Home namma chikmagalur ಸರ್ಕಾರಿ ಸ್ಮಶಾನ ಒತ್ತುವರಿ ತೆರವುಗೊಳಿಸಲು ಕ್ರಮ
namma chikmagalurchikamagalurHomeLatest News

ಸರ್ಕಾರಿ ಸ್ಮಶಾನ ಒತ್ತುವರಿ ತೆರವುಗೊಳಿಸಲು ಕ್ರಮ

Share
Share

ತರೀಕೆರೆ: ಹಲವು ಗ್ರಾಮಗಳಲ್ಲಿ ಸರ್ಕಾರಿ ಸ್ಮಶಾನ ಒತ್ತುವರಿಯಾಗಿದೆ ಮತ್ತು ನಕಾಶೆ ಕಂಡ ದಾರಿ ಒತ್ತುವರಿಯಾಗಿರುವ ಬಗ್ಗೆ ಹಲವು ದೂರುಗಳಿವೆ. ದೂರು ಅರ್ಜಿಗಳು ಬಂದಿರುವ ಸ್ಮಶಾನ ಮತ್ತು ದಾರಿಗಳನ್ನು ಸರ್ವೇ ಮಾಡಿಸಿ ಒತ್ತುವರಿಯಾಗಿದ್ದರೆ ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಉಪವಿಭಾಗಾಧಿಕಾರಿ ಕೆ.ಜೆ. ಕಾಂತರಾಜ್ ಹೇಳಿದರು.

ಅವರು ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಉಪವಿಭಾಗೀಯ ಮಟ್ಟದ ಪರಿಶಿ? ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ದಲಿತರ ಸಮಸ್ಯೆಗಳನ್ನು ಕಾನೂನಾತ್ಮಕವಾಗಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಅರಣ್ಯ ಮತ್ತು ಕಂದಾಯ ಇಲಾಖೆಗಳ ಮಧ್ಯೆ ಇರುವ ತಕರಾರುಗಳನ್ನು ಸ್ಥಳ ಪರಿಶೀಲನೆ ನಡೆಸಿ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಸಮಿತಿ ಸದಸ್ಯ ನಾಗರಾಜ್ ಮಾತನಾಡಿ, ಅಮೃತಾಪುರ ಹೋಬಳಿಯ ನಾಗರಾಜಪುರ ಗ್ರಾಮದ ಸ.ನಂ. ೩೪ ರಲ್ಲಿ ಸುಮಾರು ೧೨ ವ?ಗಳಿಂದ ಅನುಭವದಲ್ಲಿದ್ದು, ತೆಂಗು ಮತ್ತು ಮಾವು ಬೆಳೆದಿದ್ದು, ಕಳೆದ ೨ ವ?ಗಳಿಂದ ಸದರಿ ಜಾಗದಲ್ಲಿ ಉಳುಮೆ ಮಾಡಲು ಅರಣ್ಯ ಇಲಾಖೆಯವರು ತೊಂದರೆ ಕೊಡುತ್ತಿದ್ದಾರೆ ಎಂದು ದೂರಿದರು.

ದಲಿತ ಮುಖಂಡ ಹೆಚ್.ವಿ. ಬಾಲರಾಜ್ ಹಾದೀಕೆರೆ ಗ್ರಾಮದ ಸರ್ವೆ ನಂಬರ್ ೧೬೭ ಲ್ಲಿ ೫-೩೮ ಎಕರೆ ಸ್ಮಶಾನ ಜಾಗವನ್ನು ಅಳತೆ ಮಾಡಿಸಿ ತಂತಿ ಕಂಬ ಅಳವಡಿಸಬೇಕು. ಮೂಲ ಸೌಲಭ್ಯ ಒದಗಿಸಲು ಕ್ರಮಕೈಗೊಳ್ಳಬೇಕು ಎಂದು ಸಭೆಯ ಗಮನಕ್ಕೆ ತಂದರು.
ಉಪವಿಭಾಗೀಯ ಮಟ್ಟದ ಪರಿಶಿ? ಜಾತಿ ಮತ್ತು ಪರಿಶಿ? ಪಂಗಡ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯ ಎನ್.ಆರ್. ಪುರ ರಾಮು ಮಾತನಾಡಿ, ಎನ್.ಆರ್. ಪುರ ತಾಲೂಕು ಗುಬ್ಬಿಗ ಗ್ರಾ.ಪಂ. ವ್ಯಾಪ್ತಿಯ ಈಚಿಕೆರೆ ಗ್ರಾಮದ ಸ.ನಂ.೪೧ ರಲ್ಲಿ ಮೂರು ಜನರಿಗೆ ತಲಾ ೩-೨೦ ಎಕರೆ ಜಾಗಕ್ಕೆ ಹಂಗಾಮಿ ಸಾಗುವಳಿ ಚೀಟಿ ನೀಡಲಾಗಿದೆ. ಸರ್ವೇ ಕಾರ್ಯ ನಡೆಸಿ, ಕಲ್ಲು ಬಾಂಧು ಹಾಕಿಸಿಕೊಡಬೇಕು ಎಂದರು.

ಮುಖಂಡ ಎಂ. ಓಂಕಾರಪ್ಪ ಮಾತನಾಡಿ, ನೇರಲಕೆರೆ ಗ್ರಾಮದ ಬಿ.ಆರ್. ಸಮುದಾಯ ಭವನದ ಪಕ್ಕದಲ್ಲಿರುವ ಸರಕಾರಿ ಜಾಗ ಒತ್ತುವರಿಯಾಗಿದ್ದು, ಈ ಜಾಗವನ್ನು ಕಂದಾಯ ಇಲಾಖೆಯ ವಶಕ್ಕೆ ಪಡೆದು ಅರ್ಹರಿಗೆ ನಿವೇಶನ ಹಂಚಿಕೆ ಮಾಡಬೇಕು ಎಂದು ಸಭೆಯ ಗಮನಕ್ಕೆ ತಂದರು.

ದಲಿತ ಮುಖಂಡ ಸುನಿಲ್ ಮಾತನಾಡಿ, ದೋರನಾಳು ಗ್ರಾಮದಲ್ಲಿ ೨೫೦ ಪರಿಶಿ? ಜಾತಿ ಮತ್ತು ಪರಿಶಿ? ಪಂಗಡದ ಕುಟುಂಬಗಳಿವೆ. ಸ.ನಂ. ೨೨೫ ರಲ್ಲಿರುವ ಗೋಮಾಳ ಜಾಗದಲ್ಲಿ ಅರ್ಹ ಕುಟುಂಬಗಳಿಗೆ ನಿವೇಶನ ಮಂಜೂರು ಮಾಡಿಕೊಡಬೇಕು ಎಂದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ವಿಶ್ವಜಿತಮೆಹತಾ, ಕಡೂರು ತಹಸೀಲ್ದಾರ್ ಸಿ.ಎಸ್. ಪೂರ್ಣಿಮಾ, ಅಜ್ಜಂಪುರ ತಹಸೀಲ್ದಾರ್ ವಿನಾಯಕ್ ಸಾಗರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್, ಸಮಿತಿ ಸದಸ್ಯ ನಾಗರಾಜ್, ಮುಖಂಡರಾದ ಎನ್. ವೆಂಕಟೇಶ್, ಜಿ.ಟಿ. ರಮೇಶ್, ವೈ.ಎಸ್.ಮಂಜಪ್ಪ, ಎಸ್.ಕೆ. ಸ್ವಾಮಿ, ರಾಮಚಂದ್ರ, ಸುನೀಲ್, ಶಂಕರ ನಾಯ್ಕ, ಶಿವರಾಜ್, ಇದ್ದರು.

Action taken to clear encroachment of government cemetery

 

Share

Leave a comment

Leave a Reply

Your email address will not be published. Required fields are marked *

Don't Miss

ಧಾರಾಕಾರ ಮಳೆ ನಡುವೆ ಗಿರಿಪ್ರದೇಶಕ್ಕೆ ಪ್ರವಾಸಿಗರ ಧಾಂಗುಡಿ

ಚಿಕ್ಕಮಗಳೂರು: ನಗರ ಸಮೀಪದ ಗಿರಿಪ್ರದೇಶದಲ್ಲಿ ಧಾರಾಕಾರ ಮಳೆಸುರಿಯುತ್ತಿದ್ದು, ಇದರ ನಡುವೆಯೇ ಗಿರಿಭಾಗಕ್ಕೆ ಭಾರೀ ಪ್ರವಾಸಿಗರ ದಂಡು ಭೇಟಿಕೊಟ್ಟಿದೆ. ಕಾರು, ಬೈಕ್, ಟಿಟಿ ಸೇರಿದಂತೆ ೧೮೫೦ ವಾಹನಗಳು ಗಿರಿಭಾಗಕ್ಕೆ ಪ್ರವಾಸಿಗರನ್ನು ಕರೆದೊಯ್ದಿದೆ. ಭಾರೀ...

ಮೈಮೆಲೆ ಬಿಸಿನೀರು ಬಿದ್ದು ಹೆಣ್ಣುಮಗುವಿಗೆ ಗಾಯ

ಚಿಕ್ಕಮಗಳೂರು: ಜಿಲ್ಲಾಮಕ್ಕಳ ಘಟಕದ ದತ್ತು ಸಂಸ್ಥೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಒಂದು ವರ್ಷ ಮೂರು ತಿಂಗಳ ಹೆಣ್ಣುಮಗುವಿಗೆ ಸುಟ್ಟಗಾಯವಾಗಿದ್ದು ಇದರಿಂದ ಹೆಣ್ಣುಮಗು ನರಳುವಂತಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಗರದ ಗಾಂಧಿನಗರದಲ್ಲಿರುವ ದತ್ತು...

Related Articles

ವಸೂಲಿವೀರ ಅದಕ್ಷ ಡಿ.ಡಿ.ಪಿ.ಐ ಪುಟ್ಟರಾಜುಗೆ ಕಡ್ಡಾಯ ರಜೆ

ಚಿಕ್ಕಮಗಳೂರು; ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಾರ್ವಜನಿಕ ಶಿಕ್ಷಣ ಅಧಿಕಾರಿ ಪುಟ್ಟರಾಜು ಕಡ್ಡಾಯ ರಜೆ ಮೇಲೆ...

ನಯನ ಮೋಟಮ್ಮ ಕ್ಷೇತ್ರ ದರ್ಶನಕ್ಕೆ ಬಾರಮ್ಮ

ಮೂಡಿಗೆರೆ: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಎಡಬಿಡದೆ ಮಳೆ ಬರುತ್ತಿದ್ದು ಅನಾಹುತದ ಸಂಭವಿಸಿ ಹಲವರು ಪ್ರಾಣ...

ಜು.28ಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ಅಪ್ರೆಂಟಿಸ್ ಶಿಪ್ ಮೇಳ

ಚಿಕ್ಕಮಗಳೂರು: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ವಸಾಹತು ಹಿಂಭಾಗ, ಜಿಲ್ಲಾ ಪಂಚಾಯಿತಿ ಹತ್ತಿರ, ಜ್ಯೋತಿನಗರ, ಚಿಕ್ಕಮಗಳೂರು)...

ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಮಳೆ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ನದಿಗಳು ಮೈದುಂಬಿ ಹರಿಯುತ್ತಿವೆ. ಕುದುರೆಮುಖ, ಮುಳ್ಳಯ್ಯನ...