ಚಿಕ್ಕಮಗಳೂರು: ಈಜಲು ತೆರಳಿದ್ದ ತಮಿಳುನಾಡು ಮೂಲದ ಯುವಕ ನೀರುಪಾಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕೋಟೆಹೊಳೆ ಗ್ರಾಮದಲ್ಲಿ ನಡೆದಿದೆ. ದುರ್ಘಟನೆಯಲ್ಲಿ 19 ವರ್ಷದ ಸೂರ್ಯ ಸಾವನ್ನಪ್ಪಿದ್ದಾನೆ.
ಈತ ಮೂಲತಃ ತಮಿಳುನಾಡು ಮೂಲದವನಾಗಿದ್ದು, ಕಳಸ ತಾಲೂಕಿನ ಕೋಟೆಹೊಳೆ ಗ್ರಾಮದ ಬಳಿ ಇರುವ ಕಾಫಿ ತೋಟವೊಂದಕ್ಕೆ ಕೆಲಸಕ್ಕಾಗಿ ಬಂದಿದ್ದನು.
ಸೂರ್ಯ ಭದ್ರಾ ನದಿಯಲ್ಲಿ ಈಜಲು ತೆರಳಿದ್ದಾಗ ಆಳದ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿದ್ದಾನೆ ಎಂದು ತಿಳಿದುಬಂದಿದೆ.
ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಕೂಡಲೇ ಮೃತದೇಹಕ್ಕಾಗಿ ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ.
ಇತ್ತೀಚಿನ ಮಾಹಿತಿಯ ಪ್ರಕಾರ ಯುವಕನ ಮೃತದೇಹ ಇನ್ನು ಪತ್ತೆಯಾಗಿಲ್ಲ ಘಟನೆಯ ಸಂಬಂಧ ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
A young man who had gone swimming in Kalasa fell into the water.
Leave a comment