Home Latest News ಮರ್ಕಲ್ ತೋಟದಲ್ಲಿ ಜಾನುವಾರು ಹತ್ಯೆ ಆರೋಪಿಗಳ ಬಂಧನ
Latest NewschikamagalurHomenamma chikmagalur

ಮರ್ಕಲ್ ತೋಟದಲ್ಲಿ ಜಾನುವಾರು ಹತ್ಯೆ ಆರೋಪಿಗಳ ಬಂಧನ

Share
Share

ಮೂಡಿಗೆರೆ: ತಾಲ್ಲೂಕಿನ ಬಾಳೂರು ಹೋಬಳಿಯ ಮರ್ಕಲ್ ಎಸ್ಟೇಟ್ ಕಾಫಿ ತೋಟದೊಳಗೆ ಗುರುವಾರ ಮಧ್ಯಾಹ್ನ ಜಾನುವಾರು ಹತ್ಯೆಯಾಗಿ ಮಾಂಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಜುಲೈ ೯ರಂದು ಮಧ್ಯಾಹ್ನ ೩:೩೦ ರಿಂದ ಸಂಜೆ ೭:೩೦ ರ ಒಳಗೆ ಯಾರೋ ಅಪರಿಚಿತ ವ್ಯಕ್ತಿಗಳು ತೋಟದೊಳಗೆ ಒಂದು ಜಾನುವಾರುವನ್ನು (ಹಸು) ಹತ್ಯೆ ಮಾಡಿ ಮಾಂಸ ಮಾಡಿರುವುದು ಕಂಡು ಬಂದಿದೆ. ಜಾನುವಾರುವಿನ ತಲೆ, ಕಾಲುಗಳು, ಚರ್ಮ, ಮಾಂಸ, ಲಿವರ್, ಇತರೆ ಅಂಗಾಂಗಗಳು ಸ್ಥಳದಲ್ಲೇ ಪತ್ತೆಯಾಗಿವೆ.

ಸ್ಥಳ ಪರಿಶೀಲನೆಗೆ ಆಗಮಿಸಿದ ಬಾಳೂರು ಪೊಲೀಸ್ ಠಾಣೆಯ ಪಿಎಸ್‌ಐ ದಿಲೀಪ್ ಕುಮಾರ್ ಅವರ ಮಾಹಿತಿ ಪ್ರಕಾರ, ತೋಟದ ರೈಟರ್ ಅಭಿಲಾಷ್ ಅವರ ಹೇಳಿಕೆಯಂತೆ, ಅಸ್ಸಾಂ ಮೂಲದ ಸುಮಾರು ೧೫ ಮಂದಿ ಕೂಲಿ ಕಾರ್ಮಿಕರು ತಮ್ಮ ಕುಟುಂಬಗಳೊಂದಿಗೆ ತೋಟದ ಲೈನ್‌ನಲ್ಲಿ ವಾಸವಿದ್ದು, ಘಟನೆಯ ಸಮಯದಲ್ಲಿ ಕೆಲವರು ತೋಟದೊಳಗೆ ಓಡಾಡುತ್ತಿರುವುದು ಕಂಡುಬಂದಿದೆ. ಮಾಂಸ ತಯಾರಿಸಲು ಮರದ ತುಂಡು ಹಾಗೂ ಅಂಗಾಂಗಗಳನ್ನು ಹೂಳಲು ಬಳಸಿದ ಗುದ್ದಲಿ ಸ್ಥಳದಲ್ಲಿ ಪತ್ತೆಯಾಗಿದೆ.

ಅಜೀರ್ ಅಕ್ಮಲ್, ಅಕ್ಕಾಸ್ ಅಲಿ, ನಜ್ರುಲ್ ಹಕ್, ಇಜಾಬುಲ್ ಹಕ್, ಮೆಹರ್ ಅಲಿ, ಮಂಜುಲ್ ಹಕ್ ಬಂಧಿತ ಆರೋಪಿಗಳು ಜಾನುವಾರುವಿನ ಅಂಗಾಂಗಗಳನ್ನು ಪಶುವೈದ್ಯರ ಸಹಾಯದಿಂದ ಪರೀಕ್ಷಿಸಿ, ನಂತರ ಉಪ ವಿಭಾಗೀಯ ದಂಡಾಧಿಕಾರಿಗಳ ಅನುಮತಿಯನ್ನು ಪಡೆದು ನಾಶಪಡಿಸಲಾಯಿತು. ಈ ಸಂಬಂಧ ಬಾಳೂರು ಪೊಲೀಸ್ ಠಾಣೆಯಲ್ಲಿ ೩೦೩(೨) ಬಿ.ಎನ್.ಎಸ್ ಮತ್ತು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ೨೦೨೦ರ ಕಲಂ ೧೨(೧) ಅನ್ವಯ ಪ್ರಕರಣ ದಾಖಲಾಗಿದೆ.

Accused of killing cattle in Merkel farm arrested

Share

Leave a comment

Leave a Reply

Your email address will not be published. Required fields are marked *

Don't Miss

ದೇಶದ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಇಲ್ಲ

ಬೀರೂರು: ‘ದೇಶದ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಇಲ್ಲದೆ ಮುಂದಿನ ಪೀಳಿಗೆಗೆ ಕೊಡುಗೆಯಾಗುವಂಥ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ’ ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು. ಪಟ್ಟಣದ ಮಾರ್ಕೆಟ್ ರಸ್ತೆಯಲ್ಲಿ ಭಾನುವಾರ...

ಅಜ್ಜಂಪುರದ ರೈಲ್ವೆ ಲೆವೆಲ್ ಕ್ರಾಸಿಂಗ್ ರಸ್ತೆ ಮೇಲ್ಸೇತುವೆ ಕಾಮಗಾರಿಗೆ ಚಾಲನೆ

ಚಿಕ್ಕಮಗಳೂರು:  ದೇಶದ ಅಭಿವೃದ್ಧಿಯ ಸಂಕೇತವೇ ರೈಲ್ವೆಯಾಗಿದ್ದು, ರೈಲ್ವೆ ಇಲಾಖೆಯನ್ನು ಎಷ್ಟು ಮಟ್ಟಿಗೆ ಅಭಿವೃದ್ಧಿಪಡಿಸುತ್ತೇವೆಯೋ ಅಷ್ಟು ದೇಶಕ್ಕೆ ಒಳ್ಳೆಯದಾಗುತ್ತದೆ ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಸಂದೇಶವಾಗಿದೆ ಎಂದು ಕೇಂದ್ರ ರೈಲ್ವೆ ರಾಜ್ಯ...

Related Articles

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...

ಧಾರಾಕಾರ ಮಳೆಗೆ ಕಾಫಿಸಿಟಿ ಫುಲ್ ಕೂಲ್

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ವರುಣನ ಅಬ್ಬರ ಜೋರಾಗಿದ್ದು ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು ಕಾಫಿ ಸಿಟಿ ಈಗ...

ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಮಲೆನಾಡಿಗರು ಆಕ್ರೋಶ

ಕಳಸ: ಸರ್ಕಾರದ ಬೇಜವಾಬ್ದಾರಿತನ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದ ವಿರುದ್ಧ ಮಲೆನಾಡಿಗರು ಆಕ್ರೋಶದ ತೊಡೆ ತಟ್ಟಿದ್ದಾರೆ. ಸ್ವಾತಂತ್ರ್ಯ...

ಭಾರಿ ಮಳೆಯ ಆರ್ಭಟಕ್ಕೆ ಮೆಸ್ಕಾಂಗೆ 3.21 ಕೋಟಿ ಹಾನಿ

ಚಿಕ್ಕಮಗಳೂರು: ಮುಂಗಾರುಪೂರ್ವ ಮಳೆ ಮತ್ತು ಭಾರಿ ಗಾಳಿಯ ಆರ್ಭಟಕ್ಕೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮೆಸ್ಕಾಂ ವ್ಯಾಪ್ತಿಯಲ್ಲಿ ಭಾರಿ...