Home Latest News ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಆಯೋಗ ಸದಸ್ಯರ ತಂಡ
Latest NewschikamagalurHomenamma chikmagalur

ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಆಯೋಗ ಸದಸ್ಯರ ತಂಡ

Share
Share

ಚಿಕ್ಕಮಗಳೂರು: ಆಸ್ಪತ್ರೆಯ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಿದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯರುಗಳಾದ ಶಶಿಧರ ಕೋಸಂಬೆ ಹಾಗೂ ಡಾ.ತಿಪ್ಪೆಸ್ವಾಮಿ ಕೆ.ಟಿ. ನೇತ್ರತ್ವದ ತಂಡ ಅಪೌಷ್ಟಿಕ ಮಕ್ಕಳ ಪುನಃಶ್ಚೇತನ ಘಟಕ, ವಿಶೇಷ ನವಜಾತ ಶಿಶುಗಳ ಆರೈಕೆ ಘಟಕ ಕಾಂಗರೂ ಮದರ ಕೇರ್,ಮಕ್ಕಳ ವಾರ್ಡ್, ಹೆರಿಗೆ ವಾರ್ಡ್, ಹೊರ ರೋಗಿ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಕಾರ ಜಿಲ್ಲೆಯಲ್ಲಿ ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ 45 ಇದ್ದಾರೆ. ಮತ್ತೆ ಹತ್ತು ಹಾಸಿಗೆಯ ಸಾಮರ್ಥ್ಯವುಳ್ಳ ಅಪೌಷ್ಟಿಕ ಮಕ್ಕಳ ಪುನಃಶ್ಚೇತನ ಆರೈಕೆ ಘಟಕದ ಇದೆ. ಆದರೆ ಬರೀ ಒಂದು ಮಗು ಮಾತ್ರ ದಾಖಲಾಗಿತ್ತು, ಅದು ಸಹ ಹೋರ ರೋಗಿ ವಿಭಾಗಕ್ಕೆ ಬಂದ ಮಗು ಇದನ್ನು ಕಂಡ ಆಯೋಗ ಜಿಲ್ಲೆಯಲ್ಲಿ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ತಂಡದವರು ಎನು ಮಾಡ್ತಾ ಇದ್ದಾರೆ ಎಂದು ಸ್ಥಳದಲ್ಲಿದ್ದ ಡಿಹೆಚ್ಚ್ಓ ಪ್ರಶ್ನಿಸುವ ಅಸಮಾಧಾನ ವ್ಯಕ್ತಪಡಿಸಿ, ಅಡುಗೆ ಮನೆ ಪ್ರವೇಶಿಸಿದ ಸದಸ್ಯರು ಅಲ್ಲಿನ ಅವ್ಯವಸ್ಥೆಯ ನೋಡಿ ದಂಗಾದರು.ಮಕ್ಕಳ ಆರೈಕೆ ಬಗ್ಗೆ ನಿಗಾ ವಹಿಸುವಂತೆ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

ವಿಶೇಷ ನವಜಾತ ಶಿಶುಗಳ ಆರೈಕೆ ಘಟಕ ಭೇಟಿ ನೀಡಿ, ಇನ್ ಬರ್ನ ನವಜಾತ ಶಿಶುಗಳಿಗೆ ಮಾತ್ರ ಉತ್ತಮವಾಗಿ ಆರೈಕೆ ಮಾಡುತ್ತಿರುವ ವೈದ್ಯರು ಔಟ್ ಬರ್ನ ನವಜಾತ ಶಿಶುಗಳಿಗೆ ಸರಿಯಾದ ರೀತಿಯಲ್ಲಿ ಆರೈಕೆ ಮಾಡುತ್ತಿರುವ ಕ್ರಮವನ್ನು ಕಂಡು ಗರಂ ಆದ ಸದಸ್ಯರು ಯಾಕೆ ರೀತಿಯ ತಾರತಮ್ಯ ಇದು ಸರಿಯಾದ ಕ್ರಮವಲ್ಲ ಈ ಭೂಮಿಯ ಮೇಲೆ ಜನಿಸುವ ಪ್ರತಿಯೊಂದು ಮಗುವಿನ ರಕ್ಷಣೆ ಮಾಡುವ ಜವಾಬ್ದಾರಿ ನಮ್ಮದು, ಹೀಗಾಗಿ ಇದನ್ನು ಕೂಡಲೇ ಸರಿಪಡಿಸಿ ಎಂದು ಡಿಎಸ್ ಅವರಿಗೆ ಖಡಕ್ ಎಚ್ಚರಿಕೆ ನೀಡಿದರು.

ಕಾಂಗರೂ ಮದರ ಕೇರ್ ಗೆ ಎಂಟ್ರಿ ಕೊಟ್ಟ ಆಯೋಗ ಅಲ್ಲಿ ರಿವೈಂಡಿಗ್ ಕಾಟ್ ಗಳು ಇಲ್ಲಿದಿರುವನ್ನು ಕಂಡು ಒಂದು ವಾರದಲ್ಲಿ ರಿವೈಂಡಿಗ್ ಕಾಟ್ ಗಳ ವ್ಯವಸ್ಥೆ ಮಾಡಿ, ಆಯೋಗಕ್ಕೆ ವರದಿ ನೀಡಲು ಸೂಚನೆ ನೀಡಿ ನಂತರ ಸುಖಿ ಒನ್ ಸ್ಟಾಪ್ ಸೆಂಟರ್ ಗೆ ಗಮನಿಸಿ, ಸಂಕಷ್ಟದಲ್ಲಿ ಬಂದಂತಹ ಮಕ್ಕಳಿಗೆ ಸಕಾಲದಲ್ಲಿ ಸೇವೆ ಒದಗಿಸುವಂತೆ ಸಲಹೆ ನೀಡಿದರು.

ಸ್ಕ್ಯಾನಿಂಗ್ ಸೆಂಟರ್ ಭೇಟಿ: ಲಕ್ಷ್ಮಿ ನರ್ಸಿಂಗ್ ಹೋಂ ಮತ್ತು ಪ್ರಶಾಂತಿ ನರ್ಸಿಂಗ್ ಹೋಂ ಗಳ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಭೇಟಿ ನೀಡಿ ಆಯೋಗ ಪರಿಶೀಲನೆ ನಡೆಸಿದ ಆಯೋಗ ಪಿಸಿಪಿಎನ್ಡಿಟಿ ಕಾಯ್ದೆ ಪ್ರಕಾರ ಸ್ಕ್ಯಾನಿಂಗ್ ಸೆಂಟರ್ ಗಳು ಕಾರ್ಯ ನಿರ್ವಹಿಸುತ್ತಿಲ್ಲ, ಆದರೆ ನೋಡಲ್ ಅಧಿಕಾರಿ ಇದೆಲ್ಲ ಗಮನಿಸಿದೆ ಇರುವುದು ನೋವಿನ ಸಂಗತಿ ಎಂದು ಕಳವಳ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ, ಡಿಎಚ್ಒ, ಜಿಲ್ಲಾ ಸರ್ಜನ್ ಸೇರಿದಂತೆ ಹಿರಿಯ ವೈದ್ಯಾಧಿಕಾರಿಗು ಹಾಜರಿದ್ದರು

A team of commission members made a surprise visit to the district hospital.

Share

Leave a comment

Leave a Reply

Your email address will not be published. Required fields are marked *

Don't Miss

ಅರಣ್ಯ ಸಚಿವರಿಗೆ ಮಲ್ನಾಡು ಹಾಗೂ ಬಯಲು ಸೀಮೆಗೂ ಇರೋ ವ್ಯತ್ಯಾಸ ಗೊತ್ತಿಲ್ಲ

ಚಿಕ್ಕಮಗಳೂರು: ಅರಣ್ಯ ಸಚಿವರಿಗೆ ಮಲ್ನಾಡು ಭಾಗಕ್ಕೂ ಹಾಗೂ ಬಯಲು ಸೀಮೆಗೂ ಇರೋ ವ್ಯತ್ಯಾಸ ಗೊತ್ತಿಲ್ಲ. ನಿರಂತರವಾಗಿ ಈ ಭಾಗದಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿವೆ ಇದಕ್ಕೆ ಶಾಶ್ವತವಾಗಿ ಪರಿಹಾರ ಒದಗಿಸಬೇಕೆಂದು ನಿಖಿಲ್ ಕುಮಾರಸ್ವಾಮಿ...

ಬನ್ನೂರು ಬಳಿ ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು

ಚಿಕ್ಕಮಗಳೂರು:  ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆ ಹಾಗೂ ಮಾನವ ಸಂಘರ್ಷ ಮುಂದುವರೆದಿದೆ. ಕಾಡಾನೆ ದಾಳಿಗೆ ಯುವತಿ ಬಲಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬನ್ನೂರು ಬಳಿ ನಡೆದಿದೆ. ಅನಿತಾ (25) ಸಾವನ್ನಪ್ಪಿದ...

Related Articles

ಹಕ್ಕುಪತ್ರಕ್ಕಾಗಿ ಸಿ.ಟಿ.ರವಿ ಪ್ರತಿಭಟನೆ ಹಾಸ್ಯಾಸ್ಪದ

ಚಿಕ್ಕಮಗಳೂರು: : ಕಳೆದ ೧೯ ವರ್ಷದಲ್ಲಿ ಆಡಳಿತದಲ್ಲಿದ್ದಾಗ ಬಡವರಿಗೆ ನಿವೇಶನ, ಮನೆಯ ಹಕ್ಕುಪತ್ರ ನೀಡದ ಮಾಜಿ...

ಕಾಡಾನೆಗಳ ನಿಯಂತ್ರಣಕ್ಕೆ ಕೇಂದ್ರ ಸಚಿವರಲ್ಲಿ ಸಂಸದರ ಮನವಿ

ಚಿಕ್ಕಮಗಳೂರು: ಜೀವ ಹಾನಿ, ಬೆಳೆ ಹಾನಿ ಜೊತೆಗೆ ಭಯಭೀತಿ ನಿಯಂತ್ರಣ ಮಾಡಲು ಚಿಕ್ಕಮಗಳೂರು ಜಿಲ್ಲೆಯಲ್ಲಿ ವೈಜ್ಞಾನಿಕ...

ಜಂಟಿ ಸಮೀಕ್ಷೆ ನಡೆಸಿ ಬೆಳೆ ಪರಿಹಾರ ನೀಡಲು ಜಿಲ್ಲಾ ಬೆಳೆಗಾರರ ಸಂಘ ಆಗ್ರಹ

ಚಿಕ್ಕಮಗಳೂರು: ರಾಜ್ಯಸರ್ಕಾರ ತೋಟಗಾರಿಕೆ, ಕೃಷಿ ಮತ್ತು ಕಾಫಿಮಂಡಳಿ ಅಧಿಕಾರಿಗಳನ್ನೊಳಗೊಂಡ ಜಂಟಿ ಸಮೀಕ್ಷೆ ನಡೆಸಿ ಆಯಾ ತಾಲ್ಲೂಕು...

ಅಯ್ಯನಕೆರೆಯಲ್ಲಿ ತೂಬು – ಕೆರೆ ದುರಸ್ತಿಗೆ ಐದು ಕೋಟಿ ಹಣ

ಚಿಕ್ಕಮಗಳೂರು: ಪ್ರವಾಸೋದ್ಯಮದ ಅಭಿವೃದ್ಧಿ ದೃಷ್ಟಿಯಿಂದ ಅಯ್ಯನಕೆರೆಯಲ್ಲಿ ತೂಬು ಮತ್ತು ಕೆರೆ ದುರಸ್ತಿಗೆ ಐದು ಕೋಟಿ ಹಣವನ್ನು...