Home namma chikmagalur chikamagalur ‘ಫಸ್ಟ್ ಬ್ಯಾಂಕ್ ರಾಜು’ ಖ್ಯಾತಿಯ ನಟನ ರೆಸಾರ್ಟ್‌ಗೆ ಒಂಟಿ ಸಲಗವೊಂದು ಲಗ್ಗೆ
chikamagalurHomeLatest Newsnamma chikmagalur

‘ಫಸ್ಟ್ ಬ್ಯಾಂಕ್ ರಾಜು’ ಖ್ಯಾತಿಯ ನಟನ ರೆಸಾರ್ಟ್‌ಗೆ ಒಂಟಿ ಸಲಗವೊಂದು ಲಗ್ಗೆ

Share
Share

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಮೂಡಿಗೆರೆ ತಾಲೂಕಿನ ಗೋಣಿಬೀಡು ಗ್ರಾಮದಲ್ಲಿರುವ ‘ಫಸ್ಟ್ ಬ್ಯಾಂಕ್ ರಾಜು’ ಖ್ಯಾತಿಯ ನಟ ಗುರುನಂದನ್ ಅವರ ರೆಸಾರ್ಟ್‌ಗೆ ಒಂಟಿ ಸಲಗವೊಂದು ಲಗ್ಗೆ ಇಟ್ಟಿದೆ.

ರೆಸಾರ್ಟ್ ಕಾರಿಡಾರ್‌ನಲ್ಲಿ ರಾಜಾರೋಷವಾಗಿ ಓಡಾಡಿರುವ ಆನೆ, ಬಿರು ಬೇಸಿಗೆಯ ದಾಹಕ್ಕೆ ದಣಿವಾರಿಸಿಕೊಳ್ಳಲು ಈಜುಕೊಳದ ನೀರನ್ನೇ ಕುಡಿದು ಲಾನ್ ಮೇಲೆ ಓಡಾಟ ನಡೆಸಿರುವ ದೃಶ್ಯಗಳು ಅಲ್ಲಿನ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಪ್ರತಿ ವರ್ಷ ಬೇಸಿಗೆಯ ಅವಧಿಯಲ್ಲಿ ಈ ಭಾಗಕ್ಕೆ ಕಾಡಾನೆಗಳ ಕಾಟ ಹೆಚ್ಚಾಗುತ್ತಿದ್ದು, ಒಮ್ಮೊಮ್ಮೆ 20 ರಿಂದ 30 ಆನೆಗಳ ಹಿಂಡು ಬಂದು ತೋಟ ಮತ್ತು ಮನೆಗಳಿಗೆ ಹಾನಿ ಮಾಡುತ್ತಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಡಾನೆಗಳ ಹಾವಳಿಯಿಂದ ಸ್ಥಳೀಯ ನಿವಾಸಿಗಳು ಮತ್ತು ಕೃಷಿಕರು ನಿರಂತರವಾಗಿ ತೊಂದರೆ ಅನುಭವಿಸುತ್ತಿದ್ದರೂ ಅಧಿಕಾರಿಗಳು ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ವಿಫಲರಾಗಿದ್ದಾರೆ ಎಂಬ ದೂರು ಕೇಳಿ ಬಂದಿದೆ.

ಆನೆಗಳ ದಂಡು ಪದೇ ಪದೇ ಗ್ರಾಮಕ್ಕೆ ನುಗ್ಗುತ್ತಿರುವುದರಿಂದ ಜನರ ಸುರಕ್ಷತೆಯ ಬಗ್ಗೆ ತೀವ್ರ ಆತಂಕ ಎದುರಾಗಿದೆ. ವನ್ಯಜೀವಿಗಳ ಹಾವಳಿ ತಡೆಯಲು ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

A lone wolf attacks the resort of the actor of ‘First Bank Raju’ fame

Share

Leave a comment

Leave a Reply

Your email address will not be published. Required fields are marked *

Don't Miss

ಕಾಫಿ ಕ್ಯೂರಿಂಗ್ ಬೇಜವಾಬ್ದಾರಿತಕ್ಕೆ ಇಬ್ಬರು ರೈತರು ಗಂಭೀರ ಗಾಯ

ಚಿಕ್ಕಮಗಳೂರು: ಕಾಫಿನಾಡಿನ ಹರಿಹರದಹಳ್ಳಿಯಲ್ಲಿರುವ ವಿದ್ಯಾ ಕಾಫಿ ಕ್ಯೂರಿಂಗ್ ಘಟಕದ ಮಾಲೀಕರು ಮತ್ತು ಮ್ಯಾನೇಜೆಂಟ್ ಬೇಜವಾಬ್ದಾರಿತನದಿಂದಾಗಿ ಸ್ಥಳೀಯ ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರುವಂತಾಗಿದೆ. ಈ ಘಟಕದಿಂದ ಸಂಸ್ಕರಿಸದೆ ಬೂದಿ ಮತ್ತು...

ಬಂದೂಕಿನಿಂದ ಗುಂಡು ಹೊಡೆದು ನಾಯಿಯ ಹತ್ಯೆ

ಶೃಂಗೇರಿ: ಕಿಡಿಗೇಡಿಗಳು ನಾಯಿಯೊಂದನ್ನು ಬಂದೂಕಿನಿಂದ ಗುಂಡು ಹೊಡೆದು ಕ್ರೂರವಾಗಿ ಹತ್ಯೆ ಮಾಡಿರುವ ಘಟನೆ ಶೃಂಗೇರಿ ತಾಲೂಕಿನ ಮೀಗಾ ಗ್ರಾಮದ ನಡುತೋಟದ ಸರ್ಕಾರಿ ಕಾಡಿನಲ್ಲಿ ಬೆಳಕಿಗೆ ಬಂದಿದೆ. ಮಾ.6ರಂದು ರಾತ್ರಿ ಗಸ್ತಿನಲ್ಲಿದ್ದ ಮಂಜುನಾಥ...

Related Articles

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು...

ಹೆಣ್ಣುಮಕ್ಕಳಿಂದ ತಂದೆಯ ಅಂತ್ಯಸಂಸ್ಕಾರ

ಕಡೂರು: ಲಿಂಗ ಸಮಾನತೆಯನ್ನು ಸಾರುವ ಅಪರೂಪದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಬೀರೂರಿನಲ್ಲಿ ನಡೆದಿದ್ದು,...

ಮುತ್ತೋಡಿ ಅರಣ್ಯ ಪ್ರದೇಶದಲ್ಲಿ ಕಾಡ್ಲಿಚ್ಚು

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ದ ಭದ್ರಾ ವನ್ಯಜೀವಿ ವಲಯದ ಮುತ್ತೋಡಿ ಅರಣ್ಯ ಪ್ರದೇಶದಲ್ಲಿ ಕಾಡ್ಲಿಚ್ಚು ಕಾಣಿಸಿಕೊಂಡಿದ್ದು, ಅಪಾರ...