Home namma chikmagalur chikamagalur ಸುಲಿಗೆ ಪ್ರಕರಣದ ಆರೋಪಿಗಳ ಬಂಧನ – ಆಟೋ ವಶ
chikamagalurHomeLatest Newsnamma chikmagalur

ಸುಲಿಗೆ ಪ್ರಕರಣದ ಆರೋಪಿಗಳ ಬಂಧನ – ಆಟೋ ವಶ

Share
Share

ಚಿಕ್ಕಮಗಳೂರು: ಸುಲಿಗೆ ಪ್ರಕರಣವೊಂದರಲ್ಲಿ ಆರೋಪಿಗಳನ್ನು ಬಂಧಿಸಿ ಕದ್ದ ಹಣವನ್ನು ಹಾಗೂ ಕೃತಕ್ಕೆ ಬಳಸಿದ ಆಟೋ ಮತ್ತು ಬಿಯರ್ ಬಾಟಲಿಯನ್ನು ವಶಪಡಿಸಿಕೊಳ್ಳುವ ಮೂಲಕ ಪೊಲೀಸರು ಸೂಕ್ತ ಕಾನೂನು ಕ್ರಮ ಜರುಗಿಸಿದ್ದಾರೆ.

ನಗರದ ಬಸವನಹಳ್ಳಿ ಠಾಣಾ ವ್ಯಾಪ್ತಿಯ ಮಲ್ಲಂದೂರು ರಸ್ತೆಯಲ್ಲಿ ಕಲ್ಯಾಣನಗರ ವಾಸಿ ಶಾಲಾ ಬಸ್ ಚಾಲಕ ರವಿಕುಮಾರ್ ಎಂಬುವರನ್ನು ೩ ಜನ ಅಪರಿಚಿತರು ಹೆದರಿಸಿ ಆಟೋದಲ್ಲಿ ಬಲವಂತವಾಗಿ ಕರೆದುಕೊಂಡು ಹೋಗಿ ಆತನಿಗೆ ಬಿಯರ್ ಬಾಟಲಿಯಿಂದ ತಲೆಗೆ ಹೊಡೆದಿದ್ದಾರೆ. ಪ್ರಜ್ಞೆ ತಪ್ಪಿ ಬಿದ್ದಾಗ ಅವರ ಜೇಬಿನಲ್ಲಿದ್ದ ೮೫೦೦ ರೂ ಹಣವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಹಲ್ಲೆಗೆ ಒಳಗಾದ ವ್ಯಕ್ತಿ ಬಸವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದರಿ ಪ್ರಕರಣವನ್ನು ಶೀಘ್ರವಾಗಿ ಬೇಧಿಸಿ ಆರೋಪಿಗಳನ್ನು ಬಂಧಿಸಿ ಕದ್ದಮಾಲನ್ನು ವಶಕ್ಕೆ ಪಡೆಯುವ ನಿಟ್ಟಿನಲ್ಲಿ ಜಿಲ್ಲಾಪೊಲೀಸ್ ಮುಖ್ಯಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಸಿ.ಟಿ. ಜಯಕುಮಾರ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಎ.ಆರ್.ನಾಗರಾಜು, ವೃತ್ತನಿರೀಕ್ಷಕ ವಿಜಯ್ ಕುಮಾರ್ ಬಿರಾದಾರ್ ನೇತೃತ್ವದಲ್ಲಿ ಬಸವನಹಳ್ಳಿ ಠಾಣಾಧಿಕಾರಿ ಕೀರ್ತಿಕುಮಾರ್ ಹಾಗೂ ಅಜರುದ್ದೀನ್ ಮತ್ತು ಸಿಬ್ಬಂದಿಗಳಾದ ರವೀಂದ್ರ, ರಾಜ್‌ಕುಮಾರ್, ಲಿಂಗಮೂರ್ತಿ, ಮಧುಸೂಧನ್, ಜಯರಾಮ ಹಾಗೂ ಚಾಲಕರಾದ ಚಂದ್ರಶೇಖರ್ ರವರನ್ನು ಒಳಗೊಂಡ ಒಂದು ವಿಶೇಷ ತಂಡವನ್ನು ರಚಿಸಲಾಯಿತು.

ಈ ತಂಡವು ವಿವಿಧ ಆಯಾಮಗಳಲ್ಲಿ ವೈಜ್ಞಾನಿಕವಾಗಿ ತನಿಖೆ ನಡೆಸಿ ಪ್ರಕರಣದ ಆರೋಪಿ ಮತ್ತು ಮಾಲು ಪತ್ತೆಯ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ ಪ್ರಕರಣದಲ್ಲಿನ ಆರೋಪಿಗಳಾದ ತಮಿಳುಕಾಲೋನಿಯ ಆಟೋಚಾಲಕ ಶಬೀರ್ ಅಹಮದ್, ಅರವಿಂದ ನಗರದ ಹೇಮಂತ್ ಕುಮಾರ್, ಅರಸೀಕೆರೆ ಪಟ್ಟಣದ ಅಹಮದ್ ಖಾನ್ ಇವರುಗಳನ್ನು ವಶಕ್ಕೆ ಪಡೆದು ಕಿತ್ತುಕೊಂಡು ಹೋಗಿದ್ದ ಹಣ, ಕೃತ್ಯಕ್ಕೆ ಬಳಸಿದ ಆಟೋ ಹಾಗೂ ಹಲ್ಲೆ ಮಾಡಿದ ಬಿಯರ್ ಬಾಟಲಿಯನ್ನು ವಶಪಡಿಸಿಕೊಂಡು ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿರುತ್ತಾರೆ.

ಪ್ರಕರಣವನ್ನು ಭೇದಿಸಿ ಆರೋಪಿಗಳನ್ನು ಬಂಧಿಸಿ ಕದ್ದ ಹಣವನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಲ್ಲಿ ಶ್ರಮಿಸಿದ ಅಪರಾಧ ತನಿಖಾ ತಂಡದಲ್ಲಿದ್ದ ಅಧಿಕಾರಿ ಸಿಬ್ಬಂದಿಯವರ ಕರ್ತವ್ಯವನ್ನು ಪೊಲೀಸ್ ಮುಖ್ಯಾಧಿಕಾರಿ ದಯಾಮ ಶ್ಲಾಘಿಸಿ ಬಹುಮಾನ ಘೋಷಿಸಿದ್ದಾರೆ.

Accused in extortion case arrested – auto seized

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...