Home Latest News ಕಿಡಿಗೇಡಿಗಳಿಂದ ದತ್ತಪೀಠ ಕುಂಕುಮ ವಿಷಯ ಮತ್ತೆ ಮತ್ತೆ ಪ್ರಸ್ತಾಪ : ವಿಶ್ವ ಹಿಂದು ಪರಿಷತ್ ಆಕ್ರೋಶ
Latest News

ಕಿಡಿಗೇಡಿಗಳಿಂದ ದತ್ತಪೀಠ ಕುಂಕುಮ ವಿಷಯ ಮತ್ತೆ ಮತ್ತೆ ಪ್ರಸ್ತಾಪ : ವಿಶ್ವ ಹಿಂದು ಪರಿಷತ್ ಆಕ್ರೋಶ

Share
Share

ಚಿಕ್ಕಮಗಳೂರು : ದತ್ತಪೀಠದಲ್ಲಿ ಕುಂಕುಮ ಹಾಕಿರುವ ಪ್ರಕರಣವನ್ನು ಮತ್ತೆ ಮತ್ತೆ ಪ್ರಸ್ತಾಪಿಸುವ ಮೂಲಕ ದತ್ತ ಜಯಂತಿ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ಅಶಾಂತಿ ಮತ್ತು ಗೊಂದಲ ಸೃಷ್ಟಿಸಲು ಕಿಡಿಗೇಡಿಗಳು ಪ್ರಯತ್ನಿಸುತ್ತಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಟಿ ರಂಗನಾಥ್ ಆರೋಪಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಕೃತ ಮನಸ್ಥಿತಿಯ ಕೆಲವರು ಪದೇ ಪದೇ ಪತ್ರಿಕೆಗಳಲ್ಲಿ ಹೇಳಿಕೆ ನೀಡುವ ಮೂಲಕ ದತ್ತ ಪೀಠದಲ್ಲಿ ನಡೆಯುತ್ತಿರುವ ಪೂಜಾ ಕೈಂಕರ್ಯಗಳಿಗೆ ಅಡ್ಡಿಪಡಿಸುವ ಮತ್ತು ಅರ್ಚಕರಿಗೆ ಬೆದರಿಸುವ ಮೂಲಕ ವಾದಂತಿ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಈ ಕಿಡಿಗೇಡಿಗಳ ವಿರುದ್ಧ ಜಿಲ್ಲಾಡಳಿತ ಮತ್ತು ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

ನ್ಯಾಯಾಲಯದ ಆದೇಶದಂತೆ ದತ್ತಪೀಠದಲ್ಲಿ ತ್ರಿಕಾಲ ಪೂಜೆಗೆ ಅವಕಾಶ ಕಲ್ಪಿಸಲಾಗಿದ್ದು, ಹಿಂದೂ ಪೂಜಾ ಪದ್ದತಿಯಂತೆ ನಿತ್ಯ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದೆ ಆದರೆ ಜ್ಞಾನವಿಲ್ಲದ ವ್ಯಕ್ತಿಗಳು ಕೋಮು ಭಾವನೆ ಕೆರಳಿಸಲು ಯತ್ನಿಸುತ್ತಿದ್ದಾರೆ ಇದನ್ನು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸಹಿಸುವುದಿಲ್ಲ. ಆಗಮ ಶಾಸ್ತ್ರದ ಪ್ರಕಾರ ಅರ್ಚಕರು ತ್ರಿಕಾಲ ಪೂಜೆ ಮಾಡುತ್ತಿದ್ದಾರೆ. ಕೆಲವು ಕಿಡಿಗೇಡಿಗಳು ಮಾಡಿರುವ ಆರೋಪ ಬರೀ ಸುಳ್ಳಿನ ಕಂತೆಯಾಗಿದ್ದು, ಇದು ವಕ್ಫ್ ಬೋರ್ಡ್ ಆಸ್ತಿಯಲ್ಲ, ಮುಜರಾಯಿ ಆಸ್ತಿಯಾಗಿದೆ. ಶಾಖಾದ್ರಿ ವಂಶಸ್ಥರು ಎಂದು ಹೇಳಿಕೊಂಡು ಕೆಲವರು ಪ್ರತಿಭಟನೆ ಜಿಲ್ಲಾ ಆಡಳಿತಕ್ಕೆ ಮನವಿ ಹಾಗೂ ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಇದೇ ವೇಳೆ ಮಾತನಾಡಿದ ರಂಗನಾಥ್, ದತ್ತ ಜಯಂತಿ ಸುಗಮವಾಗಿ ಹಾಗೂ ಶಾಂತಿಯುತವಾಗಿ ನಡೆಸಲು ಹಿಂದೂ ಸಂಘಟನೆಗಳು ಇಚ್ಚಿಸಿದ್ದು ಯಾವುದೇ ಈ ರೀತಿಯ ವದಂತಿಗಳಿಗೆ ಕಿವಿಗೊಡಬಾರದು ಎಂದು ಅವರು ಮನವಿ ಮಾಡಿದರು.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...