Home namma chikmagalur chikamagalur ಮುದುಗುಂಡಿ ಗ್ರಾಮದಲ್ಲಿ ಹೆಣ್ಣು ಚಿರತೆ ಸೆರೆ
chikamagalurHomeLatest Newsnamma chikmagalur

ಮುದುಗುಂಡಿ ಗ್ರಾಮದಲ್ಲಿ ಹೆಣ್ಣು ಚಿರತೆ ಸೆರೆ

Share
Share

ತರೀಕೆರೆ: ತಾಲ್ಲೂಕಿನ ಮುದುಗುಂಡಿ ಗ್ರಾಮದಲ್ಲಿ ಸುಮಾರು 3 ವರ್ಷ ವಯಸ್ಸಿನ ಹೆಣ್ಣು ಚಿರತೆಯನ್ನು ಅರಣ್ಯ ಇಲಾಖೆ ಶನಿವಾರ ಸೆರೆಹಿಡಿದಿದೆ.

ಮುದುಗುಂಡಿ ಗ್ರಾಮದಲ್ಲಿ ಬಳಕೆ ಮಾಡದ ಶೌಚಾಲಯದಲ್ಲಿದ್ದ ನಾಯಿಗಳನ್ನು ಹಿಡಿಯಲು ಶನಿವಾರ ಬೆಳಿಗ್ಗೆ ಚಿರತೆ ಶೌಚಾಲಯದ ಒಳಗೆ ನುಗ್ಗಿದೆ. ಶೌಚಾಲಯದ ಒಳಗೆ ಹೋದ ನಂತರ ಶೌಚಾಲಯದ ಬಾಗಿಲು ಮುಚ್ಚಿದ ಕಾರಣ ಚಿರತೆಗೆ ಶೌಚಾಲಯದಿಂದ ಹೊರ ಬರಲು ಸಾಧ್ಯವಾಗದೆ ಬಂಧಿಯಾಗಿತ್ತು.

ಶೌಚಾಲಯದಲ್ಲಿ ಶಬ್ದ ಆಗುತ್ತಿರುವುದನ್ನು ಕೇಳಿಸಿಕೊಂಡ ಸ್ಥಳೀಯರು ಅರಣ್ಯ ಇಲಾಖೆಗೆ ವಿಷಯ ಮುಟ್ಟಿಸಿದ್ದಾರೆ. ವಿಷಯ ತಿಳಿದು ಭದ್ರಾವತಿಯ ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರಕುಮಾರ್ ನಿರ್ದೇಶನದಂತೆ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಬಲೆ ಮತ್ತು ಬೋನಿನೊಂದಿಗೆ ಚಿರತೆ ಸೆರೆಹಿಡಿ ಯುವ ಕಾರ್ಯಾಚರಣೆ ಆರಂಭಿಸಿದ್ದರು.

ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿಯುವ ಸಲುವಾಗಿ ಮುದುಗುಂಡಿ ಗ್ರಾಮಕ್ಕೆ ಬಂದ ಶಿವಮೊಗ್ಗ ತ್ಯಾವರೆಕೊಪ್ಪದ ಪಶುವೈದ್ಯ ಡಾ.ಶ್ರವಣಸಿಂಗ್ ರಾಥೋಡ್ ತಂಡವು ಶೌಚಾಲಯದ ಮೇಲ್ಬಾಗದಿಂದ ಅರಿವಳಿಕೆ ಲಸಿಕೆ ನೀಡಿದ್ದಾರೆ.

ಪ್ರಜ್ಞೆ ತಪ್ಪಿದ ನಂತರ ಚಿರತೆಯನ್ನು ಸೆರೆಹಿಡಿದು ಪಟ್ಟಣದ ಅರಣ್ಯ ಇಲಾಖೆ ಕಚೇರಿಗೆ ಸಾಗಿಸಲಾಗಿದೆ. ಚಿರತೆಯ ಆರೋಗ್ಯ ತಪಾಸಣಾ ಕಾರ್ಯ ಮುಗಿದ ನಂತರ ಚಿರತೆಯನ್ನು ಕಾಡಿಗೆ ಬಿಡಲಾಗುವುದು ಎಂದು ಎಸಿಎಫ್ ಉಮ್ಮರ್ ಬಾದ್‌ಷಾ ಪತ್ರಿಕೆಗೆ ತಿಳಿಸಿದರು.

ಈ ಸಂದರ್ಭದಲ್ಲಿ ಲಕ್ಕವಳ್ಳಿ ವಲಯ ಅರಣ್ಯಾಧಿಕಾರಿ ಇಂದು, ಡಿಆರ್‌ಎಫ್‌ಒ ಉಮೇಶ್ ಒಳಗೊಂಡು ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂಧಿ ಹಾಗೂ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.

A female leopard was caught in Mudugundi village

Share

Leave a comment

Leave a Reply

Your email address will not be published. Required fields are marked *

Don't Miss

ಪೊಲೀಸ್ ಕಾನ್‌ಸ್ಟೇಬಲ್ ಲಿಖಿತ ಪರೀಕ್ಷೆಗೆ 451 ಅಭ್ಯರ್ಥಿಗಳ ಗೈರು

ಚಿಕ್ಕಮಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಭಾನುವಾರ ರಾಜ್ಯಾದ್ಯಂತ ನಡೆದ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆಯು ಚಿಕ್ಕಮಗಳೂರು ಜಿಲ್ಲೆಯ ೧೬ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಡೆತಡೆ ಇಲ್ಲದೆ...

ವಿಧಾನ ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಇಂದು ಪ್ರಮಾಣ ವಚನ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸದಸ್ಯೆಯಾಗಿ ನೇಮಕಗೊಂಡಿರುವ ಶ್ರೀಮತಿ ಗಾಯತ್ರಿ ಶಾಂತೇಗೌಡ ಅವರು ಸೋಮವಾರ (ಆಗಸ್ಟ್ 3) ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ...

Related Articles

ದೇವಸ್ಥಾನ ಪ್ರವೇಶದ ವಿಚಾರಕ್ಕೆ ಬಾಲಕನ ಮೇಲೆ ಕತ್ತಿಯಿಂದ ಹಲ್ಲೆಗೆ ಯತ್ನ

ಚಿಕ್ಕಮಗಳೂರು: ದೇವಸ್ಥಾನ ಪ್ರವೇಶದ ವಿಚಾರಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಗೆ ಸೇರಿದ 16 ವರ್ಷದ ಬಾಲಕನಿಗೆ ಅವಾಚ್ಯವಾಗಿ...

ಸ್ಕೂಟರ್ ಮರದ ಬಿಳಲಿಗೆ ಡಿಕ್ಕಿಗೆ ಮಹಿಳೆ ಸ್ಥಳದಲ್ಲೇ ಸಾವು

ಕಡೂರು: ಸ್ಕೂಟರ್ ನಿಯಂತ್ರಣ ತಪ್ಪಿ ಆಲದ ಮರದ ಬಿಳಲಿಗೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಕುಳಿತಿದ್ದ...

ಜಲಜೀವನ್ ಮಿಷನ್ ಕಾಮಗಾರಿ ಸ್ಥಳದಿಂದ ಜನರೇಟರ್, ಪೈಪ್ ಕಳವು

ಚಿಕ್ಕಮಗಳೂರು: ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿಗೆ ಬಳಸುತ್ತಿದ್ದ 10 ಕೆವಿಎ ಡೀಸೆಲ್...

ಬೀರೂರಿನ ಫೈನಾನ್ಸ್ ಕಂಪನಿಗೆ ₹9.91 ಲಕ್ಷ ವಂಚನೆ

ಬೀರೂರು: ಬೇರೊಬ್ಬ ವ್ಯಕ್ತಿಯಂತೆ ನಟಿಸಿ ಫೈನಾನ್ಸ್‌ನಲ್ಲಿ ಗಿರವಿ ಇಟ್ಟಿರುವ ಚಿನ್ನ ಬಿಡಿಸಿಕೊಡುವುದಾಗಿ ನಂಬಿಸಿ ನವರತ್ನ ಗೋಲ್ಡ್...