Home namma chikmagalur chikamagalur ಮೂಡಿಗೆರೆಯಲ್ಲಿ ಲೋಕಾಯುಕ್ತ ದಾಳಿಗೆ ಎಡಿಎಲ್ಆರ್
chikamagalurHomeLatest Newsnamma chikmagalur

ಮೂಡಿಗೆರೆಯಲ್ಲಿ ಲೋಕಾಯುಕ್ತ ದಾಳಿಗೆ ಎಡಿಎಲ್ಆರ್

Share
Share

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಸರ್ಕಾರಿ ಸಿಬ್ಬಂದಿಯನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

ಮಾಹಿತಿಯ ಪ್ರಕಾರ, ಎಡಿಎಲ್ಆರ್ (ADLR) ಮಂಜೇಶ್ ಹಾಗೂ ಕೇಸ್ ವರ್ಕರ್ ಸುಮಾ ಅವರು ರೈತ ಡಿ.ಡಿ. ಮಂಜುನಾಥ್ ಅವರ ಜಮೀನಿನ ಸ್ಕೆಚ್ ತಯಾರಿಸುವ ಕೆಲಸಕ್ಕಾಗಿ ₹20,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಕುರಿತು ರೈತರು ಲೋಕಾಯುಕ್ತರಿಗೆ ದೂರು ನೀಡಿದ್ದರು.

ದೂರಿನ ಅನ್ವಯ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಇಂದು ₹15,000 ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರನ್ನೂ ಬಲೆಗೆ ಬೀಳಿಸಿ ಬಂಧಿಸಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಸಿಬ್ಬಂದಿ ವರ್ಗದವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಘಟನೆ ಸಂಬಂಧ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

ADLR attacks Lokayukta in Mudigere

Share

Leave a comment

Leave a Reply

Your email address will not be published. Required fields are marked *

Don't Miss

ಕಾಫಿನಾಡಿನಲ್ಲಿ ಮುಂದಿನ ಮೂರು ದಿನಗಳ ಭಾರೀ ಮಳೆ ಸಾಧ್ಯತೆ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮಹತ್ವದ ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ...

ಹಿಂಬದಿಯಿಂದ ಬಂದ ಬೈಕ್ ಡಿಕ್ಕಿಗೆ ಕೂಲಿ ಕಾರ್ಮಿಕ ಸಾವು

ಶೃಂಗೇರಿ: ರಾಷ್ಟ್ರೀಯ ಹೆದ್ದಾರಿ 169ರ ಶೌಕತ್ ಅಲಿ ಗ್ಯಾರೇಜ್ ಮುಂಭಾಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಂಜುನಾಥ್ ಎಂಬ ಕೂಲಿ ಕಾರ್ಮಿಕನಿಗೆ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿದ್ದಾರೆ. ಜೂನ್...

Related Articles

ದೇವಸ್ಥಾನದಲ್ಲೇ ಮಗುವನ್ನು ಮರೆತುಹೋದ ಪೋಷಕರು!

ಕಳಸ: ಪಟ್ಟಣದ ಶ್ರೀಕಲಶೇಶ್ವರ ಸ್ವಾಮಿ ದೇವಸ್ಥಾನಕ್ಕೆ ಬಂದಿದ್ದ ದಂಪತಿ, ದೇವರ ದರ್ಶನ ಪಡೆದು ಹಿಂದಿರುಗುವಾಗ ತಮ್ಮ...

ಗೂಡ್ಸ್‌ ವಾಹನ ಡಿಕ್ಕಿಗೆ ಯುವಕ ಸಾವು

ಕಡೂರು: ಸಖರಾಯಪಟ್ಟಣ ಸಮೀಪದ ಹಿರೇಗೌಜ ಗೇಟ್ ಬಳಿ ನಡೆದ ರಸ್ತೆ ಅಪ ಘಾತದಲ್ಲಿ ಗೂಡ್ಸ್ ವಾಹನ...

ಮಳಲೂರು ಏತ ನೀರಾವರಿ ಯೋಜನೆಗೆ ಮರುಜೀವ

ಚಿಕ್ಕಮಗಳೂರು: ಕಾಫಿನಾಡಿನ ರೈತರ ಬಹುದಿನಗಳ ಕನಸಾಗಿದ್ದ ಮಳಲೂರು ಏತ ನೀರಾವರಿ ಯೋಜನೆಗೆ ಕೊನೆಗೂ ಮರುಜೀವ ಬಂದಿದ್ದು,...

ಶ್ರೀ ವೀರನಾರಾಯಣ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಕಿಡಿಗೇಡಿಗಳು ವಿಕೃತಿ

ಚಿಕ್ಕಮಗಳೂರು: ಹೊಯ್ಸಳರ ಕಾಲದ ಅತ್ಯಂತ ಪ್ರಸಿದ್ಧ ಹಾಗೂ ಅಪೂರ್ವ ಕಲೆ-ವಾಸ್ತುಶಿಲ್ಪದ ಹೆಗ್ಗುರುತಾಗಿರುವ ಚಿಕ್ಕಮಗಳೂರು ತಾಲೂಕಿನ ಬೆಳವಾಡಿ...