Home namma chikmagalur chikamagalur ಬೆಟ್ಟದಮಳಲಿ ಗ್ರಾಮದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ
chikamagalurHomeLatest Newsnamma chikmagalur

ಬೆಟ್ಟದಮಳಲಿ ಗ್ರಾಮದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ

Share
Share

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ದಿನದಿಂದ ದಿನಕ್ಕೆ ಕಾಡುಪ್ರಾಣಿಗಳ ಹಾವಳಿ ಮಿತಿಮೀರುತ್ತಿದ್ದು, ಕಾಫಿ ಬೆಳೆಗಾರರು ಹಾಗೂ ಗ್ರಾಮಸ್ಥರು ಅಕ್ಷರಶಃ ಹೈರಾಣಾಗಿದ್ದಾರೆ.

ತಾಲೂಕಿನ ಬೆಟ್ಟದಮಳಲಿ ಗ್ರಾಮದ ಕಾಫಿ ತೋಟವೊಂದರಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷವಾಗಿದೆ.

ಕಾಡುಕೋಣಗಳು ಏಕಾಏಕಿ ತೋಟಕ್ಕೆ ಲಗ್ಗೆ ಇಟ್ಟಿರುವುದರಿಂದ ಕಾರ್ಮಿಕರು ಕೆಲಸಕ್ಕೆ ಹೋಗಲು ಭಯಪಡುವಂತಾಗಿದ್ದು, ಬೆಳೆಗಾರರಲ್ಲಿ ಆತಂಕ ಮನೆಮಾಡಿದೆ.

ಕಾಫಿ ಕೊಯ್ಲಿನ ಈ ಪ್ರಮುಖ ಸಮಯದಲ್ಲಿ ಕಾಡುಕೋಣಗಳು ತೋಟದಲ್ಲೇ ಮೊಕ್ಕಾಂ ಹೂಡಿರುವುದರಿಂದ ಬೆಳೆ ಹಾನಿಯಾಗುವ ಭೀತಿಯೂ ಎದುರಾಗಿದೆ.

ಈಗಾಗಲೇ ಜಿಲ್ಲೆಯ ಹಲವೆಡೆ ಕಾಡುಕೋಣಗಳ ದಾಳಿಯಿಂದ ಪ್ರಾಣಹಾನಿ ಸಂಭವಿಸಿರುವ ಬೆನ್ನಲ್ಲೇ, ಬೆಟ್ಟದಮಳಲಿ ಗ್ರಾಮದಲ್ಲಿ ಹಿಂಡು ಹಿಂಡಾಗಿ ಕಾಡುಕೋಣಗಳು ಕಾಣಿಸಿಕೊಂಡಿರುವುದು ಜನರನ್ನು ಆತಂಕದ ಸುಳಿಗೆ ದೂಡಿದೆ.

ಅರಣ್ಯ ಇಲಾಖೆಯು ಕೂಡಲೇ ಎಚ್ಚೆತ್ತುಕೊಂಡು ಈ ಕಾಡುಕೋಣಗಳನ್ನು ಅರಣ್ಯಕ್ಕೆ ಅಟ್ಟಲು ಕ್ರಮ ಕೈಗೊಳ್ಳಬೇಕು ಹಾಗೂ ರೈತರ ಜೀವ ಮತ್ತು ಬೆಳೆಗೆ ರಕ್ಷಣೆ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

A herd of wild buffaloes is seen in Bettadamalali village

 

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...