Home namma chikmagalur chikamagalur ಮಾರುತಿ 800 ಕಾರೊಂದು ಆಕಸ್ಮಿಕವಾಗಿ ಬೆಂಕಿ
chikamagalurHomeLatest Newsnamma chikmagalur

ಮಾರುತಿ 800 ಕಾರೊಂದು ಆಕಸ್ಮಿಕವಾಗಿ ಬೆಂಕಿ

Share
Share

ಎನ್.ಆರ್.ಪುರ: ಮಾರುತಿ 800 ಕಾರೊಂದು ಆಕಸ್ಮಿಕವಾಗಿ ಬೆಂಕಿ ಹೊತ್ತಿ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್. ಪುರ ತಾಲೂಕಿನ ಗುಬ್ಬಿಗಾ ಗ್ರಾಮದಲ್ಲಿ ನಡೆದಿದೆ.

ಕಾಫಿ ತೋಟದ ಸೂಪರ್‌ವೈಸರ್ ಜಾರ್ಜ್ ಎಂಬುವರಿಗೆ ಸೇರಿದ ಈ ಕಾರು, ಕಾರ್ಮಿಕರನ್ನು ತೋಟಕ್ಕೆ ಬಿಟ್ಟು ಬಂದು ಮನೆ ಮುಂದೆ ನಿಲ್ಲಿಸಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ವಾಹನ ಧಗಧಗನೆ ಹೊತ್ತಿ ಉರಿದಿದೆ.

ಕಾರ್ಮಿಕರು ಕಾರಿನಲ್ಲಿದ್ದಾಗಲೇ ಈ ಅವಘಡ ಸಂಭವಿಸಿದ್ದರೆ ದೊಡ್ಡ ಮಟ್ಟದ ಪ್ರಾಣಾಪಾಯವಾಗುವ ಸಾಧ್ಯತೆಯಿತ್ತು, ಆದರೆ ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಮನೆ ಬಳಿ ನಿಲ್ಲಿಸಿದ ನಂತರವೇ ಬೆಂಕಿ ಹೊತ್ತಿಕೊಂಡಿದ್ದರಿಂದ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.

A Maruti 800 car accidentally caught fire

Share

Leave a comment

Leave a Reply

Your email address will not be published. Required fields are marked *

Don't Miss

ಸಿಎಂ ಪತ್ನಿ ಜಿಲ್ಲೆಯ ಆಧ್ಯಾತ್ಮಿಕ ಸ್ಥಳಗಳಿಗೆ ಭೇಟಿ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರೆ, ಅವರ ಪತ್ನಿ ಪಾರ್ವತಿ ಅವರು ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರಗಳ ದರ್ಶನ ಪಡೆಯುತ್ತಿದ್ದಾರೆ. ನಿನ್ನೆ ಮಧ್ಯಾಹ್ನವೇ...

ಟಾಟಾಏಸ್-ಬೈಕ್ ನಡುವೆ ಅಪಘಾತ:ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ತರೀಕೆರೆ: ಟಾಟಾಏಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾದ ಘಟನೆ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ಭಾನುವಾರ ನಡೆದಿದೆ. ತಾಲ್ಲೂಕಿನ ರಂಗೇನಹಳ್ಳಿ...

Related Articles

ಗೃಹ ನಿರ್ಮಾಣ ಸಹಕಾರ ಸಂಘದಿಂದ ಸಾರ್ವಜನಿಕರಿಗೆ ಸೇವೆ

ಚಿಕ್ಕಮಗಳೂರು: ರಾಜ್ಯ ಸರ್ಕಾರ, ಬಿಡಿಎ, ಸಿಡಿಎ, ಮೂಡ, ಗೃಹ ಮಂಡಳಿಗಳು ನೀಡಿರುವ ನಿವೇಶನಗಳಿಗಿಂತ ಹೆಚ್ಚಿನ ನಿವೇಶನಗಳನ್ನು...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ

ಚಿಕ್ಕಮಗಳೂರು:  ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಲೆನಾಡು ಭಾಗದಲ್ಲಿ ಭಾರೀ ಗಾಳಿ ಹಾಗೂ ಮಳೆಯ ಅಬ್ಬರ ಮುಂದುವರಿದಿದ್ದು, ಹಲವು...

ಬಸವಣ್ಣ ಸಮಾನತೆ ದಾರಿ ತೋರಿದ ಮಹಾನ್ ಮಾನವತಾವಾದಿ

ಚಿಕ್ಕಮಗಳೂರು: ಬಸವಣ್ಣನವರು ಕೇವಲ ಒಂದು ಧರ್ಮ ಅಥವಾ ಜಾತಿಗೆ ಸೀಮಿತರಾದವರಲ್ಲ, ಅವರು ಇಡೀ ಮಾನವಕುಲಕ್ಕೆ ಸಮಾನತೆಯ...

ಸಾಕು ನಾಯಿ ದಾಳಿಯಿಂದ ಏಳು ವರ್ಷದ ಮಗುವಿಗೆ ಗಾಯ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಕೆ. ಕೆಳಗೂರು ಗ್ರಾಮದ ಕಾಫಿ ಎಸ್ಟೇಟ್ ಒಂದರಲ್ಲಿ ಸಾಕು ನಾಯಿಯೊಂದು...