Home namma chikmagalur chikamagalur ದಲಿತ ಸಂಘಟನೆಗಳ ಒಕ್ಕೂಟದ ವಿಭಿನ್ನ ಹೋರಾಟ
chikamagalurHomeLatest Newsnamma chikmagalur

ದಲಿತ ಸಂಘಟನೆಗಳ ಒಕ್ಕೂಟದ ವಿಭಿನ್ನ ಹೋರಾಟ

Share
Oplus_153223168
Share

ಚಿಕ್ಕಮಗಳೂರು : ನಗರ ಸಮೀಪದ ಗೌಡನಹಳ್ಳಿ ವಾಸಿ ಮಂಜುನಾಥ್ ಯಾನೆ ಹೇಮಂತ್ ಎಂಬುವವರಿಗೆ ಸೇರಿದ ಜೆ.ಸಿ.ಬಿ ಯನ್ನು ಹೆಚ್.ಡಿ.ಎಫ್.ಸಿ ಬ್ಯಾಂಕ್ ಸೀಜ್ ಮಾಡಿ ಅಕ್ರಮ ಮಾರಾಟ ಮಾಡಿದ್ದು, ಕಳೆದ ೧ ತಿಂಗಳಿನಿಂದ ಪ್ರತಿಭಟನೆ ಮಾಡುತ್ತಿದ್ದರೂ ಹೋರಾಟಗಾರರನ್ನು ನಿರ್ಲ್ಯಕ್ಷಿಸುತ್ತಿರುವ ಜಿಲ್ಲಾಡಳಿತ, ಬ್ಯಾಂಕ್ ಅಧಿಕಾರಿಗಳು, ಪೊಲೀಸ್ ಇಲಾಖೆ, ಜನ ಪ್ರತಿನಿಧಿಗಳ ನಡೆಯನ್ನು ಖಂಡಿಸಿ ವಿಭಿನ್ನ ಚಳುವಳಿ ನಡೆಸಲು ನಿರ್ಧರಿಸಲಾಗಿದೆ ಎಂದು ದಲಿತ ಮುಖಂಡ ಮರ್ಲೆಅಣ್ಣಯ್ಯ ತಿಳಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿಂದು ಕರೆದಿದ್ದ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಅವರು ನೊಂದ ಮಂಜುನಾಥ್ ಪರವಾಗಿ ನಗರದ ಎಂ.ಜಿ ರಸ್ತೆಯ ಹೆಚ್.ಡಿ.ಎಫ್.ಸಿ ಬ್ಯಾಂಕ್ ಎದುರು ಸುಮಾರು ೧ ತಿಂಗಳಿಂದ ನೊಂದವರು ಮತ್ತು ಹೋರಾಟಗಾರರು ಹಗಲು-ರಾತ್ರಿ ಧರಣಿ ಮಾಡಲಾಗುತ್ತಿದ್ದರು ಸಹ ಯಾವುದೇ ಅಧಿಕಾರಿಗಳಿಂದಾಗಲೀ, ಮತ್ತು ಇಲಾಖೆಗಳಿಂದಾಗಲೀ ಹಾಗೂ ಜನ ಪ್ರತಿನಿಧಿಗಳಿಂದಾಗಲೀ ನ್ಯಾಯ ದೊರಕಿರುವುದಿಲ್ಲಎಂದು ಕಿಡಿ ಕಾರಿದರು.

ಮಂಜುನಾಥ್ ಯಾನೆ ಹೇಮಂತ ಒಳ್ಳೆ ರೀತಿ ಬದುಕು ಕಟ್ಟಿಕೊಳ್ಳುವ ಕನಸ್ಸು ಕಟ್ಟಿಕೊಂಡು ಸಾಲ ಮಾಡಿ ೭ಲಕ್ಷ ಮುಂಗಡ ಹಣವನ್ನು ಬ್ಯಾಂಕ್‌ಗೆ ಪಾವತಿಸಿ, ಸುಮಾರು ೧೭ ತಿಂಗಳ ಕಂತುಗಳನ್ನು ಒಟ್ಟು ೧೮ ಲಕ್ಷ ಜೆ.ಸಿ.ಬಿ ಖರೀದಿಗಾಗಿ ಭರಿಸಿದ್ದಾರೆ.

ಕೇವಲ ೨ ಕಂತು ಹಣ ಕಟ್ಟಿದ ಕಾರಣ ಬ್ಯಾಂಕ್‌ನವರು ಏಕಾ ಏಕಿ ನೊಟೀಸ್ ನೀಡದೆ, ಜೆ.ಸಿ.ಬಿಯನ್ನು ಸೀಜ್ ಮಾಡಿ ಅಕ್ರಮ ಮಾರಾಟ ಮಾಡಿರುತ್ತಾರೆ. ೩೩ ಲಕ್ಷ ಬೆಲೆಬಾಳುವ ಕೇವಲ ೧ ವರೆ ವರ್ಷದ ಜೆ.ಸಿ.ಬಿಯನ್ನು ಕೇವಲ ೨೨ ಲಕ್ಷ ರೂ.ಗಳಿಗೆ ಬೇರೆಯವರಿಗೆ ಮಾರಾಟ ಮಾಡಿದ್ದು, ಆರ್.ಬಿ.ಐ ನಿಯಮಗಳನ್ನು ಉಲ್ಲಂಘಿಸಿ, ಮಂಜುನಾಥ್ ಯಾನೆ ಹೇಮಂತರವರ ಕುಟುಂಬಕ್ಕೆ ಜೆ.ಸಿ.ಬಿ ಮತ್ತು ಹಣವನ್ನೂ ಸಹ ಇಲ್ಲದಂತೆ ಮಾಡಿ ಸಾಲದ ಸುಳಿಗೆ ಸಿಲುಕಿಸಿದ್ದಾರೆ. ಆರ್ಥಿಕ ದುಸ್ಥಿತಿಗೆ ಕಾರಣರಾಗಿರುವ ಹೆಚ್.ಡಿ.ಎಫ್.ಸಿ ಬ್ಯಾಂಕ್ ಮಾನ್ಯತೆಯನ್ನು ಈ ಕೂಡಲೇ ರದ್ದುಪಡಿಸುವಂತೆ ಒಕ್ಕೂಟ ಒತ್ತಾಯಿಸುತ್ತದೆ ಎಂದರು.

ಮಾ.೦೪ರಂದುಬೆಳಿಗ್ಗೆ ೧೧ಗಂಟೆಗೆ ಹನುಮಂತಪ್ಪ ವೃತ್ತದಿಂದ ವೃತ್ತದಿಂದ ಮೆರವಣೆಗೆಯಲ್ಲಿ ಹೆಚ್.ಡಿ.ಎಫ್.ಸಿ ಬ್ಯಾಂಕ್ ಆಡಳಿತ ಮಂಡಳಿಯವರ ಪ್ರತಿಕೃತಿ ಶವ ಯಾತ್ರೆ ನಡೆಸಿ ಬ್ಯಾಂಕ್ ಮುಂದಿಟ್ಟು ಅನಿರ್ಧಿಷ್ಟ ಅವಧಿ ಮುಷ್ಕರದಲ್ಲಿನಡೆಸಲಾಗುವುದೆಂದರು.

ಜಿಲ್ಲಾ ಉಸ್ತುವಾರಿ ಕಛೇರಿ ಮುಂದೆ, ಚಿಕ್ಕಮಗಳೂರು ಶಾಸಕರ ಮನೆಯ ಮುಂದೆ ಮತ್ತು ಮೂಡಿಗೆರೆ ಶಾಸಕರ ಮನೆಯ ಮುಂದೆ ಅನಿರ್ಧಿಷ್ಟ ಅವಧಿ ಮುಷ್ಕರ, ತಮಟೆ ಚಳುವಳಿ, ಕರಪತ್ರ ಚಳುವಳಿ, ಪಂಚಿನ ಮೆರವಣಿಗೆ ಹಾಗೂ ಅರೆಬೆತ್ತಲೆ ಚೆಳುವಳಿ ಮಾಡಲು ಒಕ್ಕೂಟದ ಸಭೆಯು ನಿರ್ಧರಿಸಿದೆ ಎಂದರು.

ಗೋಷ್ಟಿಯಲ್ಲಿ ದಲಿತ ಮುಖಂಡರಾದ ದಂಟರಮಕ್ಕಿ ಶ್ರೀನಿವಾಸ್,ಭೀಮಯ್ಯ,ಕೃಷ್ಣಮೂರ್ತಿ,ರುದ್ರಮ್ಮ,ಬಾಲಕೃಷ್ಭ,ಟಿ.ಎಲ್ ಗಣೇಶ್,ರಘೂ ಇದ್ದರು.

A different struggle of the coalition of Dalit organizations

Share

Leave a comment

Leave a Reply

Your email address will not be published. Required fields are marked *

Don't Miss

ಲೋಕಾಯುಕ್ತ ಬಲೆಗೆ ತಂಗಲಿ ಗ್ರಾಮ ಪಂಚಾಯಿತಿಯ ಪಿಡಿಒ

ಕಡೂರು : ಸೈಟ್ ಗೆ ಎನ್.ಒ.ಸಿ (NOC) ನೀಡಲು ಲಂಚದ ಬೇಡಿಕೆಯಿಟ್ಟಿದ್ದ ಕಡೂರು ತಾಲೂಕಿನ ತಂಗಲಿ ಗ್ರಾಮ ಪಂಚಾಯಿತಿಯ ಪಿಡಿಒ ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಿಮ್ಮಶೆಟ್ಟಿ ಎಂಬುವವರಿಗೆ ಸೇರಿದ...

ಕಳಪೆ ಕಾಮಗಾರಿ ತಡೆಗಟ್ಟುವಂತೆ ಜಿಲ್ಲಾಡಳಿತಕ್ಕೆ ಒತ್ತಾಯ

ಚಿಕ್ಕಮಗಳೂರು: ಕಡೂರು ತಾಲೂಕಿನ ಐತಿಹಾಸಿಕ ಮದಗದ ಕೆರೆ ಕಾಲುವೆಯ (ಚಾನಲ್) ಕಳಪೆ ಕಾಮಗಾರಿಯನ್ನು ತಡೆಗಟ್ಟುವಂತೆ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಜಿಲ್ಲಾಡಳಿತವನ್ನು ಒತ್ತಾಯಿಸಿದೆ. ಅಪರ ಜಿಲ್ಲಾಧಿಕಾರಿ ನಾರಾಯಣ ರೆಡ್ಡಿ ಕನಕರೆಡ್ಡಿ...

Related Articles

ಶಾಸಕ ರಾಜೇಗೌಡರ ಕಣ್ಣೀರು ಕಾಂಗ್ರೆಸ್ ನವರ ಆಕ್ರೋಶ-ಬಿ.ಜೆ.ಪಿಯ ತಲ್ಲಣ

ಶೃಂಗೇರಿ: ಶೃಂಗೇರಿ ವಿಧಾನ ಸಭಾ ಕ್ಷೇತ್ರದಲ್ಲಿ ಕಳೆದ ಮೂರು ವರ್ಷಗಳಿಂದ ಶಾಸಕ ರಾಜೇಗೌಡರ ವಿರುದ್ಧ ಬಿಜೆಪಿ...

ಅರವಿಂದ್ ಕೇಜ್ರವಾಲ್ ದೋಷಮುಕ್ತ ಪಕ್ಷಕ್ಕೆ ಸಂದ ಜಯ

ಚಿಕ್ಕಮಗಳೂರು : ಕೇಂದ್ರ ಸರ್ಕಾರದ ಪಿತೂರಿಯಿಂದ ದೆಹಲಿಯ ಅಬಕಾರಿ ಹಗರಣದಲ್ಲಿ ಸಿಲುಕಿಸಲಾಗಿದ್ದ ಅರವಿಂದ್ ಕೇಜ್ರವಾಲ್ ಮತ್ತು...

ಬಿಜೆಪಿ ಟಿಕೆಟ್ ಭ್ರಮೆಯಿಂದ ವೆಂಕಟೇಶ್ ಹೊರಬರಲಿ

ಚಿಕ್ಕಮಗಳೂರು : ಶಾಸಕ ಹೆಚ್.ಡಿ ತಮ್ಮಯ್ಯನವರನ್ನು ಪ್ರತಿ ನಿತ್ಯ ವಿರೋಧಿಸಿದರೆ ಮೂಡಿಗೆರೆ ಮೀಸಲು ಕ್ಷೇತ್ರಕ್ಕೆ ಬಿಜೆಪಿ...

ಕೈವಾರ ತಾತಯ್ಯ ವಿಶ್ವ ಶ್ರೇಷ್ಠ ಸಂತ

ಚಿಕ್ಕಮಗಳೂರು: ಮಹಾನ್ ಕಾಲಜ್ಞಾನಿ ಮತ್ತು ತತ್ವಜ್ಞಾನಿ ಶ್ರೀ ಯೋಗಿ ನಾರೇಯಣ ಯತೀಂದ್ರರು (ಕೈವಾರ ತಾತಯ್ಯ) ಕೇವಲ...