Home Latest News ಹಾಸನದಲ್ಲಿ ಊಟಕ್ಕೆ ಕುಳಿತಿದ್ದಾಗಲೇ ಯುವಕನಿಗೆ ಹೃದಯಾಘಾತ
Latest NewsCrime NewsHomenamma chikmagalurState News

ಹಾಸನದಲ್ಲಿ ಊಟಕ್ಕೆ ಕುಳಿತಿದ್ದಾಗಲೇ ಯುವಕನಿಗೆ ಹೃದಯಾಘಾತ

Share
Share

ಹಾಸನ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಸಣ್ಣ ವಯಸ್ಸಿನವರೇ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವುದು ಆತಂಕಕಾರಿಯಾಗಿದೆ. ಊಟಕ್ಕೆ ಕುಳಿತಿದ್ದ ವ್ಯಕ್ತಿಯೊಬ್ಬ ಎದೆನೋವೆಂದು ಹೇಳುತ್ತಿದ್ದಂತೆಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ ನಗರದ ಸತ್ಯಮಂಗಲ ಬಡಾವಣೆಯ 35 ವರ್ಷದ ಚೇತನ್ ಹೃದಯಾಘಾತದಿಂದ ಸಾವನ್ನಪ್ಪಿದವರು. ಕಿಕ್ಕೇರಿ ಮೂಲದ ಚೇತನ್ ಹಾಸನದ ಹಳೇ ಬಸ್ ನಿಲ್ದಾಣದ ಬಳಿ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದರು. ಸತ್ಯಮಂಗಲ ಬಡಾವಣೆಯಲ್ಲಿ ಪತ್ನಿ ಹಾಗೂ ಮಗುವಿನೊಂದಿಗೆ ವಾಸವಾಗಿದ್ದರು.

ರಾತ್ರಿ ಅಂಗಡಿ ಬಾಗಿಲು ಹಾಕಿಕೊಂಡು ಮನೆಗೆ ಚೇತನ್‌ ಮನೆಗೆ ಬಂದಿದ್ದರು. ಈ ವೇಳೆ ಅವರ ಪತ್ನಿ ಊಟಕ್ಕೆ ಕರೆದಿದ್ದು, ಊಟಕ್ಕೆ ಕುಳಿತುಕೊಳ್ಳುವಾಗ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಎದೆ ನೋಯುತ್ತಿದೆ ಎಂದು ಪತ್ನಿಗೆ ಹೇಳಿ, ಮೇಲೆ‌ ಎದ್ದೇಳುವಾಗಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಷ್ಟರಲ್ಲಿ ಚೇತನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

A young man suffered a heart attack while sitting for lunch in Hassan.

Share

Leave a comment

Leave a Reply

Your email address will not be published. Required fields are marked *

Don't Miss

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿಅಹ್ವಾನ

ಚಿಕ್ಕಮಗಳೂರು: ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳು ಒಳಗೊಂಡಂತೆ) ೨೦೨೬-೨೭ನೇ ಶೈಕ್ಷಣಿಕ ಸಾಲಿಗೆ ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ...

ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಗುದ್ದಲಿ ಪೂಜೆ

ಚಿಕ್ಕಮಗಳೂರು: ಆರೋಗ್ಯ, ಶಿಕ್ಷಣ ಮತ್ತು ಜನರ ಬದುಕಿಗಾಗಿ ಆದ್ಯತೆಯ ಮೇಲೆ ಕೆಲಸ ಮಾಡಬೇಕಾಗಿರುವುದು ಚುನಾಯಿತ ಪ್ರತಿನಿಧಿಗಳ ಕರ್ತವ್ಯ ಆಗಿರುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ...

Related Articles

ಅಂಬೇಡ್ಕರ್ ವಸತಿ ಶಾಲೆಯಲ್ಲಿ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಳಪೆ ಮಟ್ಟದ ಹಾಗೂ ಅರೆಬೆಂದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ...

15.99 ಲಕ್ಷ ಜನರ ಸಂಧ್ಯಾ ಸುರಕ್ಷಾ ಯೋಜನೆಯ ರದ್ದು

ಚಿಕ್ಕಮಗಳೂರು: ರಾಜ್ಯ ಸರಕಾರ ನೀಡುತ್ತಿರುವ ಸಂಧ್ಯಾ ಸುರಕ್ಷಾ ಯೋಜನೆಯ ಪ್ರಯೋಜನ ೧೫.೯೯ ಲಕ್ಷ ಜನರಿಗೆ ರದ್ದಾಗಿದ್ದು...

ಅಯೋದ್ಯೆ ಹಣ ಕಳವು-ಸುಪ್ರೀಂನಿಂದ ಪಾರದರ್ಶಕ ತನಿಖೆಯಾಗಲಿ

ಚಿಕ್ಕಮಗಳೂರು: ಶ್ರೀರಾಮನ ಹೆಸರಲ್ಲಿ ಅಕಾರಕ್ಕೆ ಬಂದ ಬಿಜೆಪಿ ಶ್ರೀರಾಮನ ಟ್ರಸ್ಟ್ ಮೂಲಕ ಹಣಲೂಟಿ ಮಾಡಿದ್ದೇ ಸಾಧನೆಯಾಗಿದೆ....

ಚಿಕ್ಕಮಗಳೂರು ಜಿಲ್ಲೆಯ ಯಾರಿಗೂ ಸಚಿವ ಸ್ಥಾನವಿಲ್ಲ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಯಾವ ಶಾಸಕರಿಗೂ ಮಂತ್ರಿ ಸ್ಥಾನ ಸಿಗುವುದಿಲ್ಲ ಎಂದು ಖಚಿತ ಮಾಹಿತಿ ಇದೆ....