Home namma chikmagalur Tarikere rockfall:ಭದ್ರ ಮೆಲ್ದಂಡೆ ಬಂಡೆ ಸ್ಪೋಟ ಮನೆಗಳ ಮೇಲೆ ಕಲ್ಲಿನ ರಾಶಿ
TarikereLatest News

rockfall:ಭದ್ರ ಮೆಲ್ದಂಡೆ ಬಂಡೆ ಸ್ಪೋಟ ಮನೆಗಳ ಮೇಲೆ ಕಲ್ಲಿನ ರಾಶಿ

Share
Share

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಭದ್ರ ಡ್ಯಾಮ್ ನಿಂದ ಚಿತ್ರದುರ್ಗ ಮತ್ತು ತುಮಕೂರು ಹಾಗೂ ಕೋಲಾರ ಜಿಲ್ಲೆಯ ಜನರಿಗೆ ಕುಡಿಯುವ ನೀರು ಒದಗಿಸಲು ಕಳೆದ ಇಪ್ಪತ್ತು ವರ್ಷಗಳಿಂದ ಕಾಮಗಾರಿ ನಡೆಯುತ್ತಿದ್ದು ಪದೇ,ಪದೇ ಕಾಮಗಾರಿಯಿಂದ ಜನರಿಗೆ ತೊಂದರೆ ಆಗುತ್ತಿದೆ ಎಂಬ ದೂರುಗಳು ಬಂದರು ಎಚ್ಚರಿಕೆ ವಹಿಸದೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಬೇಜಾವಬ್ದಾರಿ ತೋರಿಸುತ್ತಿದ್ದಾರೆ ಎಂದು ಜನ ದೂರುತ್ತಿದ್ದಾರೆ.

ಕಳೆದ ತಿಂಗಳು ಅಜ್ಜಂಪುರ ಸಮೀಪದ ಅಬ್ಬಿನಹೊಳಲು ಗ್ರಾಮದ ಸಮೀಪ ಭದ್ರ ನೀರು ಹರಿಸಿದ್ದರಿಂದ ರಾತ್ರಿ ವೇಳೆಯಲ್ಲಿ ಸೇತುವೆ ಕುಸಿದು ಅನಾಹುತ ಆಗಿತ್ತು .ಇದರಿಂದ ಬೆಳಗ್ಗೆ ಎಂ.ಹೊಸಳ್ಳಿ ಗ್ರಾಮದ ಅನಾರೋಗ್ಯಕ್ಕೆ ತುತ್ತಾಗಿದ್ದ ವ್ಯಕ್ತಿಯನ್ನು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಡವಾಗಿದ್ದರಿಂದ ಆತನ ಪ್ರಾಣವೇ ಹೋಗಿತ್ತು ಅಧಿಕಾರಿಗಳು ಬಂದು ತಿಪ್ಪೇ ಸಾರಿಸಿ ಹೋದರು.

ನಿನ್ನೆ ರಾತ್ರಿ ಎನ್.ಆರ್.ಪುರದ ಸಮೀಪದ ಸಾತ್ಕೊಳ ಗ್ರಾಮದಲ್ಲಿ ಮತ್ತೊಂದು ಅನಾಹುತ ಸಂಭವಿಸಿದೆ.ಭದ್ರ ನಾಲೆ ತೆಗೆಯುವಾಗ ಬಂಡೆ ಸ್ಪೋಟಗೊಳಿಸಿದ್ದರಿಂದ ಹತ್ತಕ್ಕೂ ಹೆಚ್ಚು ಮನೆಗಳ ಮೇಲೆ ಕಲ್ಲಿನ ರಾಶಿ ಬಿದ್ದು ಸ್ವಲ್ಪದರಲ್ಲಿ ಪ್ರಾಣಪಾಯದಿಂದ ಜನ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಕೃಷ್ಣಮೂರ್ತಿ, ಚನ್ನಪ್ಪ, ಗಣೇಶ ಮತ್ತು ಶ್ರೀನಿವಾಸ ಸೇರಿದಂತೆ ಹತ್ತಕ್ಕೂ ಹೆಚ್ಚಿನ ಮನೆಗಳ ಮೇಲೆ ಬಂಡೆ ಸಿಡಿದು ಮನೆಗಳ ಮೇಲೆ ಬಿದ್ದಿದ್ದು ಬಾಣಂತಿ ಮತ್ತು ಮಗು ಅಪಾಯದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಇನ್ನಾದರು ಅಧಿಕಾರಿಗಳು ಎಚ್ಚರಿಕೆ ವಹಿಸ ಬೇಕಾಗಿದೆ.

A rockfall on a solid bank a pile of stones on top of houses

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...