Home namma chikmagalur chikamagalur ಸಂಬಂಧಿಕರ ಮನೆಗೆ ಹೊರಟ ಯುವಕ ರಸ್ತೆ ಅಪಘಾತದಲ್ಲಿ ಸಾವು
chikamagalurHomeLatest Newsnamma chikmagalur

ಸಂಬಂಧಿಕರ ಮನೆಗೆ ಹೊರಟ ಯುವಕ ರಸ್ತೆ ಅಪಘಾತದಲ್ಲಿ ಸಾವು

Share
Share

ಶೃಂಗೇರಿ: ಪೊಲೀಸ್‌ ಠಾಣಾ ವ್ಯಾಪ್ತಿಯ ಸುಂಕದಮಕ್ಕಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ-169ರಲ್ಲಿ ಬೈಕ್ ಅಪಘಾತ ಸಂಭವಿಸಿ ಪ್ರದೀಪ್ (28) ಎಂಬುವರು ಮೃತಪಟ್ಟಿದ್ದಾರೆ.

ಪ್ರದೀಪ್ ಅವರು ತಮ್ಮ ಸ್ನೇಹಿತ ಮಹೇಶ್ ಎಂಬುವರ ಜೊತೆ ಬೈಕ್‌ನಲ್ಲಿ ಕಾರ್ಕಳಕ್ಕೆ ಸಂಬಂಧಿಕರ ಮನೆಗೆ ಹೊರಟಿದ್ದರು. ಮಹೇಶ್ ಬೈಕ್ ಚಲಾಯಿಸುತ್ತಿದ್ದು, ಪ್ರದೀಪ್ ಹಿಂಬದಿ ಕುಳಿತಿದ್ದರು. ಎದುರಿನಿಂದ ಬಂದ ಲಾರಿಗೆ ಸೈಡ್ ಕೊಡಲು ಹೋಗಿ, ಮಹೇಶ್ ಬೈಕನ್ನು ಅಜಾಗರೂಕತೆಯಿಂದ ಚಾಲನೆ ಮಾಡಿದ ಕಾರಣ ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ.

ತಲೆಯ ಹಿಂಭಾಗಕ್ಕೆ ಬಲವಾದ ಪೆಟ್ಟು ಬಿದ್ದು ರಕ್ತಗಾಯಗೊಂಡಿದ್ದ ಪ್ರದೀಪ್ ಅವರನ್ನು ಶೃಂಗೇರಿಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ. ಮೃತರ ತಾಯಿ ಶಾರದಾ ನೀಡಿದ ದೂರಿನನ್ವಯ ಬೈಕ್ ಚಾಲಕ ಮಹೇಶ್ ವಿರುದ್ಧ ಪ್ರಕರಣ ದಾಖಲಾಗಿದೆ.

A young man on his way to a relative’s house died in a road accident.

Share

Leave a comment

Leave a Reply

Your email address will not be published. Required fields are marked *

Don't Miss

ಇಂದಿನಿಂದ ಮದ್ಯದ ದರ ಶೇ.30 ಹೆಚ್ಚಳ

ಬೆಂಗಳೂರು: ಮದ್ಯದಲ್ಲಿನ ಆ‌ಲ್ಕೋಹಾಲ್ ಪ್ರಮಾಣ ಆಧರಿಸಿ ತೆರಿಗೆ ವಿಧಿಸುವ ಹೊಸ ಅಬಕಾರಿ ನೀತಿಯು ರಾಜ್ಯದಲ್ಲಿ ಅಧಿಕೃತವಾಗಿ ಜಾರಿಯಾಗಿದ್ದು, ಇದರೊಂದಿಗೆ ಜನಸಾಮಾನ್ಯರು ಬಳಸುವ ಅಗ್ಗದ ಮದ್ಯಗಳ ಬೆಲೆ ಶೇ.30ರಷ್ಟು ದುಬಾರಿಯಾಗಲಿದೆ. ಪ್ರೀಮಿಯಂ ಮತ್ತು...

ಮಣ್ಣುಮುಕ್ಕ ಹಾವು ಮಾರಾಟಕ್ಕೆ ಯತ್ನ: ಐವರು ಬಂಧನ

ಚಿಕ್ಕಮಗಳೂರು: ಅಪರೂಪದ ವನ್ಯಜೀವಿಯಾದ ಮಣ್ಣುಮುಕ್ಕ ಹಾವು (Red Sand Boa) ಮಾರಾಟಕ್ಕೆ ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ಚಿಕ್ಕಮಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ನಗರದ...

Related Articles

ಸಿ.ಟಿ.ರವಿಗೆ ಸೋಲಿನ ಬಳಿಕ ದಲಿತತ್ವ ನೆನಪು

ಚಿಕ್ಕಮಗಳೂರು: ಹಿಂದುತ್ವ ಜಪಿಸುತ್ತಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ಸೋಲಿನ ಬಳಿಕ ದಲಿತತ್ವ ನೆನಪಾಗಿದೆ...

ವಿದ್ಯುತ್ ತಂತಿ ತಗುಲಿ ರೈತನ ಧಾರುಣ ಸಾವು

ಕಡೂರು: ವಿದ್ಯುತ್ ತಂತಿ ತಗುಲಿ ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದುರದೃಷ್ಟಕರ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು...

ಭದ್ರಾ ಹಿನ್ನೀರಿನ ಪ್ರದೇಶದಲ್ಲಿ ಆನೆಗಳ ಹಿಂಡು ಪ್ರತ್ಯಕ್ಷ

ಎನ್.ಆರ್. ಪುರ: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ನರಸಿಂಹರಾಜಪುರ...

ಲಾರಿ ಪಂಚರ್ ಹಾಕುತ್ತಿದ್ದ ಕಾರ್ಮಿಕ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ನಗರದ 60 ಅಡಿ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಲಾರಿಗೆ ಪಂಚರ್ ಹಾಕುತ್ತಿದ್ದ...