Home Latest News ಮರ್ಕಲ್ ತೋಟದಲ್ಲಿ ಜಾನುವಾರು ಹತ್ಯೆ ಆರೋಪಿಗಳ ಬಂಧನ
Latest NewschikamagalurHomenamma chikmagalur

ಮರ್ಕಲ್ ತೋಟದಲ್ಲಿ ಜಾನುವಾರು ಹತ್ಯೆ ಆರೋಪಿಗಳ ಬಂಧನ

Share
Share

ಮೂಡಿಗೆರೆ: ತಾಲ್ಲೂಕಿನ ಬಾಳೂರು ಹೋಬಳಿಯ ಮರ್ಕಲ್ ಎಸ್ಟೇಟ್ ಕಾಫಿ ತೋಟದೊಳಗೆ ಗುರುವಾರ ಮಧ್ಯಾಹ್ನ ಜಾನುವಾರು ಹತ್ಯೆಯಾಗಿ ಮಾಂಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಜುಲೈ ೯ರಂದು ಮಧ್ಯಾಹ್ನ ೩:೩೦ ರಿಂದ ಸಂಜೆ ೭:೩೦ ರ ಒಳಗೆ ಯಾರೋ ಅಪರಿಚಿತ ವ್ಯಕ್ತಿಗಳು ತೋಟದೊಳಗೆ ಒಂದು ಜಾನುವಾರುವನ್ನು (ಹಸು) ಹತ್ಯೆ ಮಾಡಿ ಮಾಂಸ ಮಾಡಿರುವುದು ಕಂಡು ಬಂದಿದೆ. ಜಾನುವಾರುವಿನ ತಲೆ, ಕಾಲುಗಳು, ಚರ್ಮ, ಮಾಂಸ, ಲಿವರ್, ಇತರೆ ಅಂಗಾಂಗಗಳು ಸ್ಥಳದಲ್ಲೇ ಪತ್ತೆಯಾಗಿವೆ.

ಸ್ಥಳ ಪರಿಶೀಲನೆಗೆ ಆಗಮಿಸಿದ ಬಾಳೂರು ಪೊಲೀಸ್ ಠಾಣೆಯ ಪಿಎಸ್‌ಐ ದಿಲೀಪ್ ಕುಮಾರ್ ಅವರ ಮಾಹಿತಿ ಪ್ರಕಾರ, ತೋಟದ ರೈಟರ್ ಅಭಿಲಾಷ್ ಅವರ ಹೇಳಿಕೆಯಂತೆ, ಅಸ್ಸಾಂ ಮೂಲದ ಸುಮಾರು ೧೫ ಮಂದಿ ಕೂಲಿ ಕಾರ್ಮಿಕರು ತಮ್ಮ ಕುಟುಂಬಗಳೊಂದಿಗೆ ತೋಟದ ಲೈನ್‌ನಲ್ಲಿ ವಾಸವಿದ್ದು, ಘಟನೆಯ ಸಮಯದಲ್ಲಿ ಕೆಲವರು ತೋಟದೊಳಗೆ ಓಡಾಡುತ್ತಿರುವುದು ಕಂಡುಬಂದಿದೆ. ಮಾಂಸ ತಯಾರಿಸಲು ಮರದ ತುಂಡು ಹಾಗೂ ಅಂಗಾಂಗಗಳನ್ನು ಹೂಳಲು ಬಳಸಿದ ಗುದ್ದಲಿ ಸ್ಥಳದಲ್ಲಿ ಪತ್ತೆಯಾಗಿದೆ.

ಅಜೀರ್ ಅಕ್ಮಲ್, ಅಕ್ಕಾಸ್ ಅಲಿ, ನಜ್ರುಲ್ ಹಕ್, ಇಜಾಬುಲ್ ಹಕ್, ಮೆಹರ್ ಅಲಿ, ಮಂಜುಲ್ ಹಕ್ ಬಂಧಿತ ಆರೋಪಿಗಳು ಜಾನುವಾರುವಿನ ಅಂಗಾಂಗಗಳನ್ನು ಪಶುವೈದ್ಯರ ಸಹಾಯದಿಂದ ಪರೀಕ್ಷಿಸಿ, ನಂತರ ಉಪ ವಿಭಾಗೀಯ ದಂಡಾಧಿಕಾರಿಗಳ ಅನುಮತಿಯನ್ನು ಪಡೆದು ನಾಶಪಡಿಸಲಾಯಿತು. ಈ ಸಂಬಂಧ ಬಾಳೂರು ಪೊಲೀಸ್ ಠಾಣೆಯಲ್ಲಿ ೩೦೩(೨) ಬಿ.ಎನ್.ಎಸ್ ಮತ್ತು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ೨೦೨೦ರ ಕಲಂ ೧೨(೧) ಅನ್ವಯ ಪ್ರಕರಣ ದಾಖಲಾಗಿದೆ.

Accused of killing cattle in Merkel farm arrested

Share

Leave a comment

Leave a Reply

Your email address will not be published. Required fields are marked *

Don't Miss

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್ ಯೋಜನೆಯಡಿ ಬೋರ್‌ವೆಲ್ ಕಾಮಗಾರಿ ನಿರ್ವಹಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯೊಂದಿಗೆ ಮಾಡಿಕೊಂಡಿದ್ದ...

ಅಕ್ರಮ ಮದ್ಯ ಮಾರಾಟ-ಐವರು ಆರೋಪಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಮದ್ಯ ಸೇವನೆಗೆ ಅವಕಾಶ ಮಾಡಿಕೊಡುತ್ತಿದ್ದ ಅಡ್ಡೆಗಳ ಮೇಲೆ ಪೊಲೀಸರು ಬಿರುಗಾಳಿ ದಾಳಿ ನಡೆಸಿದ್ದು, ಮಹಿಳೆ ಸೇರಿ ಐವರು ಆರೋಪಿಗಳನ್ನು...

Related Articles

ವಿಶ್ವವಿದ್ಯಾಲಯ ವಿದ್ಯಾ ಶಾಲೆಯ ನವೀಕೃತ ಕಟ್ಟಡ ಲೋಕಾರ್ಪಣೆ

ಚಿಕ್ಕಮಗಳೂರು: 105 ವರ್ಷ ಹಳೆಯ ವಿಶ್ವವಿದ್ಯಾಲಯ ವಿದ್ಯಾ ಶಾಲೆಯ ನವೀಕೃತ ಕಟ್ಟಡ ಹಾಗೂ ಆಟದ ಮೈದಾನ...

ಎರಡು ದೇವಸ್ಥಾನಗಳ ಬೀಗ ಒಡೆದು ಚಿನ್ನಾಭರಣ ಕಳವು

ಚಿಕ್ಕಮಗಳೂರು: ಒಂದೇ ದಿನ ಎರಡು ದೇವಸ್ಥಾನಗಳ ಬೀಗ ಒಡೆದು ನಗದು ಹಾಗೂ ಚಿನ್ನಾಭರಣಗಳನ್ನು ದೋಚಿರುವ ಘಟನೆ...

ನಗರದಲ್ಲಿ ಗ್ಯಾಂಗ್ ವಾರ್ ಸ್ವಯಂಪ್ರೇರಿತ ಪ್ರಕರಣ ದಾಖಲು

ಚಿಕ್ಕಮಗಳೂರು: ನಗರದ ಐ.ಜಿ ರಸ್ತೆಯಲ್ಲಿ ಸಾರ್ವಜನಿಕರ ನೆಮ್ಮದಿಗೆ ಭಂಗ ತರುವಂತೆ ಯುವಕರ ಗುಂಪೊಂದು ಭೀಕರವಾಗಿ ಬಡಿದಾಡಿಕೊಂಡಿರುವ...

ಸತ್ತಿಹಳ್ಳಿ ಗ್ರಾಮದಲ್ಲಿ ಪತಿಯಿಂದ ಪತ್ನಿಯ ಮೇಲೆ ಹಲ್ಲೆ

ಚಿಕ್ಕಮಗಳೂರು: ಕುಡಿತದ ದಾಸನಾಗಿ, ಹೆಂಡತಿಯ ನಡತೆಯ ಮೇಲೆ ಇಲ್ಲಸಲ್ಲದ ಅನುಮಾನ ಪಟ್ಟು ಸೌದೆ ಬಡಿಗೆ ಹಾಗೂ...