Home Latest News ಜನರು ಜೀವನದಲ್ಲಿ ಮೂಢನಂಬಿಕೆಯಿಂದ ದೂರಾಗಲು ಸಲಹೆ
Latest NewschikamagalurHomenamma chikmagalur

ಜನರು ಜೀವನದಲ್ಲಿ ಮೂಢನಂಬಿಕೆಯಿಂದ ದೂರಾಗಲು ಸಲಹೆ

Share
Share

ಚಿಕ್ಕಮಗಳೂರು: ಜನರು ಜೀವನದಲ್ಲಿ ಮೂಢನಂಬಿಕೆಯಿಂದ ದೂರ ಉಳಿದು ವೈಜ್ಞಾನಿಕವಾಗಿ ಚಿಂತನೆ ನಡೆಸಿ ಪೌಷ್ಟಿಕ ಆಹಾರ ಸೇವನೆಯೊಂದಿಗೆ ಉತ್ತಮ ಜೀವನ ಪದ್ದತಿ ಅಳವಡಿಸಿಕೊಳ್ಳಬೇಕೆಂದು ಶಾಸಕಿ ನಯನ ಮೋಟಮ್ಮ ಕಿವಿಮಾತು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಮತ್ತು ಪ್ರಚಾರ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಇಂದು ಅಂಬಳೆಯ ಎ.ಆರ್.ಕೃಷ್ಣಶಾಸ್ತ್ರಿ ಸಭಾ ಭವನದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪೋಷಣ್ ಮಾಸಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಬಾಣಂತಿಯರು ಮತ್ತು ಗರ್ಭಿಣಿಯರಿಗೆ ಮಕ್ಕಳಿಗೆ ನೀಡಬೇಕಾದ ಪೌಷ್ಟಿಕ ಆಹಾರ ಪದ್ಧತಿಯ ಬಗ್ಗೆ ಈಗಾಗಲೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಆರೋಗ್ಯ ಇಲಾಖೆಗಳು ಸಾಕಷ್ಟು ಅರಿವು ಕಾರ್ಯಕ್ರಮವನ್ನು ಮೂಡಿಸುತ್ತಾ ಬಂದಿದ್ದರೂ ಜನರಲ್ಲಿ ಮಾತ್ರ ಬದಲಾವಣೆಗಳಾಗದಿರುವುದು ವಿಷಾದನೀಯ. ಇನ್ನೂ ಕೂಡ ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಲ್ಲಿ ಅಪೌಷ್ಟಿಕತೆಯನ್ನು ಕಾಣುತ್ತಿದ್ದೇವೆ. ಜನರು ಮೂಢನಂಬಿಕೆಯನ್ನು ತೊಡೆದು ವೈಜ್ಞಾನಿಕವಾಗಿ ಚಿಂತನೆ ನಡೆಸಿ ವೈಜ್ಞಾನಿಕ ಪದ್ದತಿಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕಿವಿಮಾತು ಹೇಳಿದರು. ಅಲ್ಲದೇ ಮಹಿಳೆಯರುಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಬಗ್ಗೆ ಮತ್ತು ಮಕ್ಕಳಿಗೆ ಶಿಸ್ತನ್ನು ಮನೆಯಿಂದಲೇ ಕಲುಹಿಸುವಂತೆ ತಿಳಿಸಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ.ರಂಗನಾಥ ಪ್ರಾಸ್ತಾವಿಕ ಮಾತನಾಡಿ ಪೌಷ್ಟಿಕ ಕರ್ನಾಟಕವನ್ನು ನಿರ್ಮಾಣ ಮಾಡುವ ಸಂಕಲ್ಪದೊಂದಿಗೆ ಪೋಷಣ್ ಅಭಿಯಾನ ಯೋಜನೆಯು ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ತಲೆತಲಾಂತರದಿಂದ ಭಾರತವನ್ನು ಕಾಡುತ್ತಿದ್ದ ಅಪೌಷ್ಟಿಕತೆಯನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಪ್ರಮುಖವಾಗಿ ೫ ಗುರಿಗಳನ್ನು ಹೊಂದಿದ್ದು, ಇದರಲ್ಲಿ ಮಕ್ಕಳು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರು, ಕಿಶೋರಿಯರು ಅಪೌಷ್ಟಿಕತೆ ನಿವಾರಣೆ, ರಕ್ತಹೀನತೆ ತಡೆಗಟ್ಟುವಿಕೆ, ಕುಂಠಿತ ಬೆಳವಣಿಗೆ, ಜನನ ತೂಕ ಕಡಿಮೆಯಾಗುವಿಕೆ ಇವುಗಳನ್ನು ಸುಧಾರಿಸುವ ನಿಟ್ಟಿನಲ್ಲಿ ೨೦೧೮ ಮಾರ್ಚ್ ೮ ರಂದು ಈ ಯೋಜನೆಗೆ ಚಾಲನೆ ನೀಡಲಾಗಿತ್ತು ಎಂದರು.

ಪ್ರತಿ ವರ್ಷ ಸೆಪ್ಟಂಬರ್ ಮಾಹೆಯಲ್ಲಿ ಪೋಷಣ್ ಮಾಸಾಚರಣೆ ಎನ್ನುವ ಶೀರ್ಷಿಕೆಯಲ್ಲಿ ವಿವಿಧ ಉದ್ದೇಶಗಳೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಿ ಅಪೌಷ್ಟಿಕತೆ ನಿವಾರಣೆ ಹಾಗೂ ಉತ್ತಮ ಪೋಷಕಾಂಶ ಆಹಾರ ಪ್ರಾತ್ಯಕ್ಷಿಕೆಗಳನ್ನು ಜನರಿಗೆ ತೋರಿಸುವ ಮುಖೇನ ಅರಿವು ಮೂಡಿಸುವ ಕಾರ್ಯಕ್ರಮ ಇದಾಗಿದೆ ಎಂದರು.

೨೦೨೫ನೇ ಸಾಲಿನಲ್ಲಿ ಹಲವು ನಿಯತಾಂಶಗಳನ್ನು ಗುರಿಯಾಗಿಸಿಕೊಂಡು ಜಿಲ್ಲಾದ್ಯಂತ ಎಲ್ಲ್ಲ ಅಂಗನವಾಡಿ ಕೇಂದ್ರಗಳು, ಶಾಲೆ, ಗ್ರಾಮ ಪಂಚಾಯಿತಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅರಿವು ಕಾರ್ಯಕ್ರಮಗಳು ಹಾಗೂ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕೈಗೊಂಡು ಉತ್ತಮ ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡುವ ಉದ್ದೇಶವನ್ನು ಬಿತ್ತರಿಸುತ್ತಿದ್ದು, ಎಲ್ಲರೀ ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡು ಆರೋಗ್ಯವಂತರಾಗಬೇಕು. ಇಲ್ಲಿನ ವಿಚಾರಗಳನ್ನು ತಮ್ಮ ಕುಟುಂಬದವರಿಗೂ ತಿಳಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೆ.ಆರ್.ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿದ್ಯಾಸಾಗರ್ ಉಪನ್ಯಾಸ ನೀಡಿ ಆಧುನಿಕ ಸಮಾಜದಲ್ಲಿ ಜನರು ಹೆಚ್ಚು ತೊಂದರೆಗೆ ಓಳಗಾಗುತ್ತಿರುವುದು ಅವರು ಸೇವಿಸುತ್ತಿರುವ ಆಹಾರ ಕ್ರಮದಿಂದ. ಈ ಹಿನ್ನೆಲೆಯಲ್ಲಿ ಸ್ಥಳೀಯವಾಗಿ, ಸುಲಭವಾಗಿ ಸಿಗುವ ಉತ್ತಮವಾದ ಪೋಷಕಾಂಶಯುಕ್ತ ಆಹಾರ ಕ್ರಮವನ್ನು ರೂಢಿಸಿಕೊಂಡಲ್ಲಿ ಆರೋಗ್ಯವಂತರಾಗಿ ಜೀವನ ನಡೆಸಬಹುದು ಎಂದರು.

ಪ್ರತಿಯೊಬ್ಬರೂ ತಮ್ಮ ದಿನನಿತ್ಯದ ಊಟದಲ್ಲಿ ಮೊಳಕೆ ಕಾಳುಗಳು, ಸೊಪ್ಪು, ಬಣ್ಣ ಬಣ್ಣದ ತರಕಾರಿಗಳು ಹಾಗೂ ಹಣ್ಣುಗಳನ್ನು ಸೇವಿಸಬೇಕು. ದಿನಕ್ಕೆ ೩-೪ ಲೀಟರ್ ನೀರನ್ನು ಕುಡಿಯಬೇಕು. ಪ್ರತಿನಿತ್ಯ ವ್ಯಾಯಮ ಮಾಡಬೇಕು. ೮ ಗಂಟೆಗಳ ಕಾಲ ನಿದ್ರಿಸಬೇಕು ಎಂದು ತಿಳಿಸಿದರು. ಹದಿಹರೆಯದ ಹೆಣ್ಣು ಮಕ್ಕಳು ಉತ್ತುಮವಾದ ಆಹಾರವನ್ನು ಸೇವಿಸಬೇಕು, ಶುಚಿತ್ವದ ಕಡೆಗೆ ಹೆಚ್ಚಿನ ಮಹತ್ವ ನೀಡಬೇಕು. ಋತುಸ್ರಾವದ ಸಮಯದಲ್ಲಿ ಪ್ರತಿನಿತ್ಯ ಸ್ನಾನ ಮಾಡಬೇಕು ಹಾಗೂ ವೈಯಕ್ತಿಕ ಸ್ವಚ್ಛತೆ ಕಡೆ ಗಮನಹರಿಸಬೇಕು ಎಂದು ತಿಳಿಹೇಳಿದರು.

ಮಹಿಳಾ ಮತ್ತು ಮಕ್ಕಳ ಉಪನಿರ್ದೇಶಕ ಶ್ರೀನಿವಾಸ್ ವೈ.ಆಲದಾರ್ತಿ ಮಾತನಾಡಿ, ಎಷ್ಟೇ ಅರಿವು ಮೂಡಿಸಿದರೂ ಜನರಲ್ಲಿ ಅಪೌಷ್ಟಿಕತೆಯನ್ನು ದೂರ ಮಾಡಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಜನರ ಸಹಭಾಗಿತ್ವವೂ ಅತ್ಯಂತ ಮುಖ್ಯವಾದದ್ದು ಎಂದು ತಿಳಿಸಿ ಸಂಪನ್ಮೂಲ ವ್ಯಕ್ತಿಗಳು ನೀಡಿದ ಮಾಹಿತಿಯನ್ನು ಎಲ್ಲರೂ ತಮ್ಮ ಸಮುದಾಯಕ್ಕೆ ತಿಳಿಸುವಂತೆ ಸಲಹೆ ನೀಡಿದರು.

ಅಂಬಳೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷಮ್ಮ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರುಗಳಾದ ಮಲ್ಲಮ್ಮ, ವಿಜಯಮ್ಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಡಿ.ಸಂತೋಷ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜೆ.ರೂಪಾಕುಮಾರಿ, ಅಂಬಳೆ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ,ಎನ್.ಕೆ.ಶೋಭಾ, ಹಿರಿಯ ಮೇಲ್ವಿಚಾರಕಿ ಸಿ.ಎಂ.ಲೀಲಾವತಿ, ಪೋಷಣ್ ಅಭಿಯಾನದ ಯೋಜನಾ ಸಂಯೋಜಕಿ ಕೆ.ದಿವ್ಯ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.

Advice for people to get rid of superstitions in life

Share

Leave a comment

Leave a Reply

Your email address will not be published. Required fields are marked *

Don't Miss

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿವಿಧ ಏಜೆನ್ಸಿಗಳ ಆಮೆಗತಿಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಗಿ...

ವಸತಿ ಶಾಲೆಯಿಂದ ಓಡಿಹೋದ ಮಕ್ಕಳು…?

ಚಿಕ್ಕಮಗಳೂರು: ಕಾಫಿನಾಡಿನ ತುಡುಕೂರು ಗ್ರಾಮದಲ್ಲಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ ತಡರಾತ್ರಿ ನಡೆದ ಮಕ್ಕಳ ಗಲಾಟೆ ಸದ್ಯ ದೊಡ್ಡ ಆತಂಕಕ್ಕೆ ಕಾರಣವಾಗಿದೆ. ಶಾಲೆಯಲ್ಲಿ ಮಕ್ಕಳ ನಡುವೆ ಉಂಟಾದ ಜಗಳದಿಂದ...

Related Articles

ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್ ವಿರುದ್ಧ ಆಯೋಗದ ತೀರ್ಪು

ಚಿಕ್ಕಮಗಳೂರು: ಸಕಾಲದಲ್ಲಿ ಆಹಾರ ಪದಾರ್ಥವನ್ನು ತಲುಪಿಸದೆ ಆಹಾರ ಸಾಮಗ್ರಿಗಳು ಹಾಳಾಗಲು ಕಾರಣವಾದ ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್...

ಮುತ್ತೋಡಿ ಅರಣ್ಯದಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಚಿರತೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ದ ಮುತ್ತೋಡಿ ಅರಣ್ಯ ವಲಯದಲ್ಲಿ ಪ್ರವಾಸಿಗರಿಗೆ ಅತ್ಯಂತ ಅಪರೂಪದ ಹಾಗೂ ರೋಮಾಂಚನಕಾರಿ ದೃಶ್ಯವೊಂದು...

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ...