Home Latest News ಸೇವೆಯಿಂದ ಮಾತ್ರ ಮನುಷ್ಯನ ಬದುಕು ಸಾರ್ಥಕ
Latest NewschikamagalurHomenamma chikmagalur

ಸೇವೆಯಿಂದ ಮಾತ್ರ ಮನುಷ್ಯನ ಬದುಕು ಸಾರ್ಥಕ

Share
Share

ಚಿಕ್ಕಮಗಳೂರು:  ಸೇವೆಯಿಂದ ಮಾತ್ರ ಮನುಷ್ಯನ ಬದುಕು ಸಾರ್ಥಕವಾಗುತ್ತದೆ ಎಂದು ರೋಟರಿ ಕ್ಲಬ್ ನಿಯೋಜಿತ ಜಿಲ್ಲಾ ರಾಜ್ಯಪಾಲ ವಸಂತ್ ಹೋಬಳಿದಾರ್ ಹೇಳಿದರು.

ನಗರದ ಎಂ ಎಲ್ ವಿ ರೋಟರಿ ಸಭಾಂಗಣದಲ್ಲಿ ಮಂಗಳವಾರ ರೋಟರಿ ಕಾಫಿ ಲ್ಯಾಂಡ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಣ, ಅಧಿಕಾರ, ಆಸ್ತಿ, ಅಂತಸ್ತು, ಯಾವುದೂ ಶಾಶ್ವತವಲ್ಲ, ಅವುಗಳಿಂದ ಮಾನಸಿಕ ಶಾಂತಿ ನೆಮ್ಮದಿ ತೃಪ್ತಿ ದೊರೆಯುವುದಿಲ್ಲ, ಸೇವಾ ಕಾರ್ಯಗಳಿಂದ ಅವೆಲ್ಲವೂ ನಮಗೆ ಲಭಿಸುತ್ತವೆ, ಜೊತೆಗೆ ನಮ್ಮ ಹೆಸರು ಚಿರಸ್ಥಾಯಿಯಾಗುತ್ತದೆ ಎಂದರು.
ಸಂಘ ಸಂಸ್ಥೆಗಳ ಮೂಲ ಉದ್ದೇಶವೇ ಸಮಾಜ ಸೇವೆ, ಅವುಗಳು ಹುಟ್ಟಿರುವುದೇ ಸಾಮಾಜಿಕ ಸೇವೆಗಾಗಿ, ಹಾಗಾಗಿ ಸಂಘ ಸಂಸ್ಥೆಗಳು ಮನುಕುಲದ ಸೇವೆಗಾಗಿ ದುಡಿಯಬೇಕು ಎಂದು ಕಿವಿಮಾತು ಹೇಳಿದರು.

ರೋಟರಿ ಕಾಫಿ ಲ್ಯಾಂಡ್ ಪದಾಧಿಕಾರಿಗಳು ಮತ್ತು ಸದಸ್ಯರು ಸಮಾಜ ಸೇವೆಯನ್ನು ತಮ್ಮ ಕರ್ತವ್ಯವೆಂದು ಪರಿಗಣಿಸಬೇಕು, ನೂತನ ಪದಾಧಿಕಾರಿಗಳು ಸಂಸ್ಥೆಯ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಸಲಹೆ ಮಾಡಿದರು.
ಸಹಾಯಕ ವಲಯ ರಾಜ್ಯಪಾಲ ಟಿ. ಎಮ್. ಪ್ರವೀಣ್ ನಹರ್ ಮಾತನಾಡಿ ಕಾಫಿ ಲ್ಯಾಂಡ್ ಪದಾಧಿಕಾರಿಗಳು ಮತ್ತು ಸದಸ್ಯರು ಸಾಮಾಜಿಕ ಸೇವೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದರು.

ನಾಗೇಶ್ ಕೆಂಜಿಗೆ ನೇತೃತ್ವದ ನೂತನ ಪದಾಧಿಕಾರಿಗಳಿಗೆ ನಿಯೋಜಿತ ಜಿಲ್ಲಾ ರಾಜ್ಯಪಾಲ ವಸಂತ್ ಹೋಬಳಿದಾರ್ ಸಮಾರಂಭದಲ್ಲಿ ಅಧಿಕಾರ ಹಸ್ತಾಂತರಿಸಿದರು, ನೂತನ ಪದಾಧಿಕಾರಿಗಳು ಮತ್ತು ಹೊಸದಾಗಿ ಸೇರ್ಪಡೆಗೊಂಡ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ನೂತನ ಅಧ್ಯಕ್ಷ ನಾಗೇಶ್ ಕೆಂಜಿಗೆ ಮಾತನಾಡಿ ತಮ್ಮ ಅವಧಿಯಲ್ಲಿ ನಡೆಸಲಾಗುವ ಕಾರ್ಯಕ್ರಮಗಳ ವಿವರ ನೀಡುವುದರ ಜೊತೆಗೆ ಅವುಗಳ ಯಶಸ್ಸಿಗೆ ಸಹಕರಿಸುವಂತೆ ಸದಸ್ಯರಿಗೆ ಮನವಿ ಮಾಡಿದರು. ಅಧ್ಯಕ್ಷ ಪದವಿಯನ್ನು ಸಮಾಜ ಸೇವೆಗೆ ದೊರೆತ ಅವಕಾಶವೆಂದು ಭಾವಿಸಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.

ನಿರ್ಗಮಿತ ಅಧ್ಯಕ್ಷ ಪಿ. ತನೋಜ್ ಕುಮಾರ್ ಮಾತನಾಡಿ ತಮ್ಮ ಎರಡು ವ?ಗಳ ಅವಧಿಯಲ್ಲಿ ನಡೆಸಲಾದ ಕಾರ್ಯಕ್ರಮಗಳನ್ನು ವಿವರಿಸಿ ಅವುಗಳ ಯಶಸ್ಸಿಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.

ನಿರ್ಗಮಿತ ಅಧ್ಯಕ್ಷ ಪಿ. ತನೋಜ್ ಕುಮಾರ್ ದಂಪತಿಯನ್ನು ಸನ್ಮಾನಿಸಲಾಯಿತು, ಇದೇ ವೇಳೆ ರೋಟರಿ ಕಾಫಿ ಲ್ಯಾಂಡ್ ನ ಬೆಳ್ಳಿ ಹಬ್ಬದ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು, ಬೆಳ್ಳಿ ಹಬ್ಬದ ಹಿನ್ನೆಲೆಯಲ್ಲಿ ಹೊರ ತಂದ ಕೈಪಿಡಿಯನ್ನು ಬಿಡುಗಡೆಗೊಳಿಸಲಾಯಿತು,

ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ವಲಯ ಸೇನಾನಿ ಎಚ್.ಕೆ. ಮಂಜುನಾಥ, ಕಾರ್ಯದರ್ಶಿ ಎಂ. ಆನಂದ್, ಉಪಾಧ್ಯಕ್ಷ ಶಾಂತರಾಮ್ ಶೆಟ್ಟಿ, ಖಜಾಂಚಿ ಎಂ.ವಿ. ದಯಾನಂದ್, ಸಹಕಾರ್ಯದರ್ಶಿ ಡಾ ಜಿ. ಆರ್. ವೀರೇಂದ್ರ, ಪದಾಧಿಕಾರಿಗಳಾದ ಬಿ.ಕೆ. ಗುರುಮೂರ್ತಿ, ಎಚ್.ಆರ್. ಗುರುಪ್ರಸಾದ್, ರವೀಂದ್ರನಾಥ್ ನಾಯ್ಡು, ರುದ್ರೇಶ್ ಬಿ. ಕಡೂರ್, ಪಾರ್ವತಮ್ಮ, ಹೆಚ್.ಡಿ. ಸುಧಾ ಗೌಡ, ವಿನಯ್ ಎನ್ ಕುಮಾರ್, ಬಿ. ಸಿ. ವಿವೇಕ್, ಹೇಮಂತ್ ಕುಮಾರ್ ಬಿ ಎಂ ಸುರೇಶ್ ನಾಸಿರ್ ಹುಸೇನ್ ಹೆಚ್ ಲೋಹಿತ್ ಎಂ. ಪಿ. ವಿಕ್ರಂ ಉಪಸ್ಥಿತರಿದ್ದರು.

A person’s life is meaningful only through service.

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ‌ಲ್ಲಿ ಇಂದು ನೂತನ ರಸ್ತೆ ಮೇಲ್ವೇತುವೆಯ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ

ಚಿಕ್ಕಮಗಳೂರು: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ಸಚಿವರಾದ ವಿ.ಸೋಮಣ್ಣ ಅವರು ಮೇ 31 ರಂದು (ನಾಳೆ ಭಾನುವಾರ) ಚಿಕ್ಕಮಗಳೂರು ಜಿಲ್ಲೆಯ ವಿವಿಧ ರೈಲ್ವೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಬೆಳಿಗ್ಗೆ...

ಶ್ರೀಗಂಧ ಮರಗಳ ರಕ್ಷಣೆ, ಪ್ಲಾಸ್ಟಿಕ್ ಮುಕ್ತಕ್ಕೆ ಆಗ್ರಹಿಸಿ ಮೌನ ಪ್ರತಿಭಟನೆ

ಚಿಕ್ಕಮಗಳೂರು: ನಾಡಿನಲ್ಲಿ ಶ್ರೀಗಂಧ ಮರಗಳ ರಕ್ಷಣೆ ಮತ್ತು ನಗರವನ್ನು ಪ್ಲಾಸ್ಟಿಕ್ ಮು ಕ್ತಗೊಳಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ಜಿಲ್ಲಾ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘ ಮತ್ತು ವಿವಿಧ ಕನ್ನಡಪರ ಸಂಘಟನೆಗಳ...

Related Articles

ಪ್ಲೆಕ್ಸ್‌ ಹರಿದ ಪ್ರಕರಣ ಇಬ್ಬರು ಆರೋಪಿಗಳ ಬಂಧನ

ಚಿಕ್ಕಮಗಳೂರು: ಕಾಫಿನಾಡಿನ ಕಾಂಗ್ರೆಸ್ ಶಾಸಕ ಹೆಚ್.ಡಿ.ತಮ್ಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರವಿದ್ದ ಪ್ಲೆಕ್ಸ್‌ಗೆ...

ಅಡಿಕೆ ಕಳವು ಪ್ರಕರಣದ ಆರೋಪಿಗಳ ಬಂಧನ

ಬಾಳೆಹೊನ್ನೂರು: ಇಲ್ಲಿಗೆ ಸಮೀಪದ ಜಕ್ಕಣಕ್ಕಿಯ ರೈತರ ಗೋದಾಮಿನಲ್ಲಿಟ್ಟಿದ್ದ ಅಡಿಕೆಯನ್ನು ಕಳವು ಮಾಡಿದ ಆರೋಪದಲ್ಲಿ ಪೊಲೀಸರು ಇಬ್ಬರನ್ನು...

ಮೂಡಿಗೆರೆಯಲ್ಲಿ ಬಾಗಿಲು ಮುರಿದು ಕಳ್ಳತನ

ಮೂಡಿಗೆರೆ: ಬೀಗ ಹಾಕಿದ್ದ ಮನೆಯೊಂದರ ಮುಂಬಾಗಿಲು ಮುರಿದು ಮನೆಯೊಳಗೆ ನುಗ್ಗಿ ನಗದು ಸಹಿತ ಅಪಾರ ಮೌಲ್ಯದ...

ನಾಗಲಕ್ಷ್ಮಿ ಚಿತ್ರಮಂದಿರದ ಪ್ರದರ್ಶನ ಸ್ಥಗಿತ

ಚಿಕ್ಕಮಗಳೂರು: ಅಗ್ನಿ ಸುರಕ್ಷತಾ ಪರಿಕರಗಳನ್ನು ಅಳವಡಿಸದ ಕಾರಣಕ್ಕೆ ನಗರದ ನಾಗಲಕ್ಷ್ಮಿ ಚಿತ್ರಮಂದಿರದಲ್ಲಿ ಚಲನಚಿತ್ರ ಪ್ರದರ್ಶನಗಳನ್ನು ಅಧಿಕಾರಿಗಳು...