Home namma chikmagalur chikamagalur ಕ್ಷುಲ್ಲಕ ಕಾರಣಕ್ಕೆ ಜಗಳ – ಎರಡು ಕುಟುಂಬಗಳ ನಡುವೆ ಮಾರಾಮಾರಿ
chikamagalurHomeLatest Newsnamma chikmagalur

ಕ್ಷುಲ್ಲಕ ಕಾರಣಕ್ಕೆ ಜಗಳ – ಎರಡು ಕುಟುಂಬಗಳ ನಡುವೆ ಮಾರಾಮಾರಿ

Share
Share

ಕಡೂರು : ಮಕ್ಕಳ ಆಟದ ವಿಚಾರಕ್ಕೆ ಶುರುವಾದ ಸಣ್ಣ ವಾಗ್ವಾದವೊಂದು ಮಚ್ಚು, ಕಲ್ಲು ತೂರಾಟದಂತಹ ಭೀಕರ ಹಲ್ಲೆಯಾಗಿ ಮಾರ್ಪಟ್ಟಿರುವ ಘಟನೆ ಕಡೂರು ತಾಲ್ಲೂಕಿನ ಯಗಟಿ ಪೊಲೀಸ್ ಠಾಣಾ ವ್ಯಾಪ್ತಿಯ ವಕ್ಕಲಗೆರೆ ಬೋವಿಹಟ್ಟಿಯಲ್ಲಿ ನಡೆದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಕನ್ನಿಕಾ ಕುಟುಂಬದ ವಿರುದ್ಧ ಚೈತ್ರಾ ಅವರು ಪ್ರತಿ ದೂರು ನೀಡಿದ್ದು, ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ದೂರಿನ ಸಾರಾಂಶದಂತೆ, ಚೈತ್ರಾ ಅವರ ತಂಗಿಯ ಮಗ ಗೌತಮ್ ಎಂಬ ಆರು ವರ್ಷದ ಬಾಲಕ ಆಟವಾಡುತ್ತಿದ್ದಾಗ ನೆರೆಮನೆಯ ಕನ್ನಿಕಾ ಎಂಬುವವರು ಮಗುವಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ.

ಇದನ್ನು ಪ್ರಶ್ನಿಸಲು ಹೋದ ಚೈತ್ರಾ ಅವರ ಕೂದಲನ್ನು ಹಿಡಿದು ಎಳೆದಾಡಿದ ಕನ್ನಿಕಾ ಮತ್ತು ಆಕೆಯ ಅಣ್ಣ ಶಿವಕುಮಾರ್, ಕಲ್ಲಿನಿಂದ ಹಲ್ಲೆ ನಡೆಸಿ ರಕ್ತಗಾಯ ಮಾಡಿದ್ದಾರೆ ಎನ್ನಲಾಗಿದೆ. ಗಲಾಟೆ ವಿಕೋಪಕ್ಕೆ ಹೋದಾಗ ಕನ್ನಿಕಾ ಅವರು ಮನೆಯಿಂದ ಮಚ್ಚು ತಂದು ಚೈತ್ರಾ ಅವರ ತಂಗಿ ಶಿಲ್ಪಾ ಅವರ ಕಿವಿಯ ಭಾಗಕ್ಕೆ ಹಲ್ಲೆ ನಡೆಸಿದ್ದಾರೆ ಹಾಗೂ ಮಗಳ ಮೇಲೆಯೂ ತೆಂಗಿನಕಾಯಿಯಿಂದ ಹೊಡೆದಿದ್ದರಿಂದ ಹಲ್ಲು ಮುರಿದು ಗಾಯವಾಗಿದೆ ಎಂದು ಚೈತ್ರಾ ದೂರಿನಲ್ಲಿ ವಿವರಿಸಿದ್ದಾರೆ.

ಸದ್ಯ ಹಲ್ಲೆಗೊಳಗಾದವರು ಕಡೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಜಗಳಕ್ಕೆ ಭದ್ರ ಎಂಬುವವರ ಕುಮ್ಮಕ್ಕೇ ಕಾರಣ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ಈ ಸಂಬಂಧ ಯಗಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಒಂದೇ ಹಳ್ಳಿಯ ನೆರೆಮನೆಯವರು ಸಣ್ಣ ಕಾರಣಕ್ಕೆ ಈ ರೀತಿ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

A fight over a trivial reason – a fight between two families

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...