Home namma chikmagalur chikamagalur ಮಲ್ಲೇಗೌಡ ಆಸ್ಪತ್ರೆಯಲ್ಲಿ ಯುವಕನ ಮೇಲೆ ಹಲ್ಲೆ
chikamagalurCrime NewsHomeLatest Newsnamma chikmagalur

ಮಲ್ಲೇಗೌಡ ಆಸ್ಪತ್ರೆಯಲ್ಲಿ ಯುವಕನ ಮೇಲೆ ಹಲ್ಲೆ

Share
Share

ಚಿಕ್ಕಮಗಳೂರು: ಹಳೇ ಗಲಾಟೆಯೊಂದರ ವಿಚಾರವಾಗಿ ನಗರದ ಮಲ್ಲೇಗೌಡ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದ ಮುಂಭಾಗದಲ್ಲೇ ಯುವಕನೋರ್ವನ ಮೇಲೆ ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಟಿಂಬರ್ ಕೆಲಸ ಮುಗಿಸಿ ಊಟ ಮಾಡುವಾಗ ನಡೆದ ಗಲಾಟೆಯಲ್ಲಿ ಗಾಯಗೊಂಡಿದ್ದ ತನ್ನ ಸ್ನೇಹಿತರಾದ ತೌಸಿಫ್ ಮತ್ತು ಸಚಿನ್‌ರನ್ನು ಚಿಕಿತ್ಸೆಗೆ ದಾಖಲಿಸಿ, ಆಸ್ಪತ್ರೆಯ ಹೊರಗೆ ಕುಳಿತಿದ್ದ ಶಿವಪುರದ ಅರುಣ್ ಕುಮಾರ್ ಎಂಬುವವರ ಮೇಲೆ ಆಕಾಶ್, ಜೀವನ್ ಹಾಗೂ ಇತರರು ಏಕಾಏಕಿ ದಾಳಿ ನಡೆಸಿದ್ದಾರೆ.

ಅರುಣ್ ಕುಮಾರ್ ಆಸ್ಪತ್ರೆಯ ಒಳಗೆ ಓಡಲು ಯತ್ನಿಸಿದಾಗ ತಡೆದು, ಅವಾಚ್ಯವಾಗಿ ನಿಂದಿಸಿ, ಕಣ್ಣಿನ ಭಾಗ ಹಾಗೂ ಮುಖಕ್ಕೆ ತೀವ್ರವಾಗಿ ಗುದ್ದಿ, ಕೆಳಗೆ ಕೆಡವಿ ತುಳಿದಿದ್ದಾರೆ.

ಜೊತೆಯಲ್ಲಿದ್ದ ಸ್ನೇಹಿತರು ಗಲಾಟೆ ಬಿಡಿಸಿದ್ದು, ಗಾಯಾಳು ಅರುಣ್ ಕುಮಾರ್ ನೀಡಿದ ಹೇಳಿಕೆಯನ್ವಯ ನಗರ ಪೊಲೀಸರು ಮೊಕದ್ದಮೆ ಹೂಡಿದ್ದಾರೆ.

A young man was attacked at Mallegowda Hospital.

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ರೈಲ್ವೆ ಲೆವೆಲ್ ಕ್ರಾಸಿಂಗ್ ರಸ್ತೆ ಮೇಲ್ಸೇತುವೆ ಕಾಮಗಾರಿಗೆ ಚಾಲನೆ

ಚಿಕ್ಕಮಗಳೂರು:  ದೇಶದ ಅಭಿವೃದ್ಧಿಯ ಸಂಕೇತವೇ ರೈಲ್ವೆಯಾಗಿದ್ದು, ರೈಲ್ವೆ ಇಲಾಖೆಯನ್ನು ಎಷ್ಟು ಮಟ್ಟಿಗೆ ಅಭಿವೃದ್ಧಿಪಡಿಸುತ್ತೇವೆಯೋ ಅಷ್ಟು ದೇಶಕ್ಕೆ ಒಳ್ಳೆಯದಾಗುತ್ತದೆ ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಸಂದೇಶವಾಗಿದೆ ಎಂದು ಕೇಂದ್ರ ರೈಲ್ವೆ ರಾಜ್ಯ...

ಗುಡುಗು ಸಿಡಿಲಿನ ಆರ್ಭಟಕ್ಕೆ ಬಸ್ ತಂಗುದಾಣದನಲ್ಲಿದ್ದ ದಂಪತಿ ಗಾಯ

ಎನ್.ಆ‌ರ್.ಪುರ: ಕಾಫಿನಾಡಿನಲ್ಲಿ ಮುಂಗಾರುಪೂರ್ವ ಮಳೆಯ ಅಬ್ಬರ ಜೋರಾಗಿದ್ದು, ಗುಡುಗು ಸಿಡಿಲಿನ ಆರ್ಭಟಕ್ಕೆ ದಂಪತಿ ಗಾಯಗೊಂಡಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಸೀಗುವಾನಿ ಗ್ರಾಮದಲ್ಲಿ ಸಂಭವಿಸಿದೆ. ಮಂಜುನಾಥ ಮತ್ತು ಮಮತಾ ಎಂಬ ದಂಪತಿ ಎನ್.ಆರ್.ಪುರ...

Related Articles

ಧಾರಾಕಾರ ಮಳೆಗೆ ಕಾಫಿಸಿಟಿ ಫುಲ್ ಕೂಲ್

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ವರುಣನ ಅಬ್ಬರ ಜೋರಾಗಿದ್ದು ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು ಕಾಫಿ ಸಿಟಿ ಈಗ...

ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಮಲೆನಾಡಿಗರು ಆಕ್ರೋಶ

ಕಳಸ: ಸರ್ಕಾರದ ಬೇಜವಾಬ್ದಾರಿತನ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದ ವಿರುದ್ಧ ಮಲೆನಾಡಿಗರು ಆಕ್ರೋಶದ ತೊಡೆ ತಟ್ಟಿದ್ದಾರೆ. ಸ್ವಾತಂತ್ರ್ಯ...

ಭಾರಿ ಮಳೆಯ ಆರ್ಭಟಕ್ಕೆ ಮೆಸ್ಕಾಂಗೆ 3.21 ಕೋಟಿ ಹಾನಿ

ಚಿಕ್ಕಮಗಳೂರು: ಮುಂಗಾರುಪೂರ್ವ ಮಳೆ ಮತ್ತು ಭಾರಿ ಗಾಳಿಯ ಆರ್ಭಟಕ್ಕೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮೆಸ್ಕಾಂ ವ್ಯಾಪ್ತಿಯಲ್ಲಿ ಭಾರಿ...

ಅಜ್ಜಂಪುರದ ರಸ್ತೆ ಅಪಘಾತದಲ್ಲಿ ಚಾಲಕನ ಸಾವು

ಅಜ್ಜಂಪುರ: ಬುಕ್ಕಂಬುದಿಯಿಂದ ಅಜ್ಜಂಪುರ ರಸ್ತೆಯ ಸಿದ್ದಾಪುರ ತಿರುವಿನಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸಿದ್ದಾಪುರ...