Home namma chikmagalur ಸಾರ್ವಜನಿಕರಿಗೆ ಸ್ವಚ್ಚತೆ ಬಗ್ಗೆ ಅರಿವು ಮೂಡಿಸುವ ಸ್ವಚ್ಚತಾ ರ್‍ಯಾಲಿ
namma chikmagalurchikamagalurHomeLatest News

ಸಾರ್ವಜನಿಕರಿಗೆ ಸ್ವಚ್ಚತೆ ಬಗ್ಗೆ ಅರಿವು ಮೂಡಿಸುವ ಸ್ವಚ್ಚತಾ ರ್‍ಯಾಲಿ

Share
Share

ಚಿಕ್ಕಮಗಳೂರು: ನಗರದ ನಾಗರೀಕರಲ್ಲಿ ಸ್ವಚ್ಚತೆಯ ಬಗ್ಗೆ ಹೆಚ್ಚು ಅರಿವು ಮೂಡಿಸುವ ಉದ್ದೇಶದಿಂದ ಸ್ವಚ್ಚತಾ ರ್‍ಯಾಲಿ, ಮ್ಯಾರಥಾನ್ ಫ್ಲಾಗಿಂಗ್ ಅಭಿಯಾನ ನಡೆಸಲಾಗುತ್ತಿದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ತಿಳಿಸಿದರು.

ಅವರು ಇಂದು ತಾಲ್ಲೂಕು ಕಛೇರಿ ಆವರಣದಲ್ಲಿ ನಗರಸಭೆ, ಸ್ವಚ್ಚ ಭಾರತ್ ಮಿಷನ್, ೨.೦ ಯೋಜನೆಯಡಿಯಲ್ಲಿ ಸಾರ್ವಜನಿಕರಿಗೆ ಸ್ವಚ್ಚತೆ ಬಗ್ಗೆ ಅರಿವು ಮೂಡಿಸುವ ಸ್ವಚ್ಚತಾ ರ್‍ಯಾಲಿ, ಮ್ಯಾರಥಾನ್ ಫ್ಲಾಗಿಂಗ್ ಅಭಿಯಾನ, ಸಹಿ ಅಭಿಯಾನ ಜಾಥಕ್ಕೆ ಡೋಲು ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

೨೦೦೧-೦೨ ರಲ್ಲಿ ನಗರದಲ್ಲಿ ಸ್ವಚ್ಚತೆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಸ್ವಚ್ಚಾ ಟ್ರಸ್ಟ್ ಪ್ರಾರಂಭಿಸಲಾಯಿತು, ಮನೆ-ಮನೆ ಕಸ ಸಂಗ್ರಹದ ಮೂಲಕ ಸ್ವಚ್ಚತೆ ಕಾಪಾಡಬೇಕೆಂದು ನಾಗರೀಕರಲ್ಲಿ ಅರಿವು ಮೂಡಿಸಲಾಗಿತ್ತು, ಸ್ವಚ್ಚತೆ ಕಾಪಾಡುವಲ್ಲಿ ನಗರಸಭೆ ರಾಜ್ಯದಲ್ಲೇ ೨ನೇ ಸ್ಥಾನದಲ್ಲಿ ಇದೇ ಎಂದು ಹೇಳಿದರು.

ಪ್ರಪಂಚದಲ್ಲಿ ಸ್ವಿಡ್ಜರ್ ಲ್ಯಾಂಡ್ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿದ್ದು, ಅದೇ ರೀತಿ ಮಿನಿ ಸ್ವಿಡ್ಜರ್ ಲ್ಯಾಂಡಾಗಿ ಚಿಕ್ಕಮಗಳೂರು ಜಿಲ್ಲೆ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಿ, ಪ್ಲಾಸ್ಟಿಕ್ ಬಾಟಲಿ, ಕಸ ಸಂಪೂರ್ಣವಾಗಿ ನಿಷೇಧಿಸಲಾಗದಿದ್ದರೂ ಕಡಿಮೆ ಮಾಡಿ ನಿಯಂತ್ರಿಸಬೇಕೆಂದು ಕರೆ ನೀಡಿದರು.

ಪ್ರಕೃತಿ ಉಳಿಸಿ ಬೆಳೆಸುವಲ್ಲಿ ಪ್ರತಿಯೊಬ್ಬರು ಕೈ ಜೊಡಿಸಬೇಕು ಜೊತೆಗೆ ಜಲಮೂಲಗಳಿಗೆ ಪ್ಲಾಸ್ಟಿಕ್ ತ್ಯಾಜ್ಯ ಹಾಕಿ ಕಲಿಷಿತಗೊಳಿಸುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪರಿಸರ ಹಾಗೂ ನಗರಸಭೆ ಸಿಬ್ಬಂದಿಗಳಿಗೆ ಸೂಚನೆ ನೀಡಿ, ಬಾವಿ ಪ್ರಜೆಗಳಾದ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಸ್ವಚ್ಚತೆ ಬಗ್ಗೆ ಶಾಲೆಗಳಿಗೆ ತೆರಳಿ ಪರಿಸರ, ಪ್ರಕೃತಿ, ಕಸ ವಿಲೇವಾರಿ ಬಗ್ಗೆ ಪ್ರಾಥಮಿಕ ಹಂತದಲ್ಲಿ ಅರಿವು ಮೂಡಿಸಬೇಕಾದ ಅಗತ್ಯ ಇದೆ ಎಂದು ಹೇಳಿದರು.

ಬಸವತತ್ವ ಪೀಠ ತತ್ವದ ಪೀಠಾಧ್ಯಕ್ಷ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಮಾತನಾಡಿ ದೇವರನ್ನು ಹೊರತುಪಡಿಸಿ ಸ್ವಚ್ಚತೆ ಅಗತ್ಯವಾಗಿದ್ದು, ನಗರ ಅತ್ಯಂತ ಸ್ವಚ್ಚ ನಗರ ಎಂದು ಹೆಸರುಗಳಿಸಿದ್ದು, ಪ್ರವಾಸೋದ್ಯಮದ ಮೂಲಕ ಅತಿ ಹೆಚ್ಚು ಹೆಸರು ಮಾಡುವ ಅವಕಾಶ ಜಿಲ್ಲಾ ಕೇಂದ್ರಕ್ಕೆ ಇದೇ ಎಂದು ತಿಳಿಸಿದರು.

ನಗರದಲ್ಲಿ ವಾಸಿಸುವ ಎಲ್ಲರೂ ಸ್ವಚ್ಚತೆಯ ಬಗ್ಗೆ ಅಪಾರವಾದ ಕಾಳಜಿಯನ್ನು ವಹಿಸುವುದು ಅಗತ್ಯ ಎಂದು ಮನೆಯಲ್ಲಿ ಉತ್ಪತ್ತಿಯಾದ ಕಸವನ್ನು ಬೀದಿಗೆ ಹಾಕದೆ, ನಗರಸಭೆ ಗಂಟೆ ಗಾಡಿಗೆ ಹಾಕುವುದು ರೂಢಿಗತವಾಗಬೇಕೆಂದು ಕರೆ ನೀಡಿದರು. ಸ್ವಚ್ಚತೆ ಕುರಿತು ಗಂಭೀರ ಆಲೋಚನೆ ಮಾಡಬೇಕು ಈ ನಿಟ್ಟಿನಲ್ಲಿ ನಗರಸಭೆ ಮನೆ-ಮನೆ ಕಸ ಸಂಗ್ರಹಿಸಲು ಕೈಗೊಂಡ ದೊಡ್ಡ ಉಪಕ್ರಮದಿಂದ ಯಶಸ್ವಿಯಾಗಿದ್ದಾರೆ ಎಂದು ಶ್ಲಾಘಿಸಿದರು.

ಈ ವಿಚಾರದಲ್ಲಿ ಎಲ್ಲರ ಸಹಭಾಗಿತ್ವ ಅಗತ್ಯವಾಗಿದ್ದು ಸಣ್ಣ-ಸಣ್ಣ ಕೊಡುಗೆ ಬಹಳ ದೊಡ್ಡ ಪರಿಣಾಮ ಬೀರುತ್ತದೆ ಎಂದು ಕಿವಿಮಾತು ಹೇಳಿದರು. ನಗರಸಭಾ ಅಧ್ಯಕ್ಷೆ ಶೀಲಾ ದಿನೇಶ್ ಮಾತನಾಡಿ ಬೀದಿ ನಾಟಕ ಮತ್ತು ಗೋಡೆ ಬರಹಗಳ ಮೂಲಕ ಸ್ವಚ್ಚತೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ, ಇದರ ಜೊತೆಗೆ, ನಗರದ ನಾಗರೀಕರ ಮನೆ-ಮನೆ ಕಸ ಸಂಗ್ರಹಣೆಗೆ ಗಂಟೆ ಗಾಡಿಗಳ ಮೂಲಕ ಆದ್ಯತೆ ನೀಡಬೇಕೆಂದು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಕುಮಾರೆ ಗೌಡ, ಪರಮೇಶ್, ಲಕ್ಷ್ಮಣ್, ಸ್ವಚ್ಚ ಟ್ರಸ್ಟ್‌ನ ಡಾ. ಶುಭ ವಿಜಯ್, ಬ್ರಹ್ಮ ಕುಮಾರೀಸ್‌ನ ರಾಜಯೋಗಿನಿ ಬಿ.ಕೆ ಭಾಗ್ಯಕ್ಕ, ರೋಟರಿ ಮತ್ತು ಲಯನ್ಸ ಕ್ಲಬ್ ಸದಸ್ಯರು, ನಗರಸಭೆ ಸಿಬ್ಬಂದಿ ಮತ್ತಿತರರು ಉಪಸ್ಥಿತರಿದ್ದರು.

A cleanliness rally to create awareness among the public about cleanliness

 

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...