದ್ದರು.
ಈ ಘಟನೆಗಳ ಬೆನ್ನಲ್ಲೇ ಈಗ ಅಯ್ಯನಕೆರೆಯಲ್ಲಿ ಬಾಲಕ ಸಾವನ್ನಪ್ಪಿರುವುದು ಜಿಲ್ಲೆಯಲ್ಲಿ ನಾಲ್ಕು ದಿನಗಳ ಅವಧಿಯಲ್ಲಿ ಒಟ್ಟು ನಾಲ್ವರು ಜಲಸಮಾಧಿಯಾದಂತಾಗಿದೆ.
A boy who went swimming in Ayyana Lake died.
Leave a comment