Home namma chikmagalur chikamagalur ಅಂಬೇಡ್ಕರ್ ಜಯಂತಿ ಮೆರವಣಿಗೆ ಮೇಲೆ ಅಪಘಾತ-ಬಾಲಕಿ ಸಾವು
chikamagalurHomeLatest Newsnamma chikmagalur

ಅಂಬೇಡ್ಕರ್ ಜಯಂತಿ ಮೆರವಣಿಗೆ ಮೇಲೆ ಅಪಘಾತ-ಬಾಲಕಿ ಸಾವು

Share
Share

ಚಿಕ್ಕಮಗಳೂರು: ನಗರದ  ಬಿಳೇಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಭಾರೀ ಅಚಾತುರ್ಯ ಸಂಭವಿಸಿ ದುರ್ಘಟನೆ ನಡೆದಿದೆ. ಮದ್ಯಪಾನ ಮಾಡಿಕೊಂಡಿದ್ದರೆಂದು ಶಂಕಿಸಲಾದ ಕಾರು ಚಾಲಕ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಜನರ ಮೇಲೆ ಕಾರು ಹರಿಸಿದ ಪರಿಣಾಮ 7 ವರ್ಷದ ಸಾನ್ವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಈ ದುರ್ಘಟನೆಯಲ್ಲಿ 7 ಮಂದಿ ಗಾಯಗೊಂಡಿದ್ದು, ಗಂಭೀರ ಸ್ಥಿತಿಯಲ್ಲಿರುವ ಗಾಯಾಳುಗಳನ್ನು ಹಾಸನದ ಮೆಡಿಕಲ್ ಕಾಲೇಜಿಗೆ ರವಾನಿಸಲಾಗಿದೆ. ಗಾಯಾಳುಗಳಲ್ಲಿ 11 ವರ್ಷದ ನಿಶ್ಚಿತ್, ತೃಪ್ತಿ, ತಿಮ್ಮರಾಜು, ಉಷಾ, ಚೇತನ್, ಸೃಷ್ಠಿ ಹಾಗೂ ನಾಗರಾಜ್ ಸೇರಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆಯೇ ಕಾರು ಚಾಲಕ ಸುಧಾಕರ್‌ರನ್ನು ಸ್ಥಳೀಯರು ಹಿಡಿದು ಥಳಿಸಿರುವ ಆರೋಪ ಕೇಳಿಬಂದಿದೆ. ಈ ವೇಳೆ ಕಾರಿನಲ್ಲಿ ಇದ್ದ ಮತ್ತೋರ್ವ ವ್ಯಕ್ತಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಬಳಿಕ ಗಾಯಗೊಂಡ ಚಾಲಕನನ್ನು ಸ್ಥಳೀಯರು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ.

ಘಟನೆಯಿಂದ ಆಕ್ರೋಶಗೊಂಡ ಜನರು ಕಾರಿನ ಗಾಜುಗಳನ್ನು ಪುಡಿ-ಪುಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಸ್ಪತ್ರೆ ಮುಂಭಾಗ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಚಾಲಕನನ್ನು ಖಾಸಗಿ ಆಸ್ಪತ್ರೆಗೆ ರವಾನಿಸಲು ಸಜ್ಜಾಗಿದ್ದರೆಂಬ ಆರೋಪಕ್ಕೂ ಆಕ್ರೋಶ ವ್ಯಕ್ತವಾಯಿತು. “ಚಾಲಕ ಚೆನ್ನಾಗಿದ್ದಾನೆ, ಮೊದಲು ಗಾಯಾಳುಗಳ ಕಡೆ ಗಮನ ಹರಿಸಿ” ಎಂದು ಸಾರ್ವಜನಿಕರು ಕಿಡಿಕಾರಿದರು.

ಸ್ಥಳದಲ್ಲಿ 50ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ಹರಸಾಹಸ ಪಟ್ಟರು. ಆದರೂ ಆಕ್ರೋಶಿತರನ್ನು ಸಮಾಧಾನಪಡಿಸಲು ವಿಫಲರಾದ ಹಿನ್ನೆಲೆಯಲ್ಲಿ ಎಎಸ್ಪಿ ಜಯಕುಮಾರ್ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಮೃತ ಬಾಲಕಿಯ ಪೋಷಕರು ಹಾಗೂ ಸಾರ್ವಜನಿಕರು ಆಕ್ರಂದನ ವ್ಯಕ್ತಪಡಿಸಿದರು.

ಆಕ್ರೋಶಿತರನ್ನು ಸಮಾಧಾನಪಡಿಸಲು ಎಎಸ್ಪಿ ಕೈಮುಗಿದು ಮನವಿ ಮಾಡಿಕೊಂಡು ಸ್ಥಳದಿಂದ ತೆರಳುವಂತೆ ಹೇಳಿದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

Accident on Ambedkar Jayanti procession- girl dies

Share

Leave a comment

Leave a Reply

Your email address will not be published. Required fields are marked *

Don't Miss

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್ ಯೋಜನೆಯಡಿ ಬೋರ್‌ವೆಲ್ ಕಾಮಗಾರಿ ನಿರ್ವಹಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯೊಂದಿಗೆ ಮಾಡಿಕೊಂಡಿದ್ದ...

ಅಕ್ರಮ ಮದ್ಯ ಮಾರಾಟ-ಐವರು ಆರೋಪಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಮದ್ಯ ಸೇವನೆಗೆ ಅವಕಾಶ ಮಾಡಿಕೊಡುತ್ತಿದ್ದ ಅಡ್ಡೆಗಳ ಮೇಲೆ ಪೊಲೀಸರು ಬಿರುಗಾಳಿ ದಾಳಿ ನಡೆಸಿದ್ದು, ಮಹಿಳೆ ಸೇರಿ ಐವರು ಆರೋಪಿಗಳನ್ನು...

Related Articles

ವಿಶ್ವವಿದ್ಯಾಲಯ ವಿದ್ಯಾ ಶಾಲೆಯ ನವೀಕೃತ ಕಟ್ಟಡ ಲೋಕಾರ್ಪಣೆ

ಚಿಕ್ಕಮಗಳೂರು: 105 ವರ್ಷ ಹಳೆಯ ವಿಶ್ವವಿದ್ಯಾಲಯ ವಿದ್ಯಾ ಶಾಲೆಯ ನವೀಕೃತ ಕಟ್ಟಡ ಹಾಗೂ ಆಟದ ಮೈದಾನ...

ಎರಡು ದೇವಸ್ಥಾನಗಳ ಬೀಗ ಒಡೆದು ಚಿನ್ನಾಭರಣ ಕಳವು

ಚಿಕ್ಕಮಗಳೂರು: ಒಂದೇ ದಿನ ಎರಡು ದೇವಸ್ಥಾನಗಳ ಬೀಗ ಒಡೆದು ನಗದು ಹಾಗೂ ಚಿನ್ನಾಭರಣಗಳನ್ನು ದೋಚಿರುವ ಘಟನೆ...

ನಗರದಲ್ಲಿ ಗ್ಯಾಂಗ್ ವಾರ್ ಸ್ವಯಂಪ್ರೇರಿತ ಪ್ರಕರಣ ದಾಖಲು

ಚಿಕ್ಕಮಗಳೂರು: ನಗರದ ಐ.ಜಿ ರಸ್ತೆಯಲ್ಲಿ ಸಾರ್ವಜನಿಕರ ನೆಮ್ಮದಿಗೆ ಭಂಗ ತರುವಂತೆ ಯುವಕರ ಗುಂಪೊಂದು ಭೀಕರವಾಗಿ ಬಡಿದಾಡಿಕೊಂಡಿರುವ...

ಸತ್ತಿಹಳ್ಳಿ ಗ್ರಾಮದಲ್ಲಿ ಪತಿಯಿಂದ ಪತ್ನಿಯ ಮೇಲೆ ಹಲ್ಲೆ

ಚಿಕ್ಕಮಗಳೂರು: ಕುಡಿತದ ದಾಸನಾಗಿ, ಹೆಂಡತಿಯ ನಡತೆಯ ಮೇಲೆ ಇಲ್ಲಸಲ್ಲದ ಅನುಮಾನ ಪಟ್ಟು ಸೌದೆ ಬಡಿಗೆ ಹಾಗೂ...