Home namma chikmagalur Tarikere rockfall:ಭದ್ರ ಮೆಲ್ದಂಡೆ ಬಂಡೆ ಸ್ಪೋಟ ಮನೆಗಳ ಮೇಲೆ ಕಲ್ಲಿನ ರಾಶಿ
TarikereLatest News

rockfall:ಭದ್ರ ಮೆಲ್ದಂಡೆ ಬಂಡೆ ಸ್ಪೋಟ ಮನೆಗಳ ಮೇಲೆ ಕಲ್ಲಿನ ರಾಶಿ

Share
Share

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಭದ್ರ ಡ್ಯಾಮ್ ನಿಂದ ಚಿತ್ರದುರ್ಗ ಮತ್ತು ತುಮಕೂರು ಹಾಗೂ ಕೋಲಾರ ಜಿಲ್ಲೆಯ ಜನರಿಗೆ ಕುಡಿಯುವ ನೀರು ಒದಗಿಸಲು ಕಳೆದ ಇಪ್ಪತ್ತು ವರ್ಷಗಳಿಂದ ಕಾಮಗಾರಿ ನಡೆಯುತ್ತಿದ್ದು ಪದೇ,ಪದೇ ಕಾಮಗಾರಿಯಿಂದ ಜನರಿಗೆ ತೊಂದರೆ ಆಗುತ್ತಿದೆ ಎಂಬ ದೂರುಗಳು ಬಂದರು ಎಚ್ಚರಿಕೆ ವಹಿಸದೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಬೇಜಾವಬ್ದಾರಿ ತೋರಿಸುತ್ತಿದ್ದಾರೆ ಎಂದು ಜನ ದೂರುತ್ತಿದ್ದಾರೆ.

ಕಳೆದ ತಿಂಗಳು ಅಜ್ಜಂಪುರ ಸಮೀಪದ ಅಬ್ಬಿನಹೊಳಲು ಗ್ರಾಮದ ಸಮೀಪ ಭದ್ರ ನೀರು ಹರಿಸಿದ್ದರಿಂದ ರಾತ್ರಿ ವೇಳೆಯಲ್ಲಿ ಸೇತುವೆ ಕುಸಿದು ಅನಾಹುತ ಆಗಿತ್ತು .ಇದರಿಂದ ಬೆಳಗ್ಗೆ ಎಂ.ಹೊಸಳ್ಳಿ ಗ್ರಾಮದ ಅನಾರೋಗ್ಯಕ್ಕೆ ತುತ್ತಾಗಿದ್ದ ವ್ಯಕ್ತಿಯನ್ನು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಡವಾಗಿದ್ದರಿಂದ ಆತನ ಪ್ರಾಣವೇ ಹೋಗಿತ್ತು ಅಧಿಕಾರಿಗಳು ಬಂದು ತಿಪ್ಪೇ ಸಾರಿಸಿ ಹೋದರು.

ನಿನ್ನೆ ರಾತ್ರಿ ಎನ್.ಆರ್.ಪುರದ ಸಮೀಪದ ಸಾತ್ಕೊಳ ಗ್ರಾಮದಲ್ಲಿ ಮತ್ತೊಂದು ಅನಾಹುತ ಸಂಭವಿಸಿದೆ.ಭದ್ರ ನಾಲೆ ತೆಗೆಯುವಾಗ ಬಂಡೆ ಸ್ಪೋಟಗೊಳಿಸಿದ್ದರಿಂದ ಹತ್ತಕ್ಕೂ ಹೆಚ್ಚು ಮನೆಗಳ ಮೇಲೆ ಕಲ್ಲಿನ ರಾಶಿ ಬಿದ್ದು ಸ್ವಲ್ಪದರಲ್ಲಿ ಪ್ರಾಣಪಾಯದಿಂದ ಜನ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಕೃಷ್ಣಮೂರ್ತಿ, ಚನ್ನಪ್ಪ, ಗಣೇಶ ಮತ್ತು ಶ್ರೀನಿವಾಸ ಸೇರಿದಂತೆ ಹತ್ತಕ್ಕೂ ಹೆಚ್ಚಿನ ಮನೆಗಳ ಮೇಲೆ ಬಂಡೆ ಸಿಡಿದು ಮನೆಗಳ ಮೇಲೆ ಬಿದ್ದಿದ್ದು ಬಾಣಂತಿ ಮತ್ತು ಮಗು ಅಪಾಯದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಇನ್ನಾದರು ಅಧಿಕಾರಿಗಳು ಎಚ್ಚರಿಕೆ ವಹಿಸ ಬೇಕಾಗಿದೆ.

A rockfall on a solid bank a pile of stones on top of houses

Share

Leave a comment

Leave a Reply

Your email address will not be published. Required fields are marked *

Don't Miss

ಸರ್ವಜ್ಞರ ತ್ರಿಪದಿಗಳು ಸಮಾಜದ ಅಂಕುಡೊಂಕು ತಿದ್ದುವ ಚಿಕಿತ್ಸಕ ಶಕ್ತಿಗಳು

ಚಿಕ್ಕಮಗಳೂರು: ಕನ್ನಡದ ಮಹಾನ್ ಸಂತ, ಕವಿ ಮತ್ತು ದಾರ್ಶನಿಕ ಸರ್ವಜ್ಞರ ತ್ರಿಪದಿಗಳು ಕೇವಲ ಸಾಹಿತ್ಯವಲ್ಲ, ಅವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಚಿಕಿತ್ಸಕ ಶಕ್ತಿಯಾಗಿವೆ ಎಂದು ಭಾರತ ಸರ್ಕಾರದ ರಾಜ್ಯ ಪರಿಸರ ಮೌಲ್ಯಮಾಪನ...

ರಸ್ತೆ ಅಪಘಾತದಲ್ಲಿ ಬೈಕ್ ಸಾವಾರನ ಸಾವು

ಎನ್. ಆರ್ ಪುರ: ಬಾಳೆಹೊನ್ನೂರು ಸಮೀಪದ ಮಸೀದಿಕೆರೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಮೃತರನ್ನು 21 ವರ್ಷದ ಗೋಕುಲ್ ಎಂದು...

Related Articles

ನಯನ ಔಟ್ -ಇಕ್ಕಟ್ಟಿನಲ್ಲಿ ತಮ್ಮಯ್ಯ ? ರಾಜೇಗೌಡ-ಆನಂದ್ ಸೇಫ್-ಶ್ರೀನಿವಾಸ್ ಗೆ ತ್ರೀ ಶಂಕು ಸ್ಥಿತಿ ?

ಚಿಕ್ಕಮಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಮೂರು ಬಣವಾಗಿರುವುದು ಸ್ಪಷ್ಟವಾಗಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಬಣ ,ಇನ್ನೊಂದು...

ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ಕಾಡಾನೆಗಳು ಚಿಕ್ಕಮಗಳೂರು ನಗರದಿಂದ ಕೇವಲ 5 ಕಿಮೀ ದೂರದ...

ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ  ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಬಿಸಿಯೂಟದ...

ಸಂಸ್ಕೃತಿ, ಸಾಹಿತ್ಯ, ಕಲೆಯಿಂದ ಸುಸಂಸ್ಕೃತ ಸಮುದಾಯ ಕಟ್ಟಲು ಸಾಧ್ಯ

ಚಿಕ್ಕಮಗಳೂರು: ಸಂಸ್ಕೃತಿ, ಸಾಹಿತ್ಯ, ಕಲೆಯ ಮೂಲಕ ಮಾತ್ರ ಸುಸಂಸ್ಕೃತ ಸಮುದಾಯವನ್ನು ಕಟ್ಟಬಹುದು ಎಂದು ಬಸವತತ್ವ ಪೀಠಾಧ್ಯಕ್ಷರಾದ...