Home Latest News ಮರ್ಕಲ್ ತೋಟದಲ್ಲಿ ಜಾನುವಾರು ಹತ್ಯೆ ಆರೋಪಿಗಳ ಬಂಧನ
Latest NewschikamagalurHomenamma chikmagalur

ಮರ್ಕಲ್ ತೋಟದಲ್ಲಿ ಜಾನುವಾರು ಹತ್ಯೆ ಆರೋಪಿಗಳ ಬಂಧನ

Share
Share

ಮೂಡಿಗೆರೆ: ತಾಲ್ಲೂಕಿನ ಬಾಳೂರು ಹೋಬಳಿಯ ಮರ್ಕಲ್ ಎಸ್ಟೇಟ್ ಕಾಫಿ ತೋಟದೊಳಗೆ ಗುರುವಾರ ಮಧ್ಯಾಹ್ನ ಜಾನುವಾರು ಹತ್ಯೆಯಾಗಿ ಮಾಂಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಜುಲೈ ೯ರಂದು ಮಧ್ಯಾಹ್ನ ೩:೩೦ ರಿಂದ ಸಂಜೆ ೭:೩೦ ರ ಒಳಗೆ ಯಾರೋ ಅಪರಿಚಿತ ವ್ಯಕ್ತಿಗಳು ತೋಟದೊಳಗೆ ಒಂದು ಜಾನುವಾರುವನ್ನು (ಹಸು) ಹತ್ಯೆ ಮಾಡಿ ಮಾಂಸ ಮಾಡಿರುವುದು ಕಂಡು ಬಂದಿದೆ. ಜಾನುವಾರುವಿನ ತಲೆ, ಕಾಲುಗಳು, ಚರ್ಮ, ಮಾಂಸ, ಲಿವರ್, ಇತರೆ ಅಂಗಾಂಗಗಳು ಸ್ಥಳದಲ್ಲೇ ಪತ್ತೆಯಾಗಿವೆ.

ಸ್ಥಳ ಪರಿಶೀಲನೆಗೆ ಆಗಮಿಸಿದ ಬಾಳೂರು ಪೊಲೀಸ್ ಠಾಣೆಯ ಪಿಎಸ್‌ಐ ದಿಲೀಪ್ ಕುಮಾರ್ ಅವರ ಮಾಹಿತಿ ಪ್ರಕಾರ, ತೋಟದ ರೈಟರ್ ಅಭಿಲಾಷ್ ಅವರ ಹೇಳಿಕೆಯಂತೆ, ಅಸ್ಸಾಂ ಮೂಲದ ಸುಮಾರು ೧೫ ಮಂದಿ ಕೂಲಿ ಕಾರ್ಮಿಕರು ತಮ್ಮ ಕುಟುಂಬಗಳೊಂದಿಗೆ ತೋಟದ ಲೈನ್‌ನಲ್ಲಿ ವಾಸವಿದ್ದು, ಘಟನೆಯ ಸಮಯದಲ್ಲಿ ಕೆಲವರು ತೋಟದೊಳಗೆ ಓಡಾಡುತ್ತಿರುವುದು ಕಂಡುಬಂದಿದೆ. ಮಾಂಸ ತಯಾರಿಸಲು ಮರದ ತುಂಡು ಹಾಗೂ ಅಂಗಾಂಗಗಳನ್ನು ಹೂಳಲು ಬಳಸಿದ ಗುದ್ದಲಿ ಸ್ಥಳದಲ್ಲಿ ಪತ್ತೆಯಾಗಿದೆ.

ಅಜೀರ್ ಅಕ್ಮಲ್, ಅಕ್ಕಾಸ್ ಅಲಿ, ನಜ್ರುಲ್ ಹಕ್, ಇಜಾಬುಲ್ ಹಕ್, ಮೆಹರ್ ಅಲಿ, ಮಂಜುಲ್ ಹಕ್ ಬಂಧಿತ ಆರೋಪಿಗಳು ಜಾನುವಾರುವಿನ ಅಂಗಾಂಗಗಳನ್ನು ಪಶುವೈದ್ಯರ ಸಹಾಯದಿಂದ ಪರೀಕ್ಷಿಸಿ, ನಂತರ ಉಪ ವಿಭಾಗೀಯ ದಂಡಾಧಿಕಾರಿಗಳ ಅನುಮತಿಯನ್ನು ಪಡೆದು ನಾಶಪಡಿಸಲಾಯಿತು. ಈ ಸಂಬಂಧ ಬಾಳೂರು ಪೊಲೀಸ್ ಠಾಣೆಯಲ್ಲಿ ೩೦೩(೨) ಬಿ.ಎನ್.ಎಸ್ ಮತ್ತು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ೨೦೨೦ರ ಕಲಂ ೧೨(೧) ಅನ್ವಯ ಪ್ರಕರಣ ದಾಖಲಾಗಿದೆ.

Accused of killing cattle in Merkel farm arrested

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...