Home namma chikmagalur ಕೃಷಿ ಪರಿಕರ ಸಂಘದಿಂದ ಯೋಧ-ರೈತರು-ವಿದ್ಯಾರ್ಥಿಗಳಿಗೆ ಸನ್ಮಾನ
namma chikmagalurchikamagalurHomeLatest News

ಕೃಷಿ ಪರಿಕರ ಸಂಘದಿಂದ ಯೋಧ-ರೈತರು-ವಿದ್ಯಾರ್ಥಿಗಳಿಗೆ ಸನ್ಮಾನ

Share
Share

ಚಿಕ್ಕಮಗಳೂರು: ಜಯನಗರ ಬಡಾವಣೆಯ ಜಿಲ್ಲಾ ಕೃಷಿ ಪರಿಕರ ಮಾರಾಟಗಾರರ ಸ ಂಘದ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಿವೃತ್ತ ವೀರಯೋಧರು, ರೈತರು ಮತ್ತು ವಿದ್ಯಾರ್ಥಿ ಗಳಿಗೆ ಗೌರವಿಸುವ ಮೂಲಕ ಸ್ವಾತಂತ್ರ್ಯೋತ್ಸವವನ್ನು ಈಚೆಗೆ ಆಚರಿಸಿಕೊಂಡರು.

ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಯೋಗೀಶ್ ದೇಶದ ರಕ್ಷಣೆಗಾಗಿ ಪ್ರಾಣವನ್ನು ಲೆಕ್ಕಿಸದೇ ಗಡಿಯಲ್ಲಿ ನಮ್ಮ ಕಾಪಾಡುತ್ತಿರುವ ಯೋಧರಿಗೆ ದೊಡ್ಡ ನಮನ. ಅವರಿಂದಲೇ ಜನಸಾಮಾನ್ಯರು ನೆಮ್ಮದಿ, ಸಂತೋಷದಿಂದ ಜೀವನ ಸಾಗಿಸಲು ಸಾಧ್ಯವಾಗಿದೆ ಎಂದು ತಿಳಿಸಿದರು.

ದೇಶದ ಬೆನ್ನಲುಬು ರೈತರಿಂದಾಗಿ ಜನತೆ ಹಸಿನಿಂದ ಬಳಲದೇ ಹೊಟ್ಟೆತುಂಬಾ ಆಹಾರ ಸೇವಿಸಲು ಕಾರಣವಾಗಿದೆ. ರೈತರು ಮತ್ತು ಯೋಧರು ರಾಷ್ಟ್ರದ ಬಹುದೊಡ್ಡ ಸಂಪತ್ತು. ಈ ಮಹಾನೀಯರಿಂದಲೇ ದೇಶವು ಸುಭೀಕ್ಷವಾಗಿ ಮುಂದುವರೆಯಲು ಸಾಧ್ಯವಾಗಿದೆ ಎಂದರು.

ಆ ನಿಟ್ಟಿನಲ್ಲಿ ವೀರ ಯೋಧರು, ದೇಶಕ್ಕೆ ಅನ್ನ ನೀಡುವ ರೈತರು ಹಾಗೂ ಭವಿಷ್ಯದ ಸತ್ಪ್ರಜೆಗಳಾದ ವಿ ದ್ಯಾರ್ಥಿಗಳಿಗೆ ಗೌರವಿಸಲಾಗಿದೆ ಎಂದರು. ಇದೇ ವೇಳೆ ಸಂಘದ ಕಟ್ಟಡದಲ್ಲಿ ಅಧ್ಯಕ್ಷರು ೭೯ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಜಿಲ್ಲೆ ಜಂಟಿ ಕೃಷಿ ನಿರ್ದೇಶಕಿ ಹೆಚ್.ಎಲ್. ಸುಜಾತ ಸಂಘದ ಹಿರಿಯ ಉಪಾ ಧ್ಯಕ್ಷರಾದ ಉದಯ್ ಪೈ, ಟಿ.ಡಿ.ತಿಮ್ಮಯ್ಯ, ಪ್ರಧಾನ ಕಾರ್ಯದರ್ಶಿ ಜಿ.ಸಿ.ಮನುಪ, ಖಜಾಂಚಿ ಶ್ರೀಕಾಂತ್ ಶೆಟ್ಟಿ, ತಾಲ್ಲೂಕು ಸಂಘದ ಕಾರ್ಯದರ್ಶಿಗಳಾದ ಶಂಕರ್‌ಮೂರ್ತಿ, ಗೌತಮ್‌ಪ್ರಭು, ಆನಂದ್, ಅಜ್ಜಂಪುರ ಆಶೋಕ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Agricultural Equipment Association felicitates soldiers farmers and students

 

Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಸ್ಥಾಪನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಶನ್ ಸ್ಥಾಪಿಸಿದ್ದು, ಮುಂದಿನ ದಿನಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ...

ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ

ಚಿಕ್ಕಮಗಳೂರು: ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ...

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ವಶ

ಚಿಕ್ಕಮಗಳೂರು : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಕೆಎಂ ರಸ್ತೆಯ...

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ...